21-14 ಅಡಿ ಉದ್ದಗಲದ ತ್ರಿವರ್ಣ ಧ್ವಜ ಪ್ರದರ್ಶನ


Team Udayavani, Aug 13, 2017, 11:59 AM IST

hub4.jpg

ಹುಬ್ಬಳ್ಳಿ: ನಗರದ ಕೇಶ್ವಾಪುರ ಮಯೂರಿ ಎಸ್ಟೇಟ್‌ ನ ಚಿನ್ಮಯ ಶಾಲೆಯ ವಿದ್ಯಾರ್ಥಿಗಳು 21 ಅಡಿ ಉದ್ದ ಮತ್ತು 14 ಅಡಿ ಅಗಲದ ರಾಷ್ಟ್ರಧ್ವಜದೊಂದಿಗೆ ನಗರದ ಪ್ರಮುಖ ಮಾರ್ಗಗಳಲ್ಲಿ ಪಥಸಂಚಲನ ಮಾಡುವ ಮೂಲಕ ಜನರಲ್ಲಿ ತ್ರಿವರ್ಣ ಧ್ವಜದ ಮಹತ್ವ ಹಾಗೂ ರಾಷ್ಟ್ರಾಭಿಮಾನದ ಸಂದೇಶ ಸಾರಿದರು. 

ಇಲ್ಲಿನ ಕೇಶ್ವಾಪುರದ ಮಯೂರಿ ಎಸ್ಟೇಟ್‌ನ ಚಿನ್ಮಯ ಕಾಲೇಜಿನ ಆವರಣದಲ್ಲಿ ಸ್ವಾತಂತ್ರ್ಯೋತ್ಸವ ನಿಮಿತ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಹಮ್‌ ಭಾರತಿ ಫೌಂಡೇಶನ್‌ ಹಾಗೂ ಚಿನ್ಮಯ ಪಿಯು ಮತ್ತು ಪದವಿ ಮಹಾವಿದ್ಯಾಲಯ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ತ್ರಿವರ್ಣ ಧ್ವಜದ ಪಥಸಂಚಲನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್‌.ಕೆ. ರಂಗಣ್ಣವರ ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರಕ್ಕಾಗಿ ಮಹಾತ್ಮಾ ಗಾಂಧೀಜಿ, ಸುಭಾಷಚಂದ್ರ ಬೋಸ್‌, ರಾಜಗುರು, ಭಗತಸಿಂಗ್‌ ಸೇರಿದಂತೆ ಅನೇಕ ಮಹನೀಯರು ನಿರಂತರವಾಗಿ ಹೋರಾಡಿದರು. ಅದರ ಫಲವಾಗಿ ದೇಶವು ಸ್ವಾತಂತ್ರಗೊಂಡಿತು.

ಅವರು ಕಷ್ಟಪಟ್ಟು ನಿರ್ಮಿಸಿದ ಭಾರತವೆಂಬ ಭವ್ಯ ಅರಮನೆಯಲ್ಲಿ ನಾವು ಬದುಕುತ್ತಿದ್ದೇವೆ ಎಂಬುದನ್ನು ಯಾರೂ ಮರೆಯಬಾರದು. ಯುವಶಕ್ತಿಯನ್ನು ಸಮರ್ಪಕ ವಾಗಿ ಬಳಸಿಕೊಳ್ಳುವ ಬದಲು ಅವರನ್ನು ಬೀದಿಗೆ ತರುತ್ತಿದ್ದೇವೆ. ಶಾಂತಿ ಕದಡುತ್ತಿದ್ದೇವೆ. ಆಡಳಿತ ವ್ಯವಸ್ಥೆ ಹಾಳು ಮಾಡುತ್ತಿದ್ದೇವೆ. ಯುವ ಜನಾಂಗವೇ ದೇಶದ ಭವಿಷ್ಯವಾಗಿದ್ದು, ಅವರಲ್ಲಿನ ಸುಪ್ತ ಪ್ರತಿಭೆಯನ್ನು ನಾವೆಲ್ಲ ಹೊಡೆದೆಬ್ಬಿಸಬೇಕಾಗಿದೆ ಎಂದರು.

ಭಾರತವು ಯುವ ಸಂಘಟನೆ ಕಟ್ಟಿ ತನ್ನ ಶಕ್ತಿಸಾಮರ್ಥ್ಯ ಬೆಳೆಸಬೇಕಾಗಿದೆ. ದೇಶದ ತ್ರಿವರ್ಣ ಧ್ವಜವು ನಮ್ಮ ಕೈಯಲ್ಲಿ ಮೆರೆಯದೆ ಹೃದಯದಲ್ಲಿ ಮೆರೆಯುವಂತಾಗಬೇಕು ಎಂದರು. ಹಮ್‌ ಭಾರತಿ ಫೌಂಡೇಶನ್‌ ಅಧ್ಯಕ್ಷ ಅನ್ವರ್‌ ಮುಲ್ಲಾ, ಕಾಲೇಜಿನ ಪ್ರಾಂಶುಪಾಲ ರಜನಿ ತುಂಗಲ ಇದ್ದರು. 

ಪಥ ಸಂಚಲನ: ಗೋಪನಕೊಪ್ಪದ ಶ್ರೀ ಮಲ್ಲಿಕಾರ್ಜುನ ಅಲೆಮಾರಿ ಕಲಾತಂಡದ ತೊದಲು ಗೊಂಬೆಗಳು, ಜಗ್ಗಲಿಗೆ ಮೇಳ, ಸಂಬಾಳ ವಾದನ, ಬ್ಯಾಂಡ್‌ಬಾಜಾಗಳು ಪಥ ಸಂಚಲನದಲ್ಲಿ ಗಮನ ಸೆಳೆದವು. ಬೃಹತ್‌ ರಾಷ್ಟ್ರಧ್ವಜದೊಂದಿಗೆ ಕಾಲೇಜಿನಿಂದ ಆರಂಭವಾದ ಪಥಸಂಚಲನ ಮಯೂರಿ ಎಸ್ಟೇಟ್‌, ಭವಾನಿ ನಗರ, ರಮೇಶ ಭವನ, ಕೇಶ್ವಾಪುರ, ಸರ್ವೋದಯ ವೃತ್ತ, ದೇಸಾಯಿ ವೃತ್ತ, ಕೋರ್ಟ್‌ ವೃತ್ತ ಮಾರ್ಗವಾಗಿ ಚೆನ್ನಮ್ಮ ವೃತ್ತ ತಲುಪಿ ಧ್ವಜ ಪ್ರದರ್ಶನದೊಂದಿಗೆ ಮುಕ್ತಾಯವಾಯಿತು. ಚಿನ್ಮಯ ಶಾಲಾ- ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕ ವೃಂದ ಮೊದಲಾದವರು ಪಾಲ್ಗೊಂಡಿದ್ದರು.   

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.