15ರಿಂದ ಕ್ಷಯ ಪತ್ತೆ-ಚಿಕಿತ್ಸಾ ಆಂದೋಲನ

•ರೋಗಿಗಳಿಗೆ ಪೌಷ್ಟಿಕ ಆಹಾರಕ್ಕೆ ಮಾಸಿಕ 500 ರೂ.•ಖಾಸಗಿ ವೈದ್ಯರಲ್ಲಿ ಚಿಕಿತ್ಸೆ ಪಡೆದರೂ ನೆರವು

Team Udayavani, Jul 2, 2019, 1:55 PM IST

hubali-tdy-5..

ಧಾರವಾಡ: ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಮನ್ವಯ ಸಮಿತಿ ಸಭೆಯಲ್ಲಿ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

ಧಾರವಾಡ: ಜಿಲ್ಲೆಯಲ್ಲಿ ಜು. 15ರಿಂದ 27ರ ವರೆಗೆ ಉಚಿತವಾಗಿ ಸಕ್ರಿಯ ಕ್ಷಯರೋಗ ಪತ್ತೆ ಹಾಗೂ ಚಿಕಿತ್ಸಾ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಹೇಳಿದರು.

ಜಿಪಂ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಮನ್ವಯ ಸಮಿತಿ ಸಭೆ ಜರುಗಿಸಿ ಅವರು ಮಾತನಾಡಿದರು. ನಿಕ್ಷಮ ಪೋಷಣೆ ಯೋಜನೆಯಡಿ ಕ್ಷಯರೋಗಿಗಳು ಪೌಷ್ಟಿಕ ಆಹಾರ ಪಡೆಯಲು ಅನುಕೂಲವಾಗುವಂತೆ ಪ್ರತಿ ತಿಂಗಳು 500 ರೂ. ನೆರವನ್ನು ಚಿಕಿತ್ಸೆ ಮುಗಿಯುವವರೆಗೆ ನೀಡಲಾಗುತ್ತದೆ. ಅಲ್ಲದೆ ಖಾಸಗಿ ವೈದ್ಯರು ಕ್ಷಯ ರೋಗಿ ಕುರಿತು ಆರೋಗ್ಯ ಇಲಾಖೆಗೆ ವರದಿ ನೀಡಿದರೆ 500 ರೂ. ಹಾಗೂ ಚಿಕಿತ್ಸೆ ಪೂರ್ಣಗೊಳಿಸಿದರೆ 500 ರೂ.ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ತನುಜಾ ಕೆ.ಎನ್‌. ಮಾತನಾಡಿ, 2018ರ ಜನವರಿಯಿಂದ ಡಿಸೆಂಬರ್‌ವರೆಗೆ ಜಿಲ್ಲೆಯಲ್ಲಿ 3412 ಕ್ಷಯ ರೋಗಿಗಳನ್ನು ಪತ್ತೆ ಮಾಡಲಾಗಿದೆ. ಅದರಲ್ಲಿ 2686 ಜನರಿಗೆ ಚಿಕಿತ್ಸೆ ನೀಡಲಾಗಿದ್ದು, ಉಳಿದವರು ಬೇರೆ ಜಿಲ್ಲೆಗಳಿಂದ ವಲಸೆ ಹಾಗೂ ಇತರೆ ಕಾರಣಗಳಿಂದ ಬಂದಿದ್ದರಿಂದ ಪ್ರಾಥಮಿಕ ಚಿಕಿತ್ಸೆ, ಉಚಿತ ಔಷಧ ನೀಡಿ ತಮ್ಮ ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.

2019ರ ಜನವರಿಯಿಂದ ಜೂನ್‌ ಅಂತ್ಯದವರೆಗೆ ಹೊಸದಾಗಿ 1289 ಕ್ಷಯ ರೋಗಿಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 1154 ಜನರಿಗೆ ಚಿಕಿತ್ಸೆ, ಔಷಧಿ ನೀಡಲಾಗುತ್ತಿದೆ. ಉಳಿದವರನ್ನು ಪರೀಕ್ಷಿಸಿ ಸೂಕ್ತ ಚಿಕಿತ್ಸೆ ನೀಡಲು ಕ್ರಮ ಜರುಗಿಸಲಾಗಿದೆ ಎಂದು ವಿವರಿಸಿದರು.

ಪ್ರಸಕ್ತ ಅಭಿಯಾನದಲ್ಲಿ ಸುಮಾರು 3,24,233 ಜನರನ್ನು ಕ್ಷಯ ರೋಗ ತಪಾಸಣೆಗೆ ಒಳಪಡಿಸುವ ಗುರಿ ಹೊಂದಲಾಗಿದೆ. ಪ್ರತಿ ತಂಡಕ್ಕೆ ಇಬ್ಬರಂತೆ ಒಟ್ಟು 239 ಆರೋಗ್ಯ ಕಾರ್ಯಕರ್ತರ ತಂಡಗಳನ್ನು ರಚಿಸಲಾಗಿದೆ. ಅವರು ಕೊಳಚೆ ಪ್ರದೇಶ, ಜನವಸತಿ, ಕೈಗಾರಿಕಾ ವಲಯ ಹಾಗೂ ದುರ್ಬಲ ವರ್ಗದ ಜನವಸತಿ ಪ್ರದೇಶಗಳು ಸೇರಿದಂತೆ ವಿವಿಧೆಡೆ ಭೇಟಿ ನೀಡಿ, ಕ್ಷಯ ರೋಗದ ಬಗ್ಗೆ ಜನಜಾಗೃತಿ ಮಾಡಿ ಚಿಕಿತ್ಸೆ ನೀಡಿ, ಔಷಧಿ ವಿತರಿಸಲಿದ್ದಾರೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಜೇಂದ್ರ ದೊಡ್ಡಮನಿ, ಆರ್‌ಸಿಎಚ್ ಡಾ| ಪುಷ್ಪಾ ಎಚ್.ಆರ್‌., ಔಷಧ ನಿಯಂತ್ರಣಾಧಿಕಾರಿ ಅಜಯ ಮುದಗಲ್, ಜಿಲ್ಲಾಸ್ಪತ್ರೆಯ ಡಾ| ಸಂಗಪ್ಪ ಗಾಬಿ, ಡಿಡಿಪಿಐ ಗಜಾನನ ಮನ್ನಿಕೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಬಸವರಾಜ ವರವಟ್ಟಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ಶಶಿ ಪಾಟೀಲ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಸುಜಾತಾ ಹಸವಿಮಠ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ| ಶಿವಕುಮಾರ ಮಾನಕರ‌, ಕುಟುಂಬ ಕಲ್ಯಾಣಾಧಿಕಾರಿ ಡಾ| ಎಸ್‌.ಬಿ. ನಿಂಬಣ್ಣವರ ಇನ್ನಿತರರಿದ್ದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.