ಹೆತ್ತವರ ಮಡಿಲು ಸೇರಿದ ಸಹೋದರಿಯರು
Team Udayavani, May 10, 2020, 10:30 AM IST
ಧಾರವಾಡ: ಲಾಕ್ಡೌನ್ ಜಾರಿಯಿಂದಾಗಿ ದೂರದ ರಾಜಸ್ಥಾನದಲ್ಲಿದ್ದ ತಮ್ಮ ಪಾಲಕರನ್ನು ಸೇರಲಾಗದೇ ಆತಂಕಕ್ಕೀಡಾಗಿದ್ದ ರೋಮುಕುಮಾರಿ ಮತ್ತು ಪೋಸುಕುಮಾರಿ ಎಂಬ ಇಬ್ಬರು ಮಕ್ಕಳು ಶುಕ್ರವಾರ ರಾತ್ರಿ ರಾಜಸ್ಥಾನದ ಸಿರೋಹಿ ಜಿಲ್ಲೆಯ ಮೆಮಂಡ್ವಾರ ಗ್ರಾಮದಲ್ಲಿರುವ ತಮ್ಮ ಹೆತ್ತ ತಂದೆ-ತಾಯಿಗಳ ಮಡಿಲು ಸೇರಿದ್ದಾರೆ.
ಕಳೆದ ಐವತ್ತು ದಿನಗಳಿಂದ ಹೆತ್ತವರಿಂದ ಅಗಲಿದ್ದ ಈ ಮಕ್ಕಳನ್ನು ಅವರ ಪಾಲಕರೊಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್, ಹುಬ್ಬಳ್ಳಿ ಶಹರ ತಹಶೀಲ್ದಾರ್ ಶಶಿಧರ ಮಾಡ್ಯಾಳ ಸೇರಿದಂತೆ ಹಲವರು ವಿಶೇಷ ಪ್ರಯತ್ನ ಮಾಡಿದ್ದರು. ಮೇ 7ರಂದು ಜಿಲ್ಲಾಧಿಕಾರಿಗಳು ಶುಭ ಹಾರೈಸಿ ಮಕ್ಕಳನ್ನು ಬೀಳ್ಕೊಟ್ಟಿದ್ದರು. ರಮೇಶ್ ರಾವಲ್ ಅವರು ತಮ್ಮ ಸ್ವಂತ ಕಾರನ್ನು ಸ್ವತಃ ಚಾಲನೆ ಮಾಡಿಕೊಂಡು ದೂರದ ರಾಜಸ್ಥಾನವರೆಗೆ ಹೋಗಿ ಮಕ್ಕಳನ್ನು ಅವರು ಪಾಲಕರಿಗೆ ತಲುಪಿಸಿದ್ದಾರೆ. ಮಕ್ಕಳು ತಲುಪಿರುವ ಕುರಿತು ರಾಜಸ್ಥಾನದ ಸಿರೋಹಿ ಜಿಲ್ಲಾಧಿಕಾರಿ ಭಗವತಿ ಪ್ರಸಾದ ಅವರು ಧಾರವಾಡ ಜಿಲ್ಲಾಧಿಕಾರಿಗೆ ಲಿಖೀತ ಪತ್ರ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ