ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆ
Team Udayavani, Jul 8, 2020, 1:27 PM IST
ಧಾರವಾಡ: ಇಲ್ಲಿಯ ಸವದತ್ತಿ ರಸ್ತೆ ಬಳಿಯ 8 ಎಕರೆ ಜಾಗದಲ್ಲಿ ನಿರ್ಮಿಸಿದ್ದ ಅನಧಿಕೃತ ಲೇಔಟ್ಗಳನ್ನು ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ಅವರ ನೇತೃತ್ವದಲ್ಲಿ ಮಂಗಳವಾರ ತೆರವು ಮಾಡಲಾಯಿತು.
ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದ ಪರವಾನಗಿ ಪಡೆಯದೇ ನಿವೇಶನಗಳನ್ನು ಅಭಿವೃದ್ಧಿ ಪಡಿಸಿದ ಹಿನ್ನೆಲೆಯಲ್ಲಿ ಸಂಬಂಧಪಟ್ಟವರಿಗೆ ಹುಡಾ ವತಿಯಿಂದ 2 ಬಾರಿ ನೋಟಿಸ್ ನೀಡಲಾಗಿತ್ತು. ಆದರೆ ನೋಟಿಸ್ ಗೆ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ನಿವೇಶನಗಳಲ್ಲಿ ಹಾಕಿದ್ದ ಕಲ್ಲು, ರಸ್ತೆಗಳು ಹಾಗೂ ನೀರಿನ ಪೈಪ್ಗ್ಳನ್ನು ಜೆಸಿಬಿ ಮೂಲಕ ಧ್ವಂಸಗೊಳಿಸಲಾಯಿತು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಹುಡಾ ಅಧ್ಯಕ್ಷ ನಾಗೇಶ ಕಲುºರ್ಗಿ, ಹು-ಧಾ ಅವಳಿನಗರದಲ್ಲಿ ಸದ್ಯ 57 ಅನಧಿಕೃತ ಲೇಔಟ್ಗಳನ್ನು ಗುರುತಿಸಲಾಗಿದ್ದು, ಇನ್ನೂ ನೂರಾರು ಲೇಔಟ್ ಗಳಿದ್ದು, ಅವುಗಳ ಪತ್ತೆ ಕಾರ್ಯ ಸಾಗಿದೆ. ಅನಧಿಕೃತ ಲೇಔಟ್ಗಳನ್ನು ಅಧಿಕೃತ ಮಾಡಿಕೊಳ್ಳಲು ಸಮಯ ನೀಡಲಾಗಿದೆ ಎಂದರು.
ಅನಧಿಕೃತ ಲೇಔಟ್ಗಳಿಗೆ ಬಡ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ಬಲಿಪಶು ಆಗುತ್ತಿದ್ದು, ಹೀಗಾಗಿ ಅದನ್ನು ತಡೆಯುವ ನಿಟ್ಟಿನಲ್ಲಿ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ. ತೆರವು ಕಾರ್ಯಾಚರಣೆಗೆ ಅನೇಕರು ತಡೆಯೊಡ್ಡುತ್ತಿದ್ದು, ಯಾವುದಕ್ಕೂ ಬಗ್ಗದೆ ನಿರಂತರವಾಗಿ ತೆರವು ನಡೆಸಲಾಗುವುದು. ಧಾರವಾಡದಲ್ಲಿ ಇನ್ನೂ ಒಂದು ವಾರ ಕಾಲ ಕಾರ್ಯಾಚರಣೆ ಸಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ