ಭೂಗತ ವಿದ್ಯುತ್‌ ಕೇಬಲ್‌ ಯೋಜನೆ ಪ್ರಸ್ತಾವನೆ

ಹೆಸ್ಕಾಂ ಸಹಯೋಗದಲ್ಲಿ ವಿದ್ಯುತ್‌ ಮಹೋತ್ಸವ ; ರೈತರ ಪಂಪ್‌ಸೆಟ್‌ಗಳ ಸಮಸ್ಯೆಗೆ ತ್ವರಿತ ಸ್ಪಂದನೆ: ಬೆಲ್ಲದ

Team Udayavani, Jul 30, 2022, 3:58 PM IST

15

ಧಾರವಾಡ: ಹು-ಧಾ ಭೂ ಅಂತರ್ಗತ ವಿದ್ಯುತ್‌ ಕೇಬಲ್‌ ಅಳವಡಿಸುವ ಯೋಜನೆಯ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸರ್ಕಾರ ಅಗತ್ಯ ಅನುದಾನ ನೀಡಲಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ಕವಿಸಂನಲ್ಲಿ ಭಾರತ ಸರ್ಕಾರದ ವಿದ್ಯುತ್‌ ಸಚಿವಾಲಯ, ಇಂಧನ ಇಲಾಖೆ, ಜಿಲ್ಲಾಡಳಿತ, ಕರ್ನಾಟಕ ವಿದ್ಯುತ್ಛಕ್ತಿ ಪ್ರಸರಣ ನಿಗಮ ನಿಯಮಿತ ಹಾಗೂ ಹೆಸ್ಕಾಂ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿದ್ಯುತ್‌ ಮಹೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ವಿದ್ಯುತ್‌ ಪರಿವರ್ತಕ ಬ್ಯಾಂಕುಗಳ ಸ್ಥಾಪನೆ ಮೂಲಕ ರೈತರ ಪಂಪ್‌ಸೆಟ್‌ಗಳ ಸಮಸ್ಯೆಗೆ ತ್ವರಿತ ಸ್ಪಂದನೆ ಸಾಧ್ಯವಾಗಿದೆ. ರಸ್ತೆ, ಒಳಚರಂಡಿ, ಮನೆ ಮನೆಗೆ ಕುಡಿಯುವ ನೀರು ಪೂರೈಸುವ ನಳಗಳ ಜೋಡಣೆ ಮೊದಲಾದ ಮೂಲ ಸೌಕರ್ಯಗಳ ಕಾರ್ಯ ದೇಶಾದ್ಯಂತ ಭರದಿಂದ ನಡೆಯುತ್ತಿವೆ. ಹೆಸ್ಕಾಂ ವ್ಯಾಪ್ತಿಯಲ್ಲಿ ಈವರೆಗೆ ವಿದ್ಯುತ್‌ ಸಂಪರ್ಕವೇ ಇಲ್ಲದಿದ್ದ 30 ಹಳ್ಳಿಗಳಿಗೆ ವಿದ್ಯುತ್‌ ಪೂರೈಸಲಾಗುತ್ತಿದೆ. ಸೌಭಾಗ್ಯ ಯೋಜನೆಯಡಿ ಹೆಚ್ಚು ದಾಖಲೆಗಳನ್ನು ಗ್ರಾಹಕರಿಂದ ಪಡೆಯದೇ ಆಧಾರ್‌ ಕಾರ್ಡ್‌ ಪಡೆದು ವಿದ್ಯುತ್‌ ಸಂಪರ್ಕ ಕಲ್ಪಿಸುವ ಕಾರ್ಯ ಜನ ಮನ್ನಣೆಗಳಿಸಿದೆ ಎಂದರು.

ಕಲ್ಲಿದ್ದಲು ಗಣಿಗಳ ಸಮರ್ಪಕ ಬಳಕೆಯಿಂದ ದೇಶದಲ್ಲಿ ವಿದ್ಯುತ್‌ ಸ್ವಾವಲಂಬನೆ ಸಾಧ್ಯವಾಗಿದೆ. ಕಲ್ಲಿದ್ದಲು ಗಣಿಗಳ ಹರಾಜಿನಲ್ಲಿ ನಡೆದ ಅಕ್ರಮ ತಡೆದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ವಿದ್ಯುತ್‌ ಸ್ವಾವಲಂಬಿಯಾಗಿಸಲು ಸಾಧ್ಯವಾಗಿದೆ. ದೇಶದಲ್ಲಿ ಹೇರಳವಾಗಿ ಕಲ್ಲಿದ್ದಲು ಸಂಪನ್ಮೂಲವಿದ್ದು, ಈ ನೈಸರ್ಗಿಕ ಸಂಪನ್ಮೂಲ ಬಳಸಿಕೊಂಡು ನೆರೆ ದೇಶಗಳಿಗೂ ವಿದ್ಯುತ್‌ ಸರಬರಾಜು ಮಾಡಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಭಾರತಿ ಡಿ. ಮಾತನಾಡಿ, ನೀರಾವರಿ ಪಂಪ್‌ಸೆಟ್‌ ಹೊಂದಿರುವ ರೈತರು ಎದುರಿಸುತ್ತಿದ್ದ ವಿದ್ಯುತ್‌ ಪರಿವರ್ತಕಗಳ ಸಮಸ್ಯೆ ನಿವಾರಿಸಲು ಟಿ.ಸಿ.ಬ್ಯಾಂಕ್‌ಗಳ ಮೂಲಕ ಕೃಷಿಕರಿಗೆ ತ್ವರಿತ ಸ್ಪಂದನೆ ನೀಡಲಾಗುತ್ತಿದೆ. ಗ್ರಾಮೀಣ ಭಾಗಕ್ಕೆ ಹೆಸ್ಕಾಂ ಅಧಿಕಾರಿಗಳು ಪ್ರತಿ ತಿಂಗಳು ಮೂರನೇ ಶನಿವಾರ ಭೇಟಿ ನೀಡಿ ವಿದ್ಯುತ್‌ ಅದಾಲತ್‌ ಮೂಲಕ ಜನಸ್ಪಂದನೆ ನೀಡಿ ಇಂಧನ ಇಲಾಖೆಯನ್ನು ಗ್ರಾಹಕ ಹಾಗೂ ಜನಸ್ನೇಹಿಯನ್ನಾಗಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದರು.

ಹೆಸ್ಕಾಂ ಅಧಿಕಾರೇತರ ನಿರ್ದೇಶಕ ಸುನೀಲ ಸರೂರ ಮಾತನಾಡಿದರು.

ಪ್ರಕಾಶ ಪಾಟೀಲ, ರಮೇಶ ಬೆಂಡಿಗೇರಿ, ಹೆಸ್ಕಾಂ ಪ್ರಧಾನ ವ್ಯವಸ್ಥಾಪಕ ವಿನಾಯಕ ಪಾಲನಕರ್‌, ವೆಂಕಟರೆಡ್ಡಿ, ವಿಚಕ್ಷಣಾ ದಳದ ಎಸ್‌.ಪಿ.ಶಂಕರ ಮಾರಿಹಾಳ ಇದ್ದರು.

ಕಿರುಚಿತ್ರಗಳ ಪ್ರದರ್ಶನ: ಗ್ರಾಮ ವಿದ್ಯುದೀಕರಣ, ಮನೆಗಳ ವಿದ್ಯುದೀಕರಣ ಜಾಗತಿಕ ಅವಕಾಶಗಳ ಕುರಿತು ಕಿರುಚಿತ್ರ; ಉತ್ಪಾದನೆ ಸಾಮರ್ಥ್ಯ ಹೆಚ್ಚಿಸುವುದು, ಒಂದೇ ರಾಷ್ಟ್ರ ಒಂದೇ ವಿದ್ಯುತ್‌ ಜಾಲ ಸಾಕ್ಷ್ಯಚಿತ್ರ ಪ್ರದರ್ಶನ; ವಿತರಣಾ ಜಾಲ ಬಲಪಡಿಸುವುದು, ನವೀಕರಿಸಬಹುದಾದ ಇಂಧನ ಉತ್ಪಾದನೆ, ಗ್ರಾಹಕರ ಹಕ್ಕುಗಳ ಕುರಿತು ಕಿರುಚಿತ್ರ ಪ್ರದರ್ಶನ; ವಿದ್ಯುತ್‌ ಉಳಿತಾಯ ಹಾಗೂ ಕುಸುಮ ಯೋಜನೆಗಳ ಬಗ್ಗೆ ನುಕ್ಕಡ ನಾಟಕಗಳ ಪ್ರದರ್ಶನ ಹಾಗೂ ಫಲಾನುಭವಿಗಳ ಅನಿಸಿಕೆಗಳು ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಟಾಪ್ ನ್ಯೂಸ್

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.