ಕರ್ನಾಟಕ ವಿಶ್ವವಿದ್ಯಾಲಯ; ವಾಟರ್‌ಮ್ಯಾನ್‌ ಮಗಳಿಗೆ 9 ಚಿನ್ನದ ಪದಕ

ಪೋಷಕರ ಕನಸು ನನಸು ಮಾಡಿರುವ ಮಗಳ ಸಾಧನೆಗೆ ಕುಟುಂಬದಲ್ಲಿ ಸಂತಸ ತಂದಿದೆ.

Team Udayavani, Jun 8, 2022, 5:52 PM IST

ಕರ್ನಾಟಕ ವಿಶ್ವವಿದ್ಯಾಲಯ; ವಾಟರ್‌ಮ್ಯಾನ್‌ ಮಗಳಿಗೆ 9 ಚಿನ್ನದ ಪದಕ

ಧಾರವಾಡ: ಗ್ರಾಮವೊಂದರಲ್ಲಿ ನೀರು ಸರಬರಾಜು ಕೆಲಸ ಮಾಡುವ ವ್ಯಕ್ತಿಯ ಮಗಳು ಇದೀಗ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಅತೀ ಹೆಚ್ಚು ಚಿನ್ನದ ಪದಕ ಪಡೆಯುವ ಮೂಲಕ ಗಮನ ಸೆಳೆದಿದ್ದು, ಇಡೀ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ.

ಕಲಘಟಗಿ ತಾಲೂಕಿನ ಸೂಳಿಕಟ್ಟಿ ಗ್ರಾಮದ ನಾಗೇಶ ಹಾಗೂ ಮಹಾದೇವಿ ದಂಪತಿಯ ದ್ವಿತೀಯ ಪುತ್ರಿ ಸುಜಾತಾ ಜೋಡಳ್ಳಿಯೇ ಈ ಸಾಧನೆ ಮಾಡಿದವಳು. ಕವಿವಿಯ ಗಾಂಧಿಭವನದಲ್ಲಿ ಜರುಗಿದ 72ನೇ ಘಟಿಕೋತ್ಸವದಲ್ಲಿ ಎಂಎ ಪತ್ರಿಕೋದ್ಯಮ ಪದವಿಯಲ್ಲಿ ಬರೋಬ್ಬರಿ 9 ಚಿನ್ನದ ಪದಕ ಪಡೆಯುವ ಮೂಲಕ ಚಿನ್ನದ ಹುಡುಗಿಯಾಗಿ ಹೊರಹೊಮ್ಮಿದ್ದಾಳೆ.

ಎರಡು ಎಕರೆ ಕೃಷಿಭೂಮಿ ಹೊಂದಿರುವ ನಾಗೇಶರಿಗೆ ನಾಲ್ಕು ಜನ ಮಕ್ಕಳು. ಈ ಪೈಕಿ ಮೂವರು ಹೆಣ್ಣು ಮಕ್ಕಳಲ್ಲಿ ಇಬ್ಬರನ್ನು ಈಗಾಗಲೇ ಮದುವೆ ಮಾಡಿಕೊಟ್ಟಿದ್ದಾರೆ. ಸೂಳಿಕಟ್ಟಿ ಗ್ರಾಪಂ ಡಿ ದರ್ಜೆ ನೌಕರರಾಗಿ ಗ್ರಾಮದಲ್ಲಿ ವಾಟರ್‌ ಮ್ಯಾನ್‌ ಆಗಿ ಕೆಲಸ ಮಾಡುತ್ತಿದ್ದು, ದ್ವಿತೀಯ ಪುತ್ರಿ ಸುಜಾತಾಳ ಕಲಿಯುವ ಕನಸುಗಳಿಗೆ ನೀರೆರೆದಿದ್ದಾರೆ. ಇಡೀ ಕುಟುಂಬದಲ್ಲಿ ಇಷ್ಟೊಂದು ಕಲಿತವರಿಲ್ಲ. ಈಗ ಸುಜಾತ ಚಿನ್ನದ ಪದಕ-ನಗದು ಪುರಸ್ಕಾರದ ಮೂಲಕ ಕುಟುಂಬ ಹಾಗೂ ಗ್ರಾಮಕ್ಕೆ ಹೆಮ್ಮೆ ತರುವಂತೆ ಮಾಡಿದ್ದಾಳೆ.

ಸುಜಾತಾ ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರವಾರ ಕಚೇರಿಯಲ್ಲಿ ಅಪ್ರಂಟಿಸ್‌ ಆಗಿ ತರಬೇತಿ ಪಡೆಯುತ್ತಿದ್ದಾರೆ. ಕೃಷಿ ಕುಟುಂಬದ ಮಗಳು: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಉಂಚಳ್ಳಿ(ಧರೆಮನೆ) ಗ್ರಾಮದ ವಿಶ್ವನಾಥ ಮತ್ತು ಗೀತಾ ಭಟ್‌ ಅವರದ್ದು ಕೃಷಿ ಕುಟುಂಬ. ಈ ಕುಟುಂಬದ ಅನುಜ್ಞಾ ಎಂಎಸ್ಸಿಯ ಜೀವರಸಾಯನ ಶಾಸ್ತ್ರ ವಿಷಯದಲ್ಲಿ ಅತಿ ಹೆಚ್ಚು ಅಂಕ ಗಳಿಸಿ, 8 ಚಿನ್ನದ ಪದಕ ಪಡೆದು ಗಮನ ಸೆಳೆದಿದ್ದಾರೆ. ಅನುಜ್ಞಾ ಮೊದಲಿನಿಂದಲೂ ಓದಿನಲ್ಲಿ ಸದಾ ಮುಂದಿದ್ದರು. 10ನೇ ತರಗತಿಯಲ್ಲಿ ಓದುವಾಗಲೇ ಅವರು ಜೀವರಸಾಯನಶಾಸ್ತ್ರದಲ್ಲಿ ಪದವಿ ಪಡೆಯಬೇಕು ಎಂಬ ಕನಸು ಹೊತ್ತಿದ್ದರು.

ಅದಕ್ಕೆ ಸಹಕಾರ ನೀಡಿದ ಪೋಷಕರ ಕನಸು ನನಸು ಮಾಡಿರುವ ಮಗಳ ಸಾಧನೆಗೆ ಕುಟುಂಬದಲ್ಲಿ ಸಂತಸ ತಂದಿದೆ. ಸದ್ಯ ಕೆಸೆಟ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅನುಜ್ಞಾ ಪ್ರಸ್ತುತ ಕವಿವಿಯಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ನೆಟ್‌ ಪರೀಕ್ಷೆ ಎದುರಿಸಿ, ಪ್ರೋಟಿನ್‌  ಜೀವರಸಾಯನಶಾಸ್ತ್ರ ವಿಷಯದಲ್ಲಿ ಪಿಎಚ್‌ಡಿ ಮಾಡುವ ಆಶಯ ವ್ಯಕ್ತಪಡಿಸಿದ್ದಾರೆ.

ಚಿನ್ನದ ಬೇಟೆ
ಕವಿವಿಯ 72ನೇ ಘಟಿಕೋತ್ಸವದಲ್ಲಿ 103 ವಿದ್ಯಾರ್ಥಿಗಳಿಗೆ 233 ಚಿನ್ನದ ಪದಕ ಪ್ರದಾನ ಮಾಡಲಾಗಿದ್ದು, ಇದರ ಜತೆಗೆ 42 ಪಾರಿತೋಷಕ, 76 ಶಿಷ್ಯವೇತನ, 67 ರ್‍ಯಾಂಕ್‌ ಗಳನ್ನು ನೀಡಲಾಗಿದೆ. ಈ ಪೈಕಿ ಎಂಎ ಕನ್ನಡದಲ್ಲಿ ಅಕ್ಕಮ್ಮಾ ಯಾದವಾಡ 7 ಚಿನ್ನದ ಪದಕ, ಎಂಎ ರಾಜಕೀಯ ವಿಜ್ಞಾನದಲ್ಲಿ ಮೇಘಾ ಹವಣಗಿ, ಎಂಎಸ್‌ಸಿ ಗಣಿತದಲ್ಲಿ ಸ್ವಾತಿ ಜೋಶಿ, ರಸಾಯನಶಾಸ್ತ್ರದಲ್ಲಿ ಸಹನಾ ನಾಗೇಶ ಶೇಟ್‌ ತಲಾ 6 ಚಿನ್ನದ ಪದಕ, ಎಂಎ ಇಂಗ್ಲಿಷ್‌ದಲ್ಲಿ ಮೈದಿನಿ ನಾಯಕ, ಅರ್ಥಶಾಸ್ತ್ರದಲ್ಲಿ ತೇಜಸ್ವಿನಿ ತಳವಾರ, ಎಂಎಸ್ಸಿ ಸಸ್ಯಶಾಸ್ತ್ರದಲ್ಲಿ ನಮ್ರತಾ ಉದಯ ಶೆಟ್ಟಿ, ಎಂಬಿಎ ವಿಭಾಗದಲ್ಲಿ ರಹೇಲಾ ಅಜುಮ್‌, ಎಲ್‌ಎಲ್‌ಬಿಯಲ್ಲಿ
ಅಖೀಲ್‌ ಬಿ.ಎಸ್‌. ತಲಾ 5 ಚಿನ್ನದ ಪದಕ, ಬಿಎಂಯಲ್ಲಿ ಜೋತಿ ಗೋನವಾರ, ಸುಧಾ ಎಂ. ತಲಾ 4 ಚಿನ್ನದ ಪದಕ ಪಡೆದಿದ್ದಾರೆ.

ವಾಟರ್‌ಮ್ಯಾನ್‌ ಆಗಿರುವ ತಂದೆ ಕಷ್ಟದ ದಿನಗಳಲ್ಲಿಯೂ ಅಧ್ಯಯನಕ್ಕೆ ಯಾವುದಕ್ಕೂ ಕೊರತೆ ಆಗದಂತೆ ಓದಿಸಿದ್ದಾರೆ. ಓದಿಗೆ ನೀರೆರೆದ ತಂದೆಯ ಹಿಂದಿನ ಶ್ರಮ ಹಾಗೂ ಕಷ್ಟಪಟ್ಟು ಅಧ್ಯಯನ ಮಾಡಿದ ಫಲದಿಂದ 9 ಚಿನ್ನದ ಪದಕ ಲಭಿಸಿದ್ದು, ಖುಷಿ ಕೊಟ್ಟಿದೆ. ಮುಂದಿನ ದಿನಗಳಲ್ಲಿ ಪಿಎಚ್‌ಡಿ
ಮಾಡಿ, ಮಾಧ್ಯಮ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುವ ಗುರಿ ಇದೆ.
*ಸುಜಾತಾ ಜೋಡಳ್ಳಿ, 9 ಚಿನ್ನದ ಪದಕ ವಿಜೇತೆ

ಚಿಕ್ಕೋಡಿ ತಾಲೂಕಿನ ಜಾಗನೂರು ನಮ್ಮೂರು. ತಂದೆ ರೈಲ್ವೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಪೋಷಕರ ಆಸೆಯಂತೆ ಈ ಸಾಧನೆ ಮಾಡಿದ್ದೇನೆ. ಈಗಾಗಲೇ ಕೆ-ಸೆಟ್‌, ಗೇಟ್‌ ಪರೀಕ್ಷೆ ಪಾಸಾಗಿದ್ದು, ಮುಂದೆ ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ಮಾಡುವ ಗುರಿ ಇದೆ. ಒಟ್ಟಿನಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಕೆಲಸ ಸಂಪಾದಿಸುವ ಇಚ್ಚೆ ಹೊಂದಿದ್ದೇನೆ.
*ಲಕ್ಷ್ಮಣ ಹಂಜಿ, 8 ಚಿನ್ನದ ಪದಕ ವಿಜೇತ, ಎಂಎಸ್ಸಿ ಪ್ರಾಣಿಶಾಸ

ಮನೆಯಲ್ಲಿ ತಾಯಿಯ ಸಹಕಾರ-ಉಪನ್ಯಾಸಕರ ಮಾರ್ಗದರ್ಶನ ಇತ್ತು. ಮುಂದಿನ ದಿನಗಳಲ್ಲಿ ಗ್ರಂಥಾಲಯ ಹಾಗೂ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಪಿಎಚ್‌ಡಿ ಮಾಡುತ್ತೇನೆ.
*ಪವಿತ್ರಾ ಗುಳ್ಳಣ್ಣವರ, ಬಾಗಲಕೋಟೆ,
8 ಚಿನ್ನದ ಪದಕ ವಿಜೇತೆ, ಲೈಬ್ರರಿ ಆ್ಯಂಡ್‌ ಇನ್ಫಾರ್ಮೇಷನ್‌ ಸೈನ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.