ಪ್ರವಾಸೋದ್ಯಮ ತಾಣವಾಗಿ ಉಣಕಲ್ಲ ಕೆರೆ ಅಭಿವೃದ್ಧಿ
Team Udayavani, Nov 17, 2019, 10:38 AM IST
ಹುಬ್ಬಳ್ಳಿ: ಸ್ಮಾರ್ಟ್ಸಿಟಿ ಯೋಜನೆಯಡಿ ಉಣಕಲ್ಲ ಕೆರೆಯನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.
ಹು-ಧಾ ಮಹಾನಗರ ಪಾಲಿಕೆ, ಉಣಕಲ್ಲ ಅಭಿವೃದ್ಧಿ ಸಂಘ, ದೇಶಪಾಂಡೆ ಫೌಂಡೇಶನ್, ಟಾಟಾ ಹಿಟಾಚಿ ಸಹಯೋಗದಲ್ಲಿ ಉಣಕಲ್ಲ ಕೆರೆಯ ಅಂತರಗಂಗೆ ಕಳೆ ಶುದ್ಧೀಕರಣ ಕಾರ್ಯಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಉಣಕಲ್ಲ ಕೆರೆ ಅಭಿವೃದ್ಧಿಗಾಗಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿ ನ. 18ರಂದು ಸಭೆ ನಡೆಸಿ ಕೆರೆಯ ಶಾಶ್ವತ ಹಾಗೂ ಸರ್ವಾಂಗೀಣ ಅಭಿವೃದ್ಧಿಗಾಗಿ ಯೋಜನೆ ರೂಪಿಸಲಿದೆ. ನಾಗರಿಕರು ಸಹ ತಮ್ಮ ಸಲಹೆಗಳನ್ನು ಸಮಿತಿಗೆ ನೀಡಬಹುದು. ಉಣಕಲ್ಲ ಅಭಿವೃದ್ಧಿ ಸಂಘದ ಯುವಕರ ಕಾರ್ಯ ಶ್ಲಾಘನೀಯ. ಕೆರೆಯಲ್ಲಿ ಬೆಳೆಯುವ ಅಂತರಗಂಗೆ ಕಳೆ ಪ್ರತಿವರ್ಷವು ಮರುಕಳಿಸುತ್ತದೆ. ಇದಕ್ಕೆ ಕೆರೆಗೆ ಸೇರುವ ಕೊಳಚೆ ನೀರು ಕಾರಣ. ಈಗಾಗಲೇ ಕೊಳಚೆ ನೀರನ್ನು ಶುದ್ಧೀಕರಿಸಿ ಕೆರೆಗೆ
ಬಿಡಲು ಶುದ್ಧೀಕರಣ ಘಟಕ ನಿರ್ಮಾಣ ಮಾಡಲಾಗುತ್ತಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಘಟಕ ಕಾರ್ಯಾರಂಭ ಮಾಡಲಿದೆ. ಕೆರೆಯ ಮಧ್ಯದ ವಿವೇಕಾನಂದರ ಪ್ರತಿಮೆಯ ಸ್ಥಳದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಬೋಟಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಯುವಕರು ನಡೆಸಿದ ಕಳೆ ತೆಗೆಯುವ ಕಾರ್ಯವನ್ನು ಸಚಿವರು ಸ್ವತಃ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಉಣಕಲ್ಲ ಕೆರೆಯ ಸುತ್ತಲಿನ ನಿವಾಸಿಗಳ ಸಮಸ್ಯೆ ಆಲಿಸಿ, ಮಹಾಮಳೆಗೆ ಕೊಚ್ಚಿಹೋದ ಸೇತುವೆಗಳ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ಎರಡು ತಿಂಗಳೊಳಗಾಗಿ ಸೇತುವೆಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ದೀಪಾ ಚೋಳನ್, ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ದೇಶಪಾಂಡೆ ಫೌಂಡೇಷನ್ ಸಿಇಒ ವಿವೇಕ ಪವಾರ, ಟಾಟಾ ಹಿಟಾಚಿಯ ಪ್ರಸನ್ನ ದೀಕ್ಷಿತ, ಅಜಿತ ಕುಲಕರ್ಣಿ, ಉಣಕಲ್ಲ ಅಭಿವೃದ್ಧಿ ಸಂಘದ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
MUST WATCH
ಹೊಸ ಸೇರ್ಪಡೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್