ರಸಗೊಬ್ಬರ ಅನ್‌ಲೋಡ್‌ಗೆ ಕಾರ್ಮಿಕರ ಬರ

9 ಜಿಲ್ಲೆಗಳಿಗೆ ಪೂರೈಕೆ ವಿಳಂಬ,­ಕೆಲಸಗಾರರ ಓಡಾಟಕ್ಕೆ ಸಮಸ್ಯೆ, ­ಡೆಮ್ರೇಜ್‌-ವಾರ್ಪೇಜ್‌ ಶುಲ್ಕದ ಹೊರೆ

Team Udayavani, Jun 1, 2021, 6:27 PM IST

31hub-32a

ಹೇಮರಡ್ಡಿ ಸೈದಾಪುರ

ಹುಬ್ಬಳ್ಳಿ: ಜಿಲ್ಲೆಯಲ್ಲಿನ ಕಟ್ಟುನಿಟ್ಟಿನ ಕರ್ಫ್ಯೂ ಪರಿಣಾಮ ನವಲೂರು ಗೂಡ್‌ಶೆಡ್‌ನ‌ಲ್ಲಿ ಹಮಾಲಿ ಕಾರ್ಮಿಕರ ಸಂಖ್ಯೆ ಕಡಿಮೆಯಾಗಿದೆ. ಜಿಲ್ಲೆಯ ವಿವಿಧ ಗ್ರಾಮಗಳಿಂದ ಬರುತ್ತಿದ್ದ ಕಾರ್ಮಿಕರು ನಗರದಿಂದ ದೂರ ಉಳಿದಿದ್ದಾರೆ. ಇದರಿಂದಾಗಿ ಸರಕು ಸಾಗಣೆ ರೈಲುಗಳ ಮೂಲಕ ನಗರಕ್ಕೆ ಬರುವ ಅಗತ್ಯ ವಸ್ತುಗಳ ಅನ್‌ಲೋಡ್‌ ವಿಳಂಬವಾಗುತ್ತಿದೆ.

ಇನ್ನೂ 9 ಜಿಲ್ಲೆಗಳಿಗೆ ಪೂರೈಕೆಯಾಗುವ ರಸಗೊಬ್ಬರಕ್ಕೂ ಈ ಬಿಸಿ ತಟ್ಟಿದೆ. ಚೆಕ್‌ಪೋಸ್ಟ್‌ಗಳಲ್ಲಿ ಕಾರಣ ಹೇಳಬೇಕು, ಇಲ್ಲದಿದ್ದರೆ ಲಾಠಿ ಏಟು ಎನ್ನುವ ಭಯ ಒಂದೆಡೆಯಾದರೆ ನಗರ ಪ್ರದೇಶದಲ್ಲಿ ಸೋಂಕಿತ ಪ್ರಕರಣಗಳ ಭೀತಿ ಕಾರಣ ಗ್ರಾಮಗಳಿಂದ ಬರುತ್ತಿರುವ ಹಮಾಲಿ ಕಾರ್ಮಿಕರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಹೀಗಾಗಿ ನವಲೂರಿನ ಗೂಡ್‌ಶೆಡ್‌ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದ್ದು, ನಿಗದಿತ ಸಮಯಕ್ಕೆ ಅನ್‌ಲೋಡ್‌ ಆಗಬೇಕಾಗಿದ್ದ ವಸ್ತುಗಳು ಮೂರ್‍ನಾಲ್ಕು ಗಂಟೆ ವಿಳಂಬವಾಗುತ್ತಿವೆ. ಇದರಿಂದ ಪೂರೈಕೆಗೂ ಸಮಸ್ಯೆಯಾಗುತ್ತಿದೆ.

ನವಲೂರು ಗೂಡ್‌ಶೆಡ್‌ ಮೂಲಕ ಜಿಲ್ಲೆ ಸೇರಿದಂತೆ ಸುತ್ತಲಿನ 9 ಜಿಲ್ಲೆಗಳಿಗೆ ಅಗತ್ಯ ವಸ್ತುಗಳು ಪೂರೈಕೆಯಾಗುತ್ತವೆ. ಇದರಲ್ಲಿ ಪ್ರಮುಖವಾಗಿ ಸಿಮೆಂಟ್‌, ವಾಹನ, ಯಂತ್ರಗಳನ್ನು ಇಲ್ಲಿ ಅನ್‌ಲೋಡ್‌ ಮಾಡಲಾಗುತ್ತಿದೆ. ಇಲ್ಲಿಂದ ಸಕ್ಕರೆ ಸೇರಿದಂತೆ ಕೆಲ ವಸ್ತುಗಳನ್ನು ಬೇರೆಡೆಗೆ ಲೋಡ್‌ ಮಾಡಲಾಗುತ್ತಿದೆ. ಈ ಕಾರ್ಯಕ್ಕೆ ಹಿಂದೆ ಸುಮಾರು 150 ಹಮಾಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಇದೀಗ ಕರ್ಫ್ಯೂ ಹಿನ್ನೆಲೆಯಲ್ಲಿ ವಿವಿಧ ಗ್ರಾಮಗಳಿಂದ ಬರುತ್ತಿದ್ದ ಸುಮಾರು 60ಕ್ಕೂ ಹೆಚ್ಚು ಕಾರ್ಮಿಕರು ಕೆಲಸದಿಂದ ದೂರ ಉಳಿದಿದ್ದಾರೆ.

ರಸಗೊಬ್ಬರಕ್ಕೆ ತಟ್ಟಿದ ಬಿಸಿ: ನವಲೂರು ಗೂಡ್‌ ಶೆಡ್‌ ಬಿಹಾರ ಮೂಲದ ಸುಮಾರು 90 ಕ್ಯಾಂಪ್‌ ಕಾರ್ಮಿಕರ ಮೇಲೆ ನಿರ್ವಹಣೆಯಾಗುತ್ತಿದೆ. ಸುಮಾರು 50-60 ಕಾರ್ಮಿಕರ ಸಮಸ್ಯೆ ಉಂಟಾಗಿದೆ. ಈ ಗೂಡ್‌ಶೆಡ್‌ ಮೂಲಕವೇ ಸುತ್ತಲಿನ 9 ಜಿಲ್ಲೆಗಳಿಗೆ ಪೂರ್ಣ ಹಾಗೂ ಭಾಗಶಃ ರಸಗೊಬ್ಬರ ಪೂರೈಕೆಯಾಗುತ್ತಿದೆ. ಆದರೆ ಕಾರ್ಮಿಕರ ಸಮಸ್ಯೆಯಿಂದ ನಿತ್ಯ 1-2 ರೇಕ್‌ಗಳ ಮೂಲಕ ಬರುವ ಸುಮಾರು 4-5 ಸಾವಿರ ಟನ್‌ ರಸಗೊಬ್ಬರ ಅನ್‌ಲೋಡ್‌ ವಿಳಂಬವಾಗುತ್ತಿದೆ. ಇದರಿಂದ ಸಾಗಾಟದ ಮೇಲೂ ಪರಿಣಾಮ ಉಂಟಾಗುತ್ತಿದೆ. ಸಕಾಲಕ್ಕೆ ರೈತರಿಗೆ ವಿತರಣೆಯಲ್ಲಿ ವಿಳಂಬವಾಗುತ್ತಿದೆ. ದೂರದ ಜಿಲ್ಲೆಗಳಿಗೆ ಪೂರೈಕೆಯಲ್ಲಿ ಸಾಕಷ್ಟು ಸಮಸ್ಯೆ ಉಂಟಾಗಿದೆ. ಹೀಗಾಗಿ ಕೆಲವೆಡೆ ರೈತರು ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಉಂಟಾಗಿದೆ.

ಪ್ರಸ್ತಾಪಿಸಿದರೂ ಪ್ರಯೋಜನವಿಲ್ಲ: ರಸಗೊಬ್ಬರ ಅನ್‌ಲೋಡ್‌, ಪೂರೈಕೆಯಲ್ಲಿ ಆಗುತ್ತಿರುವ ಸಮಸ್ಯೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ, ಜಿಲ್ಲಾ ಧಿಕಾರಿ ನಿತೇಶ ಪಾಟೀಲ ಹಾಗೂ ಜಿಲ್ಲೆಯ ಜನಪ್ರತಿನಿ ಧಿಗಳ ಸಭೆಯಲ್ಲಿ ಪ್ರಸ್ತಾಪವಾಗಿತ್ತು. ಗ್ರಾಮಗಳಿಂದ ಬರುವ ಕಾರ್ಮಿಕರಿಗೆ ಚೆಕ್‌ಪೋಸ್ಟ್‌ಗಳಲ್ಲಿ ತಡೆಯಲಾಗುತ್ತಿದೆ. ಅವರ ಬಳಿ ಯಾವುದೇ ಗುರುತಿನ ಚೀಟಿ ಇಲ್ಲದ ಪರಿಣಾಮ ಬಿಡುತ್ತಿಲ್ಲ. ಇದಕ್ಕಾಗಿ ವಾಹನ ವ್ಯವಸ್ಥೆ ಮಾಡಿದರೆ ಅವುಗಳಿಗೆ ಪಾಸ್‌ ಇಲ್ಲ ಎಂದು ದಂಡ ಹಾಕಲಾಗುತ್ತಿದೆ. ಇದರಿಂದ ಗ್ರಾಮೀಣ ಭಾಗದ ಕಾರ್ಮಿಕರು, ಲಾರಿ ಚಾಲಕರು ಬರಲು ಸಾಧ್ಯವಾಗುತ್ತಿಲ್ಲ ಎಂದು ನವಲೂರು ಗೂಡ್‌ಶೆಡ್‌ ಗ್ರಾಹಕರ ಹಾಗೂ ಗುತ್ತಿಗೆದಾರರ ಅಸೋಸಿಯೇಶನ್‌ ಕಾರ್ಯದರ್ಶಿ ನಿಜಗುಣಿ ಬೇವೂರು ಸಮಸ್ಯೆಗಳನ್ನು ಬಿಚ್ಚಿಟ್ಟಿದ್ದರು. ಆದರೆ ಇದುವರೆಗೂ ಕಾರ್ಯರೂಪಕ್ಕೆ ಬಂದಿಲ್ಲ ಎನ್ನುತ್ತಾರೆ ಅವರು.

ಹೆಚ್ಚುವರಿ ಹೊರೆ: ಸದ್ಯ ಇರುವ ಕಾರ್ಮಿಕರನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ. ಬಿಹಾರಿ ಮೂಲದ ಕಾರ್ಮಿಕರಿಗೆ ಶೆಡ್‌, ಊಟ, ನೀರು, ಸಕಾಲಕ್ಕೆ ವಿವಿಧ ಸೌಲಭ್ಯಗಳನ್ನು ನೀಡಿ ಉಳಿಸಿಕೊಳ್ಳಲಾಗಿದೆ. ಅಸೋಸಿಯೇಶನ್‌ ಗೆ ಇದೊಂದು ಹೊರೆಯಾಗಿದೆ. ಇನ್ನೂ ಕಾರ್ಮಿಕರ ಸಮಸ್ಯೆಯಿಂದ ಸಕಾಲಕ್ಕೆ ಅನ್‌ ಲೋಡ್‌ ಮಾಡದ ಕಾರಣಕ್ಕೆ ಡೆಮ್ರೇಜ್‌ ಹಾಗೂ ವಾರ್ಪೇಜ್‌ ಶುಲ್ಕವನ್ನು ರೈಲ್ವೆ ಇಲಾಖೆ ವಿಧಿಸುತ್ತಿದೆ. ವಿಳಂಬವಾಗುವ ಪ್ರತಿ ಗಂಟೆಗೆ 6 ಸಾವಿರ ರೂ. ವಿಧಿ ಸಲಾಗುತ್ತಿದೆ. ಇದರಿಂದ ನಿತ್ಯ 25-30 ಸಾವಿರ ರೂ. ದಂಡ ಪಾವತಿ ಮಾಡುವಂತಾಗಿದೆ. ಹಿಂದಿನ ವರ್ಷ ಕೋವಿಡ್‌ ಕಾರಣದಿಂದ ಡೆಮ್ರೇಜ್‌ ಹಾಗೂ ವಾಪೇìಜ್‌ ಶುಲ್ಕ ಇರಲಿಲ್ಲ. ಆದರೆ ಎರಡನೇ ಅಲೆಯ ತೀವ್ರತೆಯಿಂದ ಕೂಡಿದ್ದರೂ ವಿನಾಯಿತಿ ನೀಡುತ್ತಿಲ್ಲ. ಲಾಕ್‌ಡೌನ್‌ ಪೂರ್ಣಗೊಳ್ಳುವವರೆಗೆ ಡೆಮ್ರೇಜ್‌ ಹಾಗೂ ವಾಪೇìಜ್‌ ಶುಲ್ಕ ವಿನಾಯಿತಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ, ಕೃಷಿ ಇಲಾಖೆಯಿಂದ ರೈಲ್ವೆ ಇಲಾಖೆಗೆ ಪತ್ರ ಬರೆದಿದ್ದಾರೆ. ಈ ಕುರಿತು ರೈಲ್ವೆ ಇಲಾಖೆಯಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗುತ್ತಿಲ್ಲ. ಅಗತ್ಯ ವಸ್ತುಗಳ ಪೂರೈಕೆ, ಕಾರ್ಮಿಕರ ಓಡಾಟಕ್ಕೆ ಸಮಸ್ಯೆಯಾಗದಂತೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಅಸೋಸಿಯೇಶನ್‌ ಅಳಲಾಗಿದೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.