ಶಿಕ್ಷಕರಿಗೆ ಯುವಾ ಬ್ರಿಗೇಡ್‌ ಗುರು ಗೌರವ ಕಿಟ್‌ ವಿತರಣೆ

| ಮನೆ ಮನೆಗೆ ತೆರಳಿ ಆಹಾರ ಕಿಟ್‌ ಪೂರೈಕೆ | ಮಾಸ್ತರಗಳ ಕಷ್ಟಕ್ಕೆ ಸ್ಪಂದನೆ

Team Udayavani, Jun 11, 2021, 6:30 PM IST

hgfhdddfdfd

ವರದಿ: ಅಮರೇಗೌಡ ಗೋನವಾರ

ಹುಬ್ಬಳ್ಳಿ: ಕೋವಿಡ್‌ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾಗಿದ್ದರೂ ಸಂಕಟ ಹೇಳಿಕೊಳ್ಳಲಾಗದೆ-ಇತರರಂತೆ ನೆರವು ಪಡೆಯಲಾಗದೆ ಮನೋವೇದನೆ ಅನುಭವಿಸುತ್ತಿರುವ ರಾಜ್ಯದ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಆಹಾರ ಧಾನ್ಯಗಳ ಕಿಟ್‌ ವಿತರಣೆ ಮೂಲಕ ಯುವಾ ಬ್ರಿಗೇಡ್‌ “ಗುರು ಗೌರವ’ ಸಮರ್ಪಣೆ ಸಾರ್ಥಕ ಕಾರ್ಯದಲ್ಲಿ ತೊಡಗಿದೆ.

ತಲಾ ಐದು ಜಿಲ್ಲೆಗಳ ವ್ಯಾಪ್ತಿ ಹೊಂದಿದ ಆರು ವಿಭಾಗಗಳನ್ನಾಗಿ ವಿಂಗಡಿಸಿ ಈ ಕಿಟ್‌ ವಿತರಣೆ ನಡೆದಿದೆ. ನೂರಾರು ಕಾರ್ಯಕರ್ತರು ಕಿಟ್‌ ತಯಾರಿಯಿಂದ ಹಿಡಿದು, ವಿತರಣೆವರೆಗಿನ ಸೇವಾ ಕಾರ್ಯದಲ್ಲಿ ತೊಡಗಿದ್ದು, ಶಿಕ್ಷಕರ ಮಾಹಿತಿ ಪಡೆದು ನೇರವಾಗಿ ಅವರ ಮನೆಗೇ ತೆರಳಿ ಆಹಾರ ಧಾನ್ಯಗಳನ್ನು ತಲುಪಿಸುತ್ತಿದ್ದಾರೆ.

ಉತ್ತರ ಕರ್ನಾಟಕ, ಮಲೆನಾಡು ಸೇರಿದಂತೆ ನಾಲ್ಕು ವಿಭಾಗಗಳಲ್ಲಿ ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕದ ಜಿಲ್ಲೆಗಳು ಅಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಸೇರಿದಂತೆ ಸುಮಾರು 20 ಜಿಲ್ಲೆಗಳು ಬರುತ್ತಿವೆ. ಉಳಿದಂತೆ ಬೆಂಗಳೂರು, ಮೈಸೂರು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಸುಮಾರು 11-12 ಸಾವಿರ ಆಹಾರಧಾನ್ಯಗಳ ಕಿಟ್‌ಗಳನ್ನು ಶಿಕ್ಷಕರ ಮನೆಗಳಿಗೆ ತಲುಪಿಸಲಾಗಿದೆ. ಬೆಂಗಳೂರಿನಲ್ಲಿ ಕೇವಲ 200ರಿಂದ ಆರಂಭವಾದ “ಗುರು ಗೌರವ’ ಅಭಿಯಾನ ಕೆಲವೇ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಿಸಿದೆ. ದೂರವಾಣಿಗೆ ಸಂಪರ್ಕಕ್ಕೆ ಸೂಚಿಸಿದ ನಂತರದಲ್ಲಿ ಒಂದೇ ದಿನ ಎರಡು ಸಾವಿರಕ್ಕೂ ಅ ಧಿಕ ಕರೆ ಬಂದಿದೆ. ಒಟ್ಟಾರೆ 12-14 ಸಾವಿರದಷ್ಟು ಕರೆಗಳು ಬಂದಿದ್ದು, ಅದರಲ್ಲಿ ಅತ್ಯವಶ್ಯಕವಾಗಿದ್ದವರನ್ನು ಗುರುತಿಸಿ ಆಹಾರಧಾನ್ಯಗಳ ಕಿಟ್‌ ನೀಡಲಾಗಿದೆ.

ಆಹಾರ ಧಾನ್ಯಗಳ ಕಿಟ್‌ಗಳ ವಿತರಣೆಗೆ ಜಿಲ್ಲೆ ಹಾಗೂ ತಾಲೂಕುವಾರು ಕಾರ್ಯಕರ್ತರನ್ನು ನಿಗದಿಪಡಿಸಲಾಗಿದ್ದು, ಸಣ್ಣ ಜಿಲ್ಲೆ ಗದಗದಲ್ಲಿ ಏಳು ಜನ ಕಾರ್ಯಕರ್ತರಿದ್ದರೆ, ದೊಡ್ಡ ಜಿಲ್ಲೆ ಬೆಳಗಾವಿಯಲ್ಲಿ ಸುಮಾರು 46 ಜನ ಕಾರ್ಯಕರ್ತರಿದ್ದಾರೆ. ಒಂದು ಜಿಲ್ಲೆಗೆ ಸರಾಸರಿ 20ಕ್ಕೂ ಹೆಚ್ಚು ಪ್ರಮುಖ ಕಾರ್ಯಕರ್ತರು ಸೇವಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಹುಬ್ಬಳ್ಳಿ ಕೇಂದ್ರ: ಉತ್ತರ ಕರ್ನಾಟಕದ ಜಿಲ್ಲೆಗಳ ಶಿಕ್ಷಕರಿಗೆ ಆಹಾರ ಧಾನ್ಯಗಳ ಕಿಟ್‌ಗಳನ್ನು ತಯಾರಿಸಲು ಹಾಗೂ ಸಾಗಣೆಗೆ ಅನುಕೂಲವಾಗುವಂತೆ ಹುಬ್ಬಳ್ಳಿಯನ್ನು ಕೇಂದ್ರವಾಗಿಸಿಕೊಂಡು ಕಾರ್ಯ ನಿರ್ವಹಿಸಲಾಗುತ್ತಿದೆ. ಹುಬ್ಬಳ್ಳಿಯಲ್ಲಿಯೇ ಕಿಟ್‌ಗಳನ್ನು ಸಿದ್ಧ ಪಡಿಸಲಾಗುತ್ತಿದೆ. ಸುಮಾರು 55 ಜನ ಕಾರ್ಯಕರ್ತರು ಕಿಟ್‌ಗಳನ್ನು ತಯಾರಿಸಿದ್ದಾರೆ.

ಒಂದು ಕಿಟ್‌ 10 ಕೆಜಿ ಅಕ್ಕಿ, 2 ಕೆಜಿ ಸಕ್ಕರೆ, 2 ಕೆಜಿ ಬೇಳೆ, 2 ಕೆಜಿ ರವೆ, 2 ಕೆಜಿ ಗೋದಿ  ಹಿಟ್ಟು, ಒಂದು ಲೀಟರ್‌ ಅಡುಗೆ ಎಣ್ಣೆ ಹೊಂದಿದ್ದು, ಒಬ್ಬ ಶಿಕ್ಷಕರ ಕುಟುಂಬಕ್ಕೆ ಒಂದು ತಿಂಗಳಿಗೆ ಸಾಕಾಗುವ ಲೆಕ್ಕಾಚಾರದಲ್ಲಿ ತಯಾರಿಸಲಾಗಿದೆ. ಇನ್ನೊಂದೆಡೆ ಈ ಕಿಟ್‌ ನೀಡುವ ವೇಳೆ ಕೋವಿಡ್‌ ಮೂರನೇ ಅಲೆ ಬಗ್ಗೆ ತಮ್ಮ ಸಂಪರ್ಕದಲ್ಲಿರುವ ವಿದ್ಯಾರ್ಥಿಗಳು ಹಾಗೂ ಮಕ್ಕಳಲ್ಲಿ ಜಾಗೃತಿ ಮೂಡಿಸುವಂತೆ ಶಿಕ್ಷಕರಲ್ಲಿ ಮನವಿ ಮಾಡಲಾಗುತ್ತಿದೆ. ಮಕ್ಕಳಿಗೆ ಯೋಗ, ವ್ಯಾಯಾಮ ಇನ್ನಿತರ ಕಾರ್ಯಗಳಲ್ಲಿ ತೊಡಗಿಕೊಳ್ಳಲು ಪ್ರೇರಣೆ, ತರಬೇತಿ ನೀಡುವ ಕಾರ್ಯ ಮಾಡಬೇಕೆಂದೂ ಕೋರಲಾಗುತ್ತಿದ್ದು; ಇದಕ್ಕೆ ಅನೇಕ ಶಿಕ್ಷಕರಿಂದಲೂ ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.