ಜಿಲ್ಲೆಯ 2.76 ಲಕ್ಷ ಜಾನುವಾರುಗಳಿಗೆ ಲಸಿಕೆ
Team Udayavani, Oct 13, 2019, 10:31 AM IST
ಧಾರವಾಡ: ಸರ್ಕಾರದ 16ನೇ ಸುತ್ತಿನ ಲಸಿಕಾ ಅಭಿಯಾನದಲ್ಲಿ ಜಿಲ್ಲೆಯ ಒಟ್ಟು 2,76,390 ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಅಪರ ಜಿಲ್ಲಾ ಧಿಕಾರಿ ಇಬ್ರಾಹಿಂ ಮೈಗೂರ ಹೇಳಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಪಶುವೈದ್ಯಕೀಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಲಸಿಕಾ ಕಾರ್ಯಕ್ರಮದ ಪ್ರಚಾರ ಸಾಮಗ್ರಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಅಭಿಯಾನ ಯಶಸ್ವಿಗೊಳಿಸಲು ಪಶುವೈದ್ಯರು ಸೇರಿದಂತೆ ವಿವಿಧ ಸಿಬ್ಬಂದಿಯ ಒಟ್ಟು 38 ತಂಡಗಳನ್ನು ರಚಿಸಲಾಗಿದೆ. ಪ್ರತಿ ತಂಡಕ್ಕೆ 22 ದಿನಗಳ ಕಾಲಾವ ಧಿಯಲ್ಲಿ ಪ್ರತ್ಯೇಕ ಗ್ರಾಮ ಹಾಗೂ ಸಮಯ ನಿಗದಿಗೊಳಿಸಿ ಲಸಿಕೆ ಹಾಕಲು ಯೋಜನೆ ರೂಪಿಸಲಾಗಿದೆ. ಲಸಿಕಾ ತಂಡ ಭೇಟಿ ನೀಡುವ ಪೂರ್ವದಲ್ಲಿ ಪ್ರತಿ ಗ್ರಾಮಗಳಲ್ಲಿ ಡಂಗುರ ಸಾರುವ ಹಾಗೂ ವಾಹನಗಳಲ್ಲಿ ಧ್ವನಿವರ್ಧಕ ಬಳಸಿ ರೈತರಿಗೆ ಮಾಹಿತಿ ನೀಡಲಾಗುತ್ತದೆ ಎಂದರು.
ಗ್ರಾಮ ಸಮೀಕ್ಷೆ ಮಾಡಿ ಜಾನುವಾರುಗಳ ಪಟ್ಟಿ ತಯಾರಿಸಲಾಗುತ್ತದೆ. ಅದರಂತೆ ಪ್ರತಿದಿನ ಬೆಳಗ್ಗೆ 6ರಿಂದ ಸಂಜೆ 10 ಗಂಟೆಯೊಳಗೆ (ತಂಪು ವೇಳೆಯಲ್ಲಿ) ಪ್ರತಿ ರೈತರ ಮನೆ ಬಾಗಿಲಿಗೆ ಸಿಬ್ಬಂದಿ ಹೋಗಿ ರೈತರ ಜಾನುವಾರುಗಳಿಗೆ ಲಸಿಕೆ ಹಾಕುತ್ತಾರೆ. ಹೆಚ್ಚಿನ ಮಾಹಿತಿ ಹಾಗೂ ಯಾವುದೇ ರೈತರ ಜಾನುವಾರುಗಳಿಗೆ ಲಸಿಕೆ ಹಾಕದೆ ಉಳಿದಿದ್ದರೆ ಅವರು ಜಿಲ್ಲಾ ಕೇಂದ್ರದ ಸಹಾಯವಾಣಿ: 0836-2447672 ಮತ್ತು ರಾಜ್ಯಮಟ್ಟದ ಸಹಾಯವಾಣಿ: 1804250012 ಉಚಿತ ಕರೆ ಮಾಡಿ ತಿಳಿಸಬಹುದು ಎಂದು ತಿಳಿಸಿದರು.
ಕಾಲುಬಾಯಿ ರೋಗ ತಮ್ಮ ಜಾನುವಾರುಗಳಿಗೆ ಬಂದಿಲ್ಲವೆಂದು ಬಿಡದೆ ಪ್ರತಿ ರೈತರು ತಮ್ಮ ಜಾನುವಾರುಗಳಿಗೆ ಮುಂಜಾಗೃತೆಯಾಗಿ ಈ ಲಸಿಕೆಯನ್ನು ಹಾಕಿಸಬೇಕು. ರಾಜ್ಯದ ಇತರ ಜಿಲ್ಲೆ ಹಾಗೂ ನೆರೆ ರಾಜ್ಯಗಳಿಂದ ಜಾನುವಾರುಗಳನ್ನು ಖರೀದಿಸಿ ತರುವುದರಿಂದ, ಅವುಗಳಲ್ಲಿದ್ದ ರೋಗ ಹರಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪ್ರತಿ ಜಾನುವಾರಿಗೂ ತಪ್ಪದೆ ಲಸಿಕೆ ಹಾಕಿಸಬೇಕು ಎಂದರು.
ಪಶುಪಾಲನೆ ಹಾಗೂ ಪಶುವೈದ್ಯಕೀಯ ಇಲಾಖೆ ಉಪನಿರ್ದೇಶಕ ಡಾ| ಪರಮೇಶ್ವರ ನಾಯಕ ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕಲು ಸಿಬ್ಬಂದಿ ತಂಡವನ್ನು ಸಿದ್ಧಗೊಳಿಸಲಾಗಿದೆ. ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕಿ ಅಭಿಯಾನ
ಯಶಸ್ವಿಗೊಳಿಸಲಾಗುವುದು. ಇದರೊಂದಿಗೆ ಪ್ರತಿ ರೈತ ಕುಟುಂಬಕ್ಕೆ ಪಶುಪಾಲನೆ ಇಲಾಖೆಯ ಯೋಜನೆ, ಸೌಲಭ್ಯಗಳ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಲಾಗುವದು ಎಂದು ತಿಳಿಸಿದರು.
ಜಿಲ್ಲೆಯ ವಿವಿಧ ತಾಲೂಕಾ ಪಶುವೈದ್ಯಾಧಿಕಾರಿಗಳಾದ ಡಾ| ಜಂಬುನಾಥ ಗಡ್ಡಿ, ಡಾ| ಉಮೇಶ ಕೊಡ್ಲಿ, ಡಾ| ಸಂತಿ, ಡಾ|ಎಂ. ಎಂ. ದ್ಯಾಬೇರಿ, ಡಾ| ಕೃಷ್ಣಾ ಖ್ಯಾಡದ, ಡಾ| ಮುಲ್ಕಿಪಾಟೀಲ ಮತ್ತು ಕೆಎಂಎಫ್ ವಿಸ್ತರಣಾ ಶಾಖೆಯ ಉಪ ವ್ಯವಸ್ಥಾಪಕ ಸಿದ್ದಯ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ