ರಾಶಿಗಟ್ಟಲೇ ಕೊಳೆಯುತ್ತಿದೆ ಕಾಯಿಪಲ್ಲೆ

ಶೇ.70 ವ್ಯಾಪಾರ ಕುಸಿತ! ­ತರಕಾರಿ ಬೆಳೆದವರ ಡೌನ್‌ ಮಾಡಿದ ಕಟ್ಟುನಿಟ್ಟಿನ ಲಾಕ್‌

Team Udayavani, May 24, 2021, 5:02 PM IST

page

ವರದಿ : ಶಶಿಧರ್‌ ಬುದ್ನಿ

ಧಾರವಾಡ: ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಜಿಲ್ಲಾಡಳಿತ ಹೇರಿರುವ ಕಠಿಣ ನಿಯಮಗಳ ಪರಿಣಾಮ ತರಕಾರಿ ಬೆಳೆದ ರೈತರ ಬಾಳು ಬಾಡಿ ಹೋಗುವಂತಾಗಿದ್ದು, ಹಾಕಿದ ಶ್ರಮಕ್ಕೆ ಪ್ರತಿಫಲ ಸಿಗದಂತಾಗಿದೆ.

ಹೌದು. ಶನಿವಾರ-ರವಿವಾರ ಕಠಿಣ ನಿಯಮ ಜಾರಿ ಮಾಡಿದ್ದ ಜಿಲ್ಲಾಡಳಿತ ಹೋಲ್‌ಸೇಲ್‌ ಕಾಯಿಪಲ್ಲೆ ಮಾರುಕಟ್ಟೆಯಲ್ಲಿ ಬೆಳಿಗ್ಗೆ 6:00 ರಿಂದ 8:00 ಗಂಟೆವರೆಗೆ ವ್ಯಾಪಾರಕ್ಕೆ ಅವಧಿ ಸೀಮಿತಗೊಳಿಸಿದ್ದರಿಂದ ಶೇ.70 ವ್ಯಾಪಾರ ಕುಸಿತಗೊಂಡಿದೆ. ಇದರಿಂದ ಮಾರುಕಟ್ಟೆಗೆ ತಂದ ಕಾಯಿಪಲ್ಲೆ ಮಾರಾಟ ಆಗದೇ ಇತ್ತ ಮನೆಗೂ ತೆಗೆದುಕೊಂಡು ಹೋಗಲಾಗದೇ ಮಾರುಕಟ್ಟೆಯಲ್ಲಿ ಹಾಗೆ ಬಿಟ್ಟು ಹೋಗುವಂತಾಗಿದೆ. ಹೀಗಾಗಿ ರಾಶಿಗಟ್ಟಲೇ ಕಾಯಿಪಲ್ಲೆ ಮಾರುಕಟ್ಟೆ ಆವರಣದಲ್ಲೇ ಬೀಳುತ್ತಿದ್ದು, ಕೊಳೆಯುತ್ತಿರುವ ಕಾಯಿಪಲ್ಲೆ ಬಿಡಾಡಿ ದನಗಳ ಪಾಲಾಗುವಂತಾಗಿದೆ.

ಈ ಹಿಂದೆ ಬೆಳಿಗ್ಗೆ 6:00 ರಿಂದ 10:00 ಗಂಟೆವರೆಗೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿತ್ತು. ಆ ಅವಧಿಯಲ್ಲಿಯೇ ಶೇ.40 ವ್ಯಾಪಾರಕ್ಕೆ ಹೊಡೆತ ಬಿದ್ದಿತ್ತು. ಈಗ ಕಳೆದೆರಡು ದಿನಗಳ ವಾರಾಂತ್ಯದ ಕಠಿಣ ನಿಯಮದಿಂದ ಬರೀ ಎರಡು ತಾಸು ನೀಡಿದ ಪರಿಣಾಮ ಈ ದುಸ್ಥಿತಿ ಬಂದಿದೆ. ಇದೀಗ ಜೂ.6ರವರೆಗೂ ಇದೇ ಕಠಿಣ ನಿಯಮಗಳನ್ನೇ ಜಿಲ್ಲಾಡಳಿತ ಮುಂದುವರಿಸಿದ್ದು, ಇದರಿಂದ ರೈತರ ಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ.

ಕೇಳಿದಷ್ಟು ದರಕ್ಕೆ ವ್ಯಾಪಾರ: ಧಾರವಾಡ ಹೊಸ ಎಪಿಎಂಸಿಗೆ ಧಾರವಾಡ, ಕಲಘಟಗಿ ತಾಲೂಕಿನಿಂದ ತರಕಾರಿ ಬರುತ್ತದೆ. ಕರ್ಫ್ಯೂ ಜಾರಿಯಲ್ಲಿರುವುದರಿಂದ ಎಪಿಎಂಸಿಗಳಲ್ಲಿ ಬೆಳಗ್ಗೆ 6ರಿಂದ 8:00 ಗಂಟೆವರೆಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇಷ್ಟು ಕಡಿಮೆ ಅವಧಿಯಲ್ಲಿ ದೂರದ ಹಳ್ಳಿಗಳಿಂದ ತರಕಾರಿಯನ್ನು ಮಾರುಕಟ್ಟೆಗೆ ತಂದು ಮಾರಲು ರೈತರಿಗೆ ಸಾಧ್ಯವಾಗುತ್ತಿಲ್ಲ. 8:00 ಗಂಟೆಯಾಗುತ್ತಲೇ ವ್ಯಾಪಾರ ಬಂದ್‌ ಮಾಡುತ್ತಿರುವುದರಿಂದ ಕ್ವಿಂಟಲ್‌ಗ‌ಟ್ಟಲೆ ವಿವಿಧ ತರಕಾರಿ ಮಾರಾಟವಾಗದೆ ಉಳಿಯುತ್ತಿದೆ. ಹೀಗಾಗಿ ರೈತರು, ವ್ಯಾಪಾರಸ್ಥರು ಕೇಳಿದಷ್ಟು ದರಕ್ಕೆ ಕೊಟ್ಟು ಹೋಗುವಂತಾಗಿದೆ.

ಧಾರವಾಡ ತಾಲೂಕಿನ ತರಕಾರಿ ಬೆಳಗಾವಿ, ಗದಗ ಮತ್ತು ವಿವಿಧ ತಾಲೂಕುಗಳು ಸೇರಿದಂತೆ ಹಲವೆಡೆ ಹೋಗುತ್ತದೆ. ಆದರೆ, ಕರ್ಫ್ಯೂ ಇರುವುದರಿಂದ ಹೊರ ಜಿಲ್ಲೆ, ತಾಲೂಕುಗಳಿಗೆ ತರಕಾರಿ ಹೋಗುತ್ತಿಲ್ಲ. ಹೀಗಾಗಿ ರೈತರು ಸ್ಥಳೀಯ ಎಪಿಎಂಸಿಗಳಲ್ಲಿ ತರಕಾರಿ ಮಾರಾಟದ ಬೇಡಿಕೆಯನ್ನೇ ನೆಚ್ಚಿಕೊಂಡಿದ್ದಾರೆ. ಇದರಿಂದ ರೈತರು ಎಪಿಎಂಸಿ ಆವರಣದಲ್ಲಿ ರಾತ್ರಿಯೇ ತರಕಾರಿ ತಂದು ಇಳಿಸುತ್ತಿದ್ದಾರೆಂದು ತರಕಾರಿ ವ್ಯಾಪಾರಸ್ಥರು ಹೇಳುತ್ತಾರೆ.

ಕೊಳೆಯುತ್ತಿದೆ ತರಕಾರಿ: ಮಾರುಕಟ್ಟೆಗೆ ಹಸಿಮೆಣಸಿನಕಾಯಿ ಸೇರಿದಂತೆ ವಿವಿಧ ತರಕಾರಿ ಅಪಾರ ಪ್ರಮಾಣದಲ್ಲಿ ಬರುತ್ತದೆ. ಅದರಲ್ಲೂ ಹಸಿಮೆಣಸಿನಕಾಯಿ ದೊಡ್ಡ ಪ್ರಮಾಣದಲ್ಲಿ ಬರುತ್ತಿರುವುದರಿಂದ ಎಪಿಎಂಸಿಯಲ್ಲೇ ಕೊಳೆಯುವಂತಾಗಿದೆ. ಉಳಿದಂತೆ ಬದನೆಕಾಯಿ, ಟೊಮೆಟೋ, ಚವಳಿಕಾಯಿ, ದೊಣ್ಣ ಮೆಣಸಿನಕಾಯಿ, ಹಾಗಲಕಾಯಿ, ವಿವಿಧ ಜಾತಿಯ ಸೊಪ್ಪು ಸೇರಿದಂತೆ ಇತರೆ ತರಕಾರಿಗಳು ವ್ಯಾಪಾರವಾಗದೇ ಉಳಿಯುತ್ತಿವೆ. ಅದರಲ್ಲೂ ಸೊಪ್ಪು ಮತ್ತು ಕಡಿಮೆ ಸಮಯ ಉಳಿಯುವ ತರಕಾರಿ ಇದ್ದರೆ ರೈತರು ಅದನ್ನು ಅಲ್ಲೇ ತಿಪ್ಪಗೆ ಹಾಕಿ ಹೋಗುತ್ತಿದ್ದಾರೆ. ಬೇಡಿಕೆಗಿಂತ ಹೆಚ್ಚು ತರಕಾರಿ ಬರುತ್ತಿರುವುದರಿಂದ ಬಹುತೇಕ ಎಲ್ಲ ತರಕಾರಿಗಳ ಬೆಲೆ ಕುಸಿತ ಕಂಡಿವೆ. ಹಸಿಮೆಣಸು ಬಹು ದೊಡ್ಡ ಪ್ರಮಾಣದಲ್ಲಿ ಉಳಿಯುವಂತಾಗಿ ದರವೂ ಕುಸಿದಿದೆ.

ಚಿಲ್ಲರೆ ದರ ಕಡಿಮೆಯಾಗಿಲ್ಲ : ಇನ್ನು ಸ್ಥಳೀಯ ವ್ಯಾಪಾರಸ್ಥರು ಎಪಿಎಂಸಿಯಿಂದ ತರಕಾರಿ ಖರೀದಿಸಿ ಸಾಗಿಸಲು ಸರಿಯಾದ ವಾಹನದ ವ್ಯವಸ್ಥೆ ಇಲ್ಲದೇ ಹೆಚ್ಚು ತರಕಾರಿ ಖರೀದಿಗೆ ಮನಸ್ಸು ಮಾಡುತ್ತಿಲ್ಲ. ಹೇಗೋ ತೆಗೆದುಕೊಂಡು ಹೋದರೂ ಅದನ್ನು ಅವರು ಅಡ್ಡಾಡಿ ಮಾರಬೇಕು. ಹೀಗಾಗಿ ಖರೀದಿಗೆ ಹಿಂದೇಟು ಹಾಕಿದ್ದಾರೆ. ಮಾರುಕಟ್ಟೆಯಲ್ಲಿ ತರಕಾರಿ ದರ ಕುಸಿತ ಕಂಡರೂ ಚಿಲ್ಲರೆ ಖರೀದಿಯಲ್ಲಿ ಮಾತ್ರ ದರ ಕಡಿಮೆಯಾಗಿಲ್ಲ. ಬಹುತೇಕ ವ್ಯಾಪಾರಸ್ಥರು ಮೊದಲಿನ ದರದಲ್ಲಿಯೇ ತರಕಾರಿ ಮಾರುತ್ತಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.