ವಾಯವ್ಯ ಸಾರಿಗೆಗೆ ವಾಹನ ತೆರಿಗೆ ವಿನಾಯಿತಿ ಮುಂದುವರಿಕೆ ಅಗತ್ಯ
Team Udayavani, May 22, 2017, 4:27 PM IST
ಹುಬ್ಬಳ್ಳಿ: ವಾಯವ್ಯ ಸಾರಿಗೆ ಸಂಸ್ಥೆಗೆ ಬಿಜೆಪಿ ಸರಕಾರದ ಅವಧಿಯಲ್ಲಿ ವಾಹನ ತೆರಿಗೆ ವಿನಾಯಿತಿ ನೀಡಿತ್ತು. ಸದ್ಯ ಅದರ ಅವಧಿ ಮುಕ್ತಾಯದ ಹಂತಕ್ಕೆ ಬಂದಿದೆ, ಅದನ್ನು ಮುಂದುವರಿಸುವ ಮೂಲಕ ಸಂಸ್ಥೆಗೆ ಆಗುತ್ತಿರುವ ಹಾನಿಯಲ್ಲಿ ಅಲ್ಪ ಕಡಿಮೆ ಮಾಡಿಕೊಳ್ಳಬಹುದು ಎಂದು ವಿಧಾನ ಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ ಹೇಳಿದರು.
ನೃಪತುಂಗ ಬೆಟ್ಟದಲ್ಲಿ ಸಿಬಿಟಿಯಿಂದ ನೃಪತುಂಗ ಬೆಟ್ಟ ನಗರ ಸಾರಿಗೆ ಸಂಸ್ಥೆ ಬಸ್ಗೆ ರವಿವಾರ ಚಾಲನೆ ನೀಡಿ ಮಾತನಾಡಿದರು. ಈಶಾನ್ಯ ಸಾರಿಗೆ ಸಂಸ್ಥೆಯಲ್ಲಿ ವಿನಾಯಿತಿ ನೀಡಿದಂತೆ ಅಂದು ಬಿಜೆಪಿ ಸರಕಾರ ಇದ್ದಾಗ ವಾಯವ್ಯ ಸಾರಿಗೆ ಸಂಸ್ಥೆಗೂ ನೀಡಬೇಕೆಂಬ ನಿರ್ಧಾರದಿಂದ ಸಂಸ್ಥೆ ಆಗುತ್ತಿರುವ ಹಾನಿಯನ್ನು ತಪ್ಪಿಸಲಾಗಿತ್ತು.
ಇದರಿಂದ ಸಂಸ್ಥೆಗೂ ಹಾಗೂ ಸಂಸ್ಥೆಯಲ್ಲಿಸೇವೆ ಸಲ್ಲಿಸುತ್ತಿರುವವರಿಗೂ ಹೆಚ್ಚಿನ ಅನುಕೂಲವಾಯಿತು. ಆದರೆ ಇದೀಗ ವಿನಾಯಿತಿ ಅವಧಿ ಮುಕ್ತಾಯ ಹಂತದಲ್ಲಿದ್ದು ಮುಖ್ಯಮಂತ್ರಿಗಳಿಗೆ ಒತ್ತಡ ಹಾಕುವ ಮೂಲಕ ಇದನ್ನು ಮುಂದುವರಿಸುವುದು ಅವಶ್ಯವಾಗಿದೆ.
ಈ ಕುರಿತು ಮುಖ್ಯಮಂತ್ರಿ ಜೊತೆ ತಾವು ಚರ್ಚಿಸುವುದಾಗಿ ಹೇಳಿದರು. ಇನ್ನು ಸಂಸ್ಥೆಯಿಂದ ಬಸ್ ಶೆಲ್ಟರ್ ಮಾಡುವ ಕುರಿತು ನಗರದಲ್ಲಿರುವ ಪಾಲಿಕೆ ಜಾಗವನ್ನು ಗುರುತಿಸಿದರೆ ಶೆಲ್ಟರ್ ನಿರ್ಮಾಣಕ್ಕೆ ಕೊಡಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.
ವಾಕರಸಾ ಸಂಸ್ಥೆಯ ಅಧ್ಯಕ್ಷ ಸದಾನಂದ ಡಂಗನವರ ಮಾತನಾಡಿ, ನೃಪತುಂಗ ಬೆಟ್ಟ ವಾಯುವಿಹಾರಿಗಳ ಸಂಘ ಹಾಗೂ ಹಲವು ಹಿರಿಯರ ಬಹುದಿನಗಳ ಬೇಡಿಕೆ ಈಡೇರಿದೆ. ಬೆಟ್ಟಕ್ಕೆ ಬಸ್ ಸಂಚಾರ ಆರಂಭಿಸಿ ಎಂಬ ಬೇಡಿಕೆಗೆ ಇಲಾಖೆ ಸ್ಪಂದಿಸಿದ್ದು, ಅದನ್ನು ಸರಿಯಾಗಿ ನಡೆಸಿಕೊಂಡು ಹೋಗುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ನಗರದ ಹಾಗೂ ಗ್ರಾಮೀಣ ಭಾಗದಲ್ಲಿ ಯಾವ ಪ್ರದೇಶಕ್ಕೆ ಸರಿಯಾದ ಬಸ್ ಸೌಲಭ್ಯ ಇಲ್ಲ ಎಂಬುದನ್ನು ಮಾಹಿತಿ ನೀಡಿದ್ದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಸಾರ್ವಜನಿಕರು ಸಾರಿಗೆ ಸಂಸ್ಥೆ ಬಸ್ನಲ್ಲಿ ಪ್ರಯಾಣಿಸುವ ಮೂಲಕ ಸಂಸ್ಥೆಯನ್ನು ಉಳಿಸಿ-ಬೆಳೆಸಬೇಕು ಎಂದು ಮನವಿ ಮಾಡಿಕೊಂಡರು.
ನಂತರ ಸಂಸ್ಥೆಯ ಕಲಾವಿದ ನೌಕರರಿಂದ ಸಾಂಸ್ಕೃತಿಕ ಸಂಜೆ ರಸಮಂಜರಿ ಕಾರ್ಯಕ್ರಮ ನಡೆಯಿತು. ಸಂಸದ ಪ್ರಹ್ಲಾದ ಜೋಶಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ವೇದವ್ಯಾಸ ಕೌಲಗಿ, ಎಂ.ಎಸ್. ಪಾಟೀಲ, ಸಿದ್ದು ಮೊಗಲಿಶೆಟ್ಟರ, ಮಂಜುನಾಥ, ವಿವೇಕಾನಂದ ವಿಶ್ವಜ್ಞ, ರಾಠೊಡ, ಅಂಗಡಿ, ನಾಯ್ಕ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ