ಕನ್ನಡದ ಕಂಪು ಪಸರಿಸುತ್ತಿರುವ ವೆಂಕಟೇಶ ಮರೇಗುದ್ದಿ


Team Udayavani, Nov 1, 2019, 12:05 PM IST

huballi-tdy-1

ಹುಬ್ಬಳ್ಳಿ: ಕನ್ನಡ ಕೇವಲ ರಾಜ್ಯೋತ್ಸವಕ್ಕೆ ಸೀಮಿತವಾಗಿ ಉಳಿದಂತಾಗಿದೆ. ಇಂಥ ಸಂದರ್ಭದಲ್ಲಿ ಕನ್ನಡ ಭಾಷೆ ಬಗ್ಗೆ ಅತೀತ ಅಭಿಮಾನ ಇಟ್ಟುಕೊಂಡು, ಕಳೆದ 4 ದಶಕಗಳಿಂದ ಕನ್ನಡದ ಕಂಪು ಪಸರಿಸುತ್ತಿದ್ದಾರೆ ಹುಬ್ಬಳ್ಳಿಯ ವೆಂಕಟೇಶ ಮರೇಗುದ್ದಿ.

ಚಿನ್ನಾಭರಣದ ಮಾರಾಟ ಉದ್ಯೋಗ ಮಾಡಿಕೊಂಡಿರುವ ಅವರು, ಕರ್ನಾಟಕ ರಾಷ್ಟ್ರವೀರ ಪುಲಕೇಶಿ ಕನ್ನಡ ಬಳಗ ಆರಂಭಿಸಿ ಹಲವು ವರ್ಷಗಳಿಂದ ಮನೆ ಮನೆಯಲ್ಲಿ “ಕನ್ನಡ ಕಂಪು’ ಕಾರ್ಯಕ್ರಮ ಮೂಲಕ ಕನ್ನಡಿಗರಿಗೆ ಕನ್ನಡದ ಹಿರಿಮೆ ತಿಳಿಸುವ, ಜಾಗೃತಿ ಮೂಡಿಸುವ ಸತ್ಕಾರ್ಯದಲ್ಲಿ ತೊಡಗಿದ್ದಾರೆ. ತಮ್ಮ ಮನೆಯಿಂದಲೇ ಉಪ್ಪಿಟ್ಟು, ಚಹಾ ಮಾಡಿಕೊಂಡು ಹೋಗಿ ಅಲ್ಲಿ 1 ಗಂಟೆ ಕನ್ನಡ ಸಾಹಿತ್ಯ, ಸಂಸ್ಕೃತಿ ಬಗ್ಗೆ ಕನ್ನಡ ಪಂಡಿತರಿಂದ ಉಪನ್ಯಾಸ ಆಯೋಜಿಸುತ್ತಾರೆ. ಈವರೆಗೆ 206 ಮನೆಗಳಲ್ಲಿ ಕಾರ್ಯಕ್ರಮ ಆಯೋಜಿಸಿದ್ದು ವಿಶೇಷ.

ಲಕ್ಷ ಪತ್ರ ಅಭಿಯಾನ: ದೂರದರ್ಶನದಲ್ಲಿ ಕನ್ನಡ ಕಾರ್ಯಕ್ರಮಗಳು ಪ್ರಸಾರಗೊಳ್ಳಬೇಕೆಂದು ಆಗ್ರಹಿಸಿ ಸ್ವಂತ ಖರ್ಚಿನಲ್ಲಿ 1 ಲಕ್ಷ ಪತ್ರ ಅಭಿಯಾನ ನಡೆಸಿದ ವೆಂಕಟೇಶ ಅವರು ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಬೇಕೆಂದು 1ಲಕ್ಷ ಪತ್ರ, ಕಳಸಾ-ಬಂಡೂರಿ ನಾಲಾ ಜೋಡಣೆಗೆ ಆಗ್ರಹಿಸಿ 1 ಲಕ್ಷ ಪತ್ರ ಬರೆದು ಕೇಂದ್ರ ಸರಕಾರಕ್ಕೆ ರವಾನಿಸಿದ್ದಾರೆ.

ಹಬ್ಬ, ಉತ್ಸವ ಸಂದರ್ಭದಲ್ಲಿ ಕನ್ನಡದ ಶುಭಾಶಯ ಪತ್ರ ನೀಡುವ ಇವರು, ಕನ್ನಡದ ಅಂಕಿಗಳ ಗೋಡೆ ಗಡಿಯಾರ ಉಡುಗೊರೆಯಾಗಿ ನೀಡುತ್ತಾರೆ. ಮದುವೆಗಳಲ್ಲಿ ಕನ್ನಡ ಪುಸ್ತಕಗಳನ್ನೇ ಉಡುಗೊರೆಯಾಗಿ ನೀಡುವ ಇವರು, ತಮ್ಮ ಪುತ್ರನ ಮದುವೆಯಲ್ಲಿ “ಕನ್ನಡದ ಯುಗ ಪುರುಷರು’ ಕಿರು ಹೊತ್ತಿಗೆಯನ್ನು ಎಲ್ಲರಿಗೂ ವಿತರಿಸಿದ್ದರು. ಅಲ್ಲದೇ ತಮ್ಮ ಪುತ್ರ ಹಾಗೂ ಸೊಸೆಗೆ ಮುಂದೆ ಮಕ್ಕಳನ್ನು ಕನ್ನಡ ಶಾಲೆಗೆ ಕಳಿಸುವುದಾಗಿ ಅಗ್ನಿಸಾಕ್ಷಿಯಾಗಿ ಪ್ರಮಾಣ ಮಾಡಿಸಿದ್ದು ವಿಶೇಷ. ಇವರ ಕನ್ನಡ ಪ್ರೀತಿ ಕಂಡು ಇವರನ್ನು “ಹುಚ್ಚ’ ಎಂದು ಕರೆದವರೂ ಇದ್ದಾರೆ. ಮರೇಗುದ್ದಿ ಅವರ ಮನೆ ಕನ್ನಡಾಲಯ. ಮನೆಗೆ “ಸರ್ವಜ್ಞ’ ಎಂದು ಹೆಸರಿಟ್ಟಿದ್ದು, ಪ್ರತಿಯೊಂದು ಕೋಣೆಗೂ ಒಬ್ಬ ವಚನಕಾರರ ನಾಮಕರಣ ಮಾಡಿದ್ದಾರೆ.

ಮನೆಯ ಗೋಡೆಗಳ ಮೇಲೆ ಕನ್ನಡ ಸಾಹಿತ್ಯ ಸಿರಿವಂತಗೊಳಿಸಿದ ಮಹನಿಯರ ಛಾಯಾಚಿತ್ರಗಳಿವೆ. ಮನೆಯಲ್ಲಿ ಸಾವಿರಾರು ಕನ್ನಡ ಪುಸ್ತಕಗಳಿವೆ. ಡಾ|ರಾಜಕುಮಾರ ಅಭಿಮಾನಿಯಾಗಿರುವ ಇವರು ರಾಜಕುಮಾರ ಅವರ ಕುರಿತು ರಚನೆಯಾದ 45 ಪುಸ್ತಕಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದಾರೆ. ಕಳೆದ 30 ವರ್ಷಗಳಿಂದ ಕಾದಂಬರಿಕಾರ ಅ.ನ. ಕೃಷ್ಣರಾಯರ ಜಯಂತಿ ನಿಮಿತ್ತ ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ. “ಕನ್ನಡಮ್ಮನೆ ನಮ್ಮನೆ ದೇವರು’ ಕೃತಿ ರಚಿಸಿರುವ ಇವರು ಶೀಘ್ರದಲ್ಲೇ ಕನ್ನಡಮ್ಮನ ಮಡಿಲಿಗೆ ಮತ್ತೂಂದು ಪುಸ್ತಕ ಸಮರ್ಪಿಸಲು ಸಜ್ಜಾಗಿದ್ದಾರೆ.

ಬಿಗ್‌ಬಜಾರ್‌ಗೆ ಕನ್ನಡ ನಾಮಫಲಕ ಹಾಕಿಸುವಲ್ಲಿ ಯಶಸ್ವಿ :  ಕರ್ನಾಟಕದಲ್ಲಿ ಕನ್ನಡದಲ್ಲೇ ಅಂಗಡಿಗಳ ನಾಮಫಲಕ ಬರೆಸಬೇಕು ಎಂದು ಅಪೇಕ್ಷಿಸುವ ವೆಂಕಟೇಶ ಮರೇಗುದ್ದಿ ಅವರು ಗೋಕುಲ ರಸ್ತೆಯ ಬಿಗ್‌ಬಜಾರ್‌ಗೆ ಕನ್ನಡ ನಾಮಫಲಕ ಹಾಕಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

-ವಿಶ್ವನಾಥ ಕೋಟಿ

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.