ನೆರೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Sep 24, 2019, 9:04 AM IST
ಧಾರವಾಡ: ಸರ್ಕಾರ ಉಳಿಸಿಕೊಳ್ಳುವುದರಲ್ಲಿಯೇ ಕಾಲಹರಣ ಮಾಡುತ್ತಿರುವ ಸರ್ಕಾರ ಜಿಲ್ಲೆಯ ನೆರೆ ಸಂತ್ರಸ್ತರ ನೋವಿಗೆ ಸ್ಪಂದಿಸುತ್ತಿಲ್ಲ ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ಮಾಡಲಾಯಿತು.
ನೆರೆ ಹಾವಳಿಯಿಂದ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಈ ಕುರಿತು ತಹಶೀಲ್ದಾರ್ ಗಮನಕ್ಕೆ ತರಲಾಗಿದ್ದು, ಈವರೆಗೆ ಯಾವುದೇ ದುರಸ್ತಿ ಕಾರ್ಯ ನಡೆದಿಲ್ಲ. ಕಟಾವು ಮಾಡಿದ ಕಬ್ಬು ಕಾರ್ಖಾನೆಗೆ ಕಳುಹಿಸಲು ರೈತರು ಪರದಾಡುವಂತಾಗಿದೆ. ಅರ್ಹ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಉಪಾಧ್ಯಕ್ಷ ಉಳವಪ್ಪ ಒಡೆಯರ್, ಗಂಗಾಧರ ಪಾಟೀಲ ಕುಲಕರ್ಣಿ, ಮಂಜುನಾಥ ಚಂದನಮಟ್ಟಿ, ಕರೆಪ್ಪ ಗಂಡಗುದರಿ, ಸಹದೇವ ಗುಳೇದಕೊಪ್ಪ, ನೀಲಪ್ಪ ಹುಲಮನಿ, ರುದ್ರಪ್ಪ ಹುಲಿಕೇರಿ, ಮೌಲಾಸಾಬ್ ಮುಲ್ಲಾ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ