ಸ್ಥಳದಲ್ಲೇ ಪರಿಹಾರಕ್ಕೆ ಗ್ರಾಮ ವಾಸ್ತವ್ಯ ಸಹಕಾರಿ
ಹಳ್ಳಿಯ ಜನರಿಗೆ ಸಮಯಕ್ಕೆ ಸರಿಯಾಗಿ ಅಧಿಕಾರಿಗಳು ಸಿಗುವುದಿಲ್ಲ ಎಂಬ ದೂರು ದೂರ: ಕುತುಜಾ
Team Udayavani, Apr 18, 2022, 10:54 AM IST
ಅಳ್ನಾವರ: ಸ್ಥಳದಲ್ಲೇ ಗ್ರಾಮದ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಮವಾಸ್ತವ್ಯ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಹೊನ್ನಾಪುರ ಗ್ರಾಪಂ ಅಧ್ಯಕ್ಷೆ ಕುತುಜಾ ಡೊನಸಾಲ ಹೇಳಿದರು.
ಗ್ರಾಮದಲ್ಲಿ ನಡೆದ ತಹಶೀಲ್ದಾರ್ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಹಳ್ಳಿ ಜನರಿಗೆ ಸಮಯಕ್ಕೆ ಸರಿಯಾಗಿ ಅಧಿ ಕಾರಿಗಳು ಸಿಗುವುದಿಲ್ಲ ಎಂಬ ದೂರು ದೂರವಾಗಿ ಸಮಸ್ಯೆಗಳಿಗೆ ಈ ಕಾರ್ಯಕ್ರಮದಿಂದ ಶೀಘ್ರ ಪರಿಹಾರ ದೊರೆಯಲಿದೆ. ಪಿಂಚಣಿ ಯೋಜನೆ ಸಾಕಷ್ಟು ಜನರಿಗೆ ಸಹಾಯ ಆಗಿದೆ ಎಂದರು.
ತಹಶೀಲ್ದಾರ್ ಅಮರೇಶ ಪಮ್ಮಾರ ಮಾತನಾಡಿ, 30 ಅರ್ಜಿಗಳು ಬಂದಿವೆ. ಅದರಲ್ಲಿ 6 ಅರ್ಜಿಗಳಿಗೆ ಸ್ಥಳದಲ್ಲಿ ಪರಿಹಾರ ನೀಡಲಾಗಿದೆ. ಪಿಂಚಣಿ ಅರ್ಜಿಗೆ ಮಂಜೂರಾತಿ ನೀಡಲಾಗಿದೆ. ಉಳಿದ ಅರ್ಜಿಗಳನ್ನು ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಹೇಳಿದರು.
ರಸ್ತೆ, ಚರಂಡಿ ನಿರ್ಮಾಣ ಮುಂತಾದ ಕಾರ್ಯಗಳನ್ನು ಗ್ರಾಪಂನವರು ನಿಭಾಯಿಸಬೇಕು ಎಂದು ಪಿಡಿಒ ಅವರಿಗೆ ನಿರ್ದೇಶನ ನೀಡಿದರು. ಕೃಷಿ, ಶಿಕ್ಷಣ, ತೋಟಗಾರಿಕೆ ಮುಂತಾದ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗಳ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಹೊನ್ನಾಪುರ ಹಾಗೂ ಕಲಕೇರಿ ಭಾಗದಲ್ಲಿ ಅರಣ್ಯ ಇಲಾಖೆಯವರು ಹೊಡೆದ ಟ್ರೆಂಚ್ ಕಾಮಗಾರಿಯಿಂದ ಪಕ್ಕದ ಹೊಲಗಳಿಗೆ ತೊಂದರೆ ಆಗಿದೆ ಎಂಬ ದೂರು ಕೇಳಿಬಂತು. ಗ್ರಾಮದ ಪ್ರತಿ ಮನೆಯ ನೀಲನಕ್ಷೆ ತಯಾರಿಸುವ ಕಾರ್ಯ ಸುಗಮವಾಗಿ ನಡೆಯಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.
ತಹಶೀಲ್ದಾರರು ಗ್ರಾಮ ಒನ್ ಕೇಂದ್ರ, ಶಾಲೆ, ಅಂಗನವಾಡಿ, ಪಡಿತರ ಅಂಗಡಿ ಹಾಗೂ ಎಸ್ಸಿ-ಎಸ್ಟಿ ಕಾಲೋನಿಗೆ ಭೇಟಿ ನೀಡಿದರು. ಶಾಲಾ ಆವರಣದಲ್ಲಿ ಸಸಿ ನೆಡಲಾಯಿತು. ತಾಪಂ ಯೋಜನಾಧಿ ಕಾರಿ ಪ್ರಕಾಶ ಹಾಲಮತ್, ಗ್ರಾಪಂ ಉಪಾಧ್ಯಕ್ಷ ಫಾರೂಕ ಅಂಬಡಗಟ್ಟಿ, ಎಚ್.ಆರ್. ಸನದಿ, ಪಿಡಿಒ ರೇಣುಕಾ ಕೊಪ್ಪದ, ತೇಜಸ್ ದೊಡ್ಡಮನಿ, ಪರಪ್ಪ ನಾಯಕ, ಲಕ್ಷ್ಮಣ ಪತ್ತಾರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ