ಜೋಶಿ ತಮ್ಮ ಹೆಸರಲ್ಲೇ ಚುನಾವಣೆ ಎದುರಿಸಲಿ

ಅಭಿವೃದ್ಧಿ ವಿಚಾರದಲ್ಲಿ ಚರ್ಚೆಗೆ ಸಿದ್ಧ ಎಂದ ವಿನಯ್‌

Team Udayavani, Apr 6, 2019, 12:45 PM IST

vinay

ಹುಬ್ಬಳ್ಳಿ: ಕಳೆದ 15 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ ಎಂದು ಹೇಳಿಕೊಳ್ಳುವ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ, ಪ್ರಧಾನಿ ಮೋದಿಯವರ ಹೆಸರು ಬಿಟ್ಟು ವೈಯಕ್ತಿಕ ನೆಲೆಗಟ್ಟಿನಲ್ಲಿ ಚುನಾವಣೆ ಎದುರಿಸಲು ಮುಂದಾಗಲಿ, ಅದಕ್ಕೆ ನಾನು ಸಿದ್ಧನಿದ್ದೇನೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ವಿನಯ ಕುಲಕರ್ಣಿ ಸುದ್ದಿಗೋಷ್ಠಿಯಲ್ಲಿ ಸವಾಲು ಹಾಕಿದರು.

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ವಿನಯ ಕುಲಕರ್ಣಿ ವರ್ಸ್‌ಸ್‌ ಪ್ರಹ್ಲಾದ ಜೋಶಿ ಎಂದು ಚುನಾವಣೆ ಎದುರಿಸಲು ಅವರು ಮುಂದಾದರೆ ಅದಕ್ಕೆ ತಾವು ಸಿದ್ಧ. ಸಂಸದರ ಆದರ್ಶಗ್ರಾಮ ಹಾರೋಬೆಳವಡಿ ಸ್ಥಿತಿ ನೋಡಿದರೆ ಜೋಶಿಯವರ ಅಭಿವೃದ್ಧಿ ಏನೆಂಬುದು ಗೊತ್ತಾಗುತ್ತದೆ. ಕೇವಲ ಹು-ಧಾ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಕಾರ್ಯ ಕೈಗೊಂಡಿದ್ದು ಬಿಟ್ಟರೆ, ಹಳ್ಳಿಗಳ ಅಭಿವೃದ್ಧಿಗೆ ಏನು ಮಾಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಿ ಎಂದರು.

ರಾಜ್ಯದಲ್ಲಿ ಬಳಕೆಯಾಗುವ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಶುಲ್ಕವನ್ನೇ ಕೇಂದ್ರ ಸರಕಾರ ಸಿಆರ್‌ಎಫ್ ನಿಧಿ ನೀಡಿ ರಸ್ತೆಗಳ ಬಳಕೆಗೆ ನೀಡುತ್ತದೆ. ಕಳೆದ ನಾಲ್ಕು ವರ್ಷಗಳಿಂದ ಅನುದಾನ ತರದೆ, ಚುನಾವಣೆ ಸಂದರ್ಭದಲ್ಲಿ ಒಂದೇ ಬಾರಿ ಸಿಆರ್‌ಎಫ್ ಅನುದಾನ ತಂದು ಅವಳಿನಗರಕ್ಕೆ ಬಳಸಲಾಗಿದೆ. ಅವಳಿನಗರದ ಒಳ ಸಣ್ಣ ರಸ್ತೆಗಳಿಗೂ ಈ ಹಣ ಬಳಕೆ ಮಾಡಲಾಗಿದೆ. ಪಾಲಿಕೆ ಸದಸ್ಯರ ವಾರ್ಡ್‌ ನಿಧಿಯ ಕಾಮಗಾರಿ ಸಹ ತಮ್ಮದೆಂಬಂತೆ ಜೋಶಿಯವರು ಬಿಂಬಿಸಿ ಪೋಟೋಗಳಿಗೆ ಫೋಸ್‌ ನೀಡುತ್ತಿದ್ದಾರೆ ಎಂದು ದೂರಿದರು.

ಧಾರವಾಡಕ್ಕೆ ಐಐಟಿ ತಂದಿದ್ದು ತಾವೇ ಎಂಬಂತೆ ಜೋಶಿ ಹೇಳಿ ಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಪಕ್ಷದ ಈ ಭಾಗದ ಮುಖಂಡರನ್ನು ಸೇರಿಸಿ ಸಿಎಂ ಮೇಲೆ ಒತ್ತಡ ತಂದು ಧಾರವಾಡದಲ್ಲಿ ಐಐಟಿ ಸ್ಥಾಪನೆಗೆ ನಾನು ಕಾರಣ. ರಾಜ್ಯ ಸರಕಾರ ಸುಮಾರು 480 ಎಕರೆ ಭೂಮಿ ನೀಡಿದೆ ಎಂದರು.

ಅಭಿವೃದ್ಧಿ ವಿಚಾರಕ್ಕೆ ಜೋಶಿ ಚರ್ಚೆಗೆ ಬರುವುದಾದರೆ ತಾವು ಸಿದ್ಧ. ಪಾಲಿಕೆಗೆ ಪಿಂಚಣಿ ಬಾಕಿ ಹಣ ಬಾರದಿರಲು ಬಿಜೆಪಿ ಆಡಳಿತ ಇರುವ ಪಾಲಿಕೆಯಿಂದ ಸರಿಯಾದ ಬಳಕೆ ಪ್ರಮಾಣ ಪತ್ರ ಇನ್ನಿತರ ದಾಖಲೆ ನೀಡದಿರುವುದೇ ಆಗಿದೆ. ಆದಾಗ್ಯೂ ಸುಮಾರು 16 ಕೋಟಿ ರೂ. ಬಾಕಿ ಹಣ ಬಿಡುಗಡೆ ಮಾಡಿಸಿದ್ದೇ ನಾನು. ಆದರೆ ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು ಎಂದು ಹೇಳಿದರು.

ಮೋರೆ ಬೆಂಬಲಕ್ಕೆ ವಿನಯ್‌ ಮೊರೆ
ಧಾರವಾಡ: ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಎಸ್‌.ಆರ್‌. ಮೋರೆ ಅವರ ಮನೆಗೆ ಕೈ-ದಳ ಮೈತ್ರಿಅಭ್ಯರ್ಥಿ ವಿನಯಕುಲಕರ್ಣಿ ಅವರು ಶುಕ್ರವಾರ ಭೇಟಿನೀಡಿದರು. ಈ ವೇಳೆ ಮೋರೆ ಅವರಿಗೆ ಶಾಲು ಹೊದಿಸಿ, ಸನ್ಮಾನಿಸಿದ ಕುಲಕರ್ಣಿ ಈ ಚುನಾವಣೆಯಲ್ಲಿ ಬೆಂಬಲ ನೀಡಿ ಪ್ರಚಾರ ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮೋರೆ, ನಾನು ಕಟ್ಟಾ ಕಾಂಗ್ರೆಸ್ಸಿಗ. ಪಕ್ಷದ ನಿರ್ಧಾರ ಸ್ವಾಗತಾರ್ಹ. ವಿನಯ ಕುಲಕರ್ಣಿ ಅವರಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು. ರಾಹುಲ್‌ ಗಾಂಧಿ ಪ್ರಧಾನ ಮಂತ್ರಿ ಆಗಬೇಕಾದರೆ ವಿನಯ ಅಂತಹ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು
ಬರುವುದು ಅಗತ್ಯ. ಹೀಗಾಗಿ ಕಾರ್ಯಕರ್ತರು ತಮ್ಮಲ್ಲಿರುವ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಮರೆತು ವಿನಯ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು. ಮಹೇಶ ಶೆಟ್ಟಿ, ಬಸವರಾಜ ಜಾಧವ ಇನ್ನಿತರರಿದ್ದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.