ವಿನಯ್‌ ಕುಲಕರ್ಣಿ ಕುದುರೆ ಸವಾರಿ


Team Udayavani, Apr 25, 2019, 2:46 PM IST

hub-2

ಧಾರವಾಡ: ಅಂಬಾ ಎಂದು ಕೂಗುವ ಹಸುಗಳನ್ನುಸಂತೈಸುವುದು..ಎರಡು ದಿನಗಳ ಹಿಂದಷ್ಟೇ ಜನ್ಮತಾಳಿದ ಕುದುರೆ ಮರಿಯೊಂದಿಗೆ ಆಟವಾಡುತ್ತ ಕಾಲಹರಣ..ಕುರಿಗಳ ಆರೋಗ್ಯ ತಪಾಸಣೆ.. ಹಾಲಿನ ಲೆಕ್ಕ ಪರಿಶೀಲನೆ..ಮಧ್ಯಾಹ್ನ ಮತ್ತೆ ಜನರೊಂದಿಗೆ ಬೆರೆತು ಮದುವೆ, ತಿಥಿ ಕಾರ್ಯಗಳಲ್ಲಿ ಭಾಗಿ..ಒಟ್ಟಿನಲ್ಲಿ ರಿಲ್ಯಾಕ್ಸ್‌ ಮೂಡ್‌…

ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿನಯ್‌ ಕುಲಕರ್ಣಿ ಅವರು ಚುನಾವಣೆ ಮರುದಿನ ಬುಧವಾರ ಇಡೀ ದಿನ ತಮ್ಮ ಮನೆ-ಡೈರಿ ಮತ್ತು ಜನರೊಂದಿಗೆ ಬೆರೆತು ಪೂರ್ಣ ರಿಲ್ಯಾಕ್ಸ್‌ ಮೂಡ್‌ನ‌ಲ್ಲಿ ಕಾಲ ಕಳೆದರು.

ಬೆಳಗ್ಗೆ ಬೇಗ ಎದ್ದು ಡೈರಿಯತ್ತ ಪ್ರಯಾಣ ಬೆಳೆಸಿದ ವಿನಯ್‌, ಇಡೀ ಡೈರಿ ತುಂಬಾ ಸುತ್ತಾಡಿ ಅಲ್ಲಿ ಕೆಲಸ ಮಾಡುವ ಆಳುಗಳಿಂದ ಪ್ರತಿ ಆಕಳ ಆರೋಗ್ಯ, ಅವುಗಳ ಆರೈಕೆ ಸೇರಿದಂತೆ ಅಲ್ಲಿನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು. ಅಷ್ಟೇಯಲ್ಲ ಅನಾರೋಗ್ಯಕ್ಕೊಳಗಾಗಿದ್ದ ಕೆಲವು ಆಕಳುಗಳನ್ನು ಖುದ್ದು ಪರಿಶೀಲನೆ ನಡೆಸಿ ತಪಾಸಣೆಗೆ ಸೂಚಿಸಿ ಅವುಗಳಿಗೆ ಲಸಿಕೆ ಕೊಡಿಸುವ ವ್ಯವಸ್ಥೆ ಮಾಡಿದರು.

ಕಳೆದ ಎರಡು ದಿನಗಳ ಹಿಂದಷ್ಟೇ ಜನ್ಮತಾಳಿದ ಅವರ ನೆಚ್ಚಿನ ಕುದುರೆಯ ಮರಿಯನ್ನು ಆರೈಕೆ ಮಾಡಿ ಅದರೊಂದಿಗೆ ಸ್ವಲ್ಪ ಹೊತ್ತು ಕಾಲ ಕಳೆದರು. ಇನ್ನು ಪಕ್ಕದಲ್ಲೇ ಇರುವ ಆಡು-ಕುರಿಗಳ ದೊಡ್ಡಿಗೂ ಹೋಗಿ ಅವುಗಳ ವ್ಯವಸ್ಥೆ ಪರಿಶೀಲಿಸಿ, ಅಲ್ಲಿನ ಕೆಲಸಗಾರರಿಗೆ ಸೂಕ್ತ ಕ್ರಮಗಳ ಕುರಿತು ಮಾಹಿತಿ-ಸಲಹೆ ನೀಡಿದರು.

ನಂತರ ಡೈರಿಗೆ ಬರುತ್ತಿದ್ದ ಅವರ ಅಭಿಮಾನಿಗಳೊಂದಿಗೆ ನಿನ್ನೆ ನಡೆದ ಚುನಾವಣೆ ಕುರಿತು ಸಾಕಷ್ಟು ವಿಚಾರಗಳನ್ನು ಚರ್ಚಿಸಿದರು. ಧಾರವಾಡ ಗ್ರಾಮೀಣ, ಕಲಘಟಗಿ, ಕುಂದಗೋಳ, ಶಿಗ್ಗಾವಿ, ಧಾರವಾಡ ಮತ್ತು ಹುಬ್ಬಳ್ಳಿಯಲ್ಲಿನ ಕ್ಷೇತ್ರಗಳಿಂದ ಆಗಮಿಸಿದ್ದ ಕಾರ್ಯಕರ್ತರೊಂದಿಗೂ ರಾಜಕೀಯ ವಿಚಾರಗಳನ್ನು ಚರ್ಚಿಸಿದರು. ಮಧ್ಯಾಹ್ನ ಡೈರಿಯಲ್ಲಿಯೇ ಕಾರ್ಯಕರ್ತರೊಂದಿಗೆ ಊಟ ಮಾಡಿದರು. ನಂತರ ಮನೆಗೆ ತೆರಳಿ ಕುಟುಂಬದವರೊಂದಿಗೆ ಒಂದಿಷ್ಟು ಹೊತ್ತು ಕಾಲ ಕಳೆದರು.

ಮದುವೆಗೂ ಭೇಟಿ: ಮಧ್ಯಾಹ್ನ ನಂತರ ಕಮಲಾಪೂರದಲ್ಲಿರುವ ಸಿದ್ದು ಸಪೂರಿ ಎಂಬುವರ ಮನೆಯಲ್ಲಿ ನಡೆಯುತ್ತಿದ್ದ ಮಂಗಳ ಕಾರ್ಯವೊಂದರಲ್ಲಿ ಪಾಲ್ಗೊಂಡು ಶುಭ ಕೋರಿದ ವಿನಯ್‌, ನಂತರ ಲಕಮಾಪೂರ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ವಧು ವರರನ್ನು ಹಾರೈಸಿದರು. ನಂತರ ಬಸವರಾಜ ಮಟ್ಟಿ ಎನ್ನುವರ ಮನೆಯಲ್ಲಿನ ದುಃಖ ತಪ್ತ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಈ ಚುನಾವಣೆಯಲ್ಲಿ ಎಲ್ಲಾ ಸಮುದಾಯ ಜನರು ನನ್ನ ಕೈ ಹಿಡಿದಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ನಾನು ವ್ಯವಸ್ಥಿತವಾಗಿ ಚುನಾವಣೆ ಕಾರ್ಯ ನಿರ್ವಹಿಸಿದ್ದು, ಹೀಗಾಗಿ ಗೆಲುವು ಖಚಿತ. ನಮ್ಮ ಶ್ರಮ ಮತ್ತು ನನ್ನ ಸೇವೆಗೆ ಜನರು ಈ ಬಾರಿ ಖಂಡಿತಾ ನನಗೆ ದೊಡ್ಡ ಜಯ ಕೊಡುತ್ತಾರೆ. ಯಶಸ್ಸು ಸಿಕ್ಕೇಸಿಗುತ್ತದೆ.
•ವಿನಯ್‌ ಕುಲಕರ್ಣಿ, ಮೈತ್ರಿ ಪಕ್ಷದ ಅಭ್ಯರ್ಥಿ.

ನನ್ನ ಪತಿಯ ಜನಸೇವೆಗೆ ಈ ಬಾರಿ ಖಂಡಿತಾ ಜಯ ಸಿಗುವ ವಿಶ್ವಾಸವಿದೆ. ಅವರು ಮಾಡಿದ ಕೆಲಸಕ್ಕೆ ಕೂಲಿ ಕೇಳಿದ್ದಾರೆ. ಈ ಬಾರಿ ಖಂಡಿತಾ ಜಯ ನಮ್ಮದೇ. ಅವರು ದಣಿವರಿಯದೇ ಕೆಲಸ ಮಾಡುವ ಗುಣ ಹೊಂದಿದ್ದಾರೆ. ಇದೀಗ ಮತ್ತೇ ಕುಂದಗೋಳ ಉಪ ಚುನಾವಣೆ ಬರುತ್ತಿದ್ದು ಅದಕ್ಕೆ ತಯಾರಿ ನಡೆಸುತ್ತಿದ್ದಾರೆ.
•ಶಿವಲೀಲಾ,ವಿನಯ್‌ ಕುಲಕರ್ಣಿ ಪತ್ನಿ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.