

Team Udayavani, Jul 4, 2018, 5:39 PM IST
ಬೆಳಗಾವಿ: ಖಾನಾಪುರ ಪಟ್ಟಣದಲ್ಲಿ ಅಂಬೇಡ್ಕರ ಭವನ ನಿರ್ಮಾಣಕ್ಕೆ ಮೀಸಲಿಟ್ಟಿರುವ ಜಾಗವನ್ನು ದಲಿತ ಸಂಘಟನೆಯಿಂದ ಮರಳಿ ಪಡೆದು ತಕ್ಷಣ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಬೇಕು ಎಂದು ಉಪ ವಿಭಾಗಾಧಿಕಾರಿ ಡಾ| ಕವಿತಾ ಯೋಗಪ್ಪನವರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ಎಸ್ಸಿ-ಎಸ್ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಖಾನಾಪುರದಲ್ಲಿ ಅಂಬೇಡ್ಕರ ಭವನ ನಿರ್ಮಾಣಕ್ಕೆ 50 ಲಕ್ಷ ರೂ. ಅನುದಾನ ಬಿಡುಗಡೆ ಆಗಿದೆ. ಆದರೆ ಜಾಗದ ಸಮಸ್ಯೆಯ ಕಾರಣ ಹೇಳಿ ನಿರ್ಲಕ್ಷ್ಯ ಮಾಡುವಂತಿಲ್ಲ ಎಂದರು.
ಜಿಲ್ಲಾ ಪಂಚಾಯತ್ ಸದಸ್ಯ ಜೀತೇಂದ್ರ ಮಾದರ ಮಾತನಾಡಿ, 10 ವರ್ಷಗಳ ಹಿಂದೆ ಖಾನಾಪುರದಲ್ಲಿ ಅಂಬೇಡ್ಕರ್ಭವನ ನಿರ್ಮಾಣಕ್ಕೆ 10 ಗುಂಟೆ ಜಾಗ ಖರೀದಿಸಲಾಗಿತ್ತು. ಇದಕ್ಕೆ ಸರ್ಕಾರ ಶೇ.80ರಷ್ಟು ಅನುದಾನ ನೀಡಿರುವ ಹಿನ್ನೆಲೆಯಲ್ಲಿ ಇದು ಸಾರ್ವಜನಿಕ ಆಸ್ತಿಯಾಗಿದೆ. ಆದರೆ ಈ ಜಾಗವನ್ನು ದಲಿತ ಸಂಘಟನೆ ಹೆಸರಿನಲ್ಲಿ ನೋಂದಣಿ ಮಾಡಿರುವುದರಿಂದ ಸಂಘಟನೆಯವರು ಅಂಬೇಡ್ಕರ ಭವನ ನಿರ್ಮಾಣಕ್ಕೆ ಜಾಗ ಬಿಟ್ಟುಕೊಡುತ್ತಿಲ್ಲ . ಇದರಲ್ಲಿ ತಾಪಂ ಅಧಿಕಾರಿಗಳ ನಿರ್ಲಕ್ಷ್ಯ ಇದೆ ಎಂದು ಹೇಳಿದರು.
ದೌರ್ಜನ್ಯಕ್ಕೆ ಒಳಗಾದ ಎಸ್ಸಿ – ಎಸ್ಟಿ ಸಮುದಾಯದ ಜನರು ಪೊಲೀಸ್ ಠಾಣೆಗಳಿಗೆ ದೂರು ಸಲ್ಲಿಸಲು ಹೋದರೆ ಪೊಲೀಸರು ಹೆದರಿಸುತ್ತಿದ್ದಾರೆ. ಇದರಿಂದ ಎಸ್ಸಿ ಮತ್ತು ಎಸ್ಟಿ ದೌರ್ಜನ್ಯ ಪ್ರಕರಣಗಳು ಪರಿಹಾರ ಕಾಣುತ್ತಿಲ್ಲ ಎಂದು ಸದಸ್ಯರು ದೂರಿದರು. ಸಭೆಯಲ್ಲಿ ಸಮಿತಿ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Ad
ಕಾಂಗ್ರೆಸ್ ಸೇರಲು BSY ಮುಂದಾಗಿದ್ರ… ಲಿಂಬಾವಳಿ ಹೇಳಿಕೆಗೆ ದೊಡ್ಡನಗೌಡ ಪಾಟೀಲ ಹೇಳಿದ್ದೇನು?
Heart attack: ಹೃದಯಾಘಾತಕ್ಕೆ ದಾವಣಗೆರೆ – ಧಾರವಾಡದಲ್ಲಿ ಇಬ್ಬರು ವಿದ್ಯಾರ್ಥಿಗಳು ಬಲಿ
Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್
ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್
Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ
Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್
Madenuru Manu: ಅತ್ಯಾಚಾ*ರ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಮಡೆನೂರು ಮನು
Actress: ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್ನ ಶವ ಪತ್ತೆ – ಫ್ಯಾನ್ಸ್ ಶಾಕ್
Optimistic: ಆಶಾವಾದಿಗಳಾಗೋಣ
Path of Life: ಬದುಕಿನ ದಾರಿಯಲ್ಲಿ ಬೆಳಕಿದೆ; ಧೈರ್ಯವಾಗಿ ಹೆಜ್ಜೆ ಹಾಕಿ
You seem to have an Ad Blocker on.
To continue reading, please turn it off or whitelist Udayavani.