ಗಳಿಕೆಗಿಂತ ಸೇವಾಭಾವ ಮುಖ್ಯ

ಎಸ್‌ಡಿಎಂ ದಂತ ಮಹಾವಿದ್ಯಾಲಯ ಘಟಿಕೋತ್ಸವದಲ್ಲಿ ಡಾ| ಹೆಗ್ಗಡೆ ಕಿವಿಮಾತು

Team Udayavani, Feb 26, 2021, 3:37 PM IST

Virendra Heggade

ಧಾರವಾಡ: ವೈದ್ಯಕೀಯ ಕ್ಷೇತ್ರದಲ್ಲಿ ಹಣ ಗಳಿಕೆಗಿಂತ ಸೇವಾ ಮನೋಭಾವವೇ ಮುಖ್ಯ ಎಂದು ಎಸ್‌ಡಿಎಂ ವಿವಿ ಕುಲಪತಿ, ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ನಗರದ ಸತ್ತೂರಿನ ಡಿ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಎಸ್‌ಡಿಎಂ ದಂತ  ವಿಜ್ಞಾನ ಮಹಾವಿದ್ಯಾಲಯದ 30ನೇ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು. ಪದವಿಯ ಅವಧಿಯಲ್ಲಿ ಗಳಿಸಿದ ವಿದ್ಯೆಯನ್ನು ರೋಗಿಗಳನ್ನು ಉಪಚರಿಸಲು ಬಳಸಬೇಕು. ಇದೇ ನೀವು ಕಲಿತ ದಂತ ಮಹಾವಿದ್ಯಾಲಯಕ್ಕೆ ನೀಡುವ ಕೊಡುಗೆ ಎಂದರಲ್ಲದೇ ಸೇವಾ ಮನೋಭಾವ ಉಳ್ಳವರು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬಲ್ಲರು ಎಂದರು.

ಶಿಕÒ‌ಣ ಪಡೆದ ಬಳಿಕ ಸಿಗುವ ಅನುಭವದಿಂದಲೇ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿದೆ  ಎಂದರು. ಕ್ಷೇತ್ರ ಯಾವುದೇ ಇರಲಿ. ಗುಣಮಟ್ಟ ಹೆಚ್ಚಿದಂತೆ ಜವಾಬ್ದಾರಿ ಜತೆ ಸ್ಪರ್ಧೆಯೂ ಇರಲಿದೆ. ಹೀಗಾಗಿ ಸೇವಾ ಅವಧಿಯಲ್ಲಿ ಗುಣಮಟ್ಟದ ಸೇವೆ ನೀಡುವ ಮೂಲಕ ಶಿಕ್ಷಣ ಪಡೆದ ಸಂಸ್ಥೆ-ಪಾಲಕರಿಗೆ ಉತ್ತಮ ಹೆಸರು ತರುವ ಕೆಲಸ ಮಾಡಬೇಕು. ಅದರಲ್ಲೂ ಜೀವನದಲ್ಲಿ ಯಶಸ್ಸಿಗಿಂತ ಆತ್ಮತೃಪ್ತಿ ಮುಖ್ಯ ಎಂಬುದನ್ನರಿತು ಮುನ್ನಡೆಯಬೇಕು ಎಂದರು.

ಇದೇ ಸಂದರ್ಭದದಲ್ಲಿ 100 ಪದವೀಧರರಿಗೆ ಹಾಗೂ 40 ಸ್ನಾತಕೋತ್ತರ ಪದವೀಧರರಿಗೆ ಪದವಿ ಪ್ರದಾನ ಮಾಡಲಾಯಿತು. ಉಪ ಕುಲಪತಿ ಡಾ|ನಿರಂಜನಕುಮಾರ, ದಂತ ಮಹಾವಿದ್ಯಾಲಯದ ಪ್ರಾಂಶುಪಾಲ  ಡಾ|ಬಲರಾಮ ನಾಯಕ, ಎಸ್‌ಡಿಎಂಇ ಸೊಸೈಟಿ ಕಾರ್ಯದರ್ಶಿ ವಿ.ಜೀವಂಧರಕುಮಾರ, ಆಡಳಿತ ನಿರ್ದೇಶಕ ಸಾಕೇತ ಶೆಟ್ಟಿ, ಹಿರಿಯ ಪ್ರಸೂತಿ ವೈದ್ಯೆ ಡಾ|ರತ್ನ ಮಾಲಾ ದೇಸಾಯಿ, ಪದ್ಮಲತಾ ನಿರಂಜನಕುಮಾರ, ಯು.ಎಸ್‌.ದಿನೇಶ ಪಾಲ್ಗೊಂಡಿದ್ದರು.

ಪಂಚಮಿ ಸ್ವಾಗತ ಗೀತೆ ಹಾಡಿದರು. ಡಾ|ಬಲರಾಮ ನಾಯ್ಕ ಸ್ವಾಗತಿಸಿ, ವಾರ್ಷಿಕ ವರದಿ ಮಂಡಿಸಿದರು.  ಡಾ|ಗೀತಾ ಹಿರೇಮಠ, ಡಾ|ಪ್ರಗತಿ, ಡಾ|ಪ್ರಿಯಾ, ಡಾ|ವೆಂಕಟೇಶ ಪರಿಚಯಿಸಿದರು. ಡಾ|ರೋಸಲೀನ್‌ ಪ್ರಮಾಣ ವಚನ ಬೋಧಿಸಿದರು. ಡಾ|ಐಶ್ವರ್ಯ ನಾಯ್ಕ ನಿರೂಪಿಸಿದರು. ಡಾ|ಸ್ವಾತಿ ಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.