ಸಿದ್ದು ಸಾಧನೆ ಅರಿಯದೆ ವಿಶ್ವನಾಥ ಹೇಳಿಕೆ ಸಲ್ಲ


Team Udayavani, May 14, 2019, 11:31 AM IST

hub-2

ಹುಬ್ಬಳ್ಳಿ: ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ ಅವರು ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಕೈಗೊಂಡ ಅಭಿವೃದ್ಧಿ ಯೋಜನೆಗಳ ಮಾಹಿತಿ ತಿಳಿದು ಹೇಳಿಕೆ ನೀಡುವುದು ಒಳಿತು ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ್ಳೆಯ ಕೆಲಸಗಳನ್ನು ಮಾಡಿದರೂ ಕೆಲವೊಮ್ಮೆ ಮತ್ತೆ ಅಧಿಕಾರಕ್ಕೇರಲು ಸಾಧ್ಯವಾಗಲ್ಲ. ಸಿದ್ದರಾಮಯ್ಯ ಜನಪರ ಕೆಲಸಗಳನ್ನು ಮಾಡಿದರೂ ನಮಗೆ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷಿಸಿದಷ್ಟು ಸೀಟುಗಳು ಸಿಗಲಿಲ್ಲ. 2004ರಲ್ಲಿ ಎಸ್‌.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಒಳ್ಳೆಯ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರು. ಆಗ ಕೂಡ ನಮ್ಮ ಪಕ್ಷ ನಿರೀಕ್ಷಿಸಿದಷ್ಟು ಸೀಟುಗಳನ್ನು ಗಳಿಸಲು ಸಾಧ್ಯವಾಗಲಿಲ್ಲ ಎಂದರು.

ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರ ಉತ್ತಮವಾಗಿ ಕಾರ್ಯ ಮಾಡುತ್ತಿದೆ. ಸಿದ್ದರಾಮಯ್ಯ ಮುಂದಿನ ಸಿಎಂ ಎಂಬ ಹೇಳಿಕೆ ನೀಡುವ ಮೂಲಕ ಕೆಲ ಕಾಂಗ್ರೆಸ್‌ ಶಾಸಕರು ಗೊಂದಲ ಮೂಡಿಸುತ್ತಿರುವುದು ಸರಿಯಲ್ಲ. ಗೊಂದಲ ಹೇಳಿಕೆ ನೀಡದಂತೆ ಶಾಸಕರಿಗೆ ಸೂಚಿಸಲಾಗುವುದು. ಈ ನಿಟ್ಟಿನಲ್ಲಿ ಪಕ್ಷದ ಉಸ್ತುವಾರಿ ಕೆ.ಸಿ. ವೇಣುಗೋಪಾಲ ಸ್ಪಷ್ಟನೆ ನೀಡಿದ್ದು, 5 ವರ್ಷಗಳ ಕಾಲ ಸಮ್ಮಿಶ್ರ ಸರಕಾರ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಜೆಡಿಎಸ್‌ ಮುಖಂಡರೇ ಆಗಲಿ, ಕಾಂಗ್ರೆಸ್‌ ಮುಖಂಡರೇ ಆಗಲಿ, ಮೈತ್ರಿ ಸರಕಾರಕ್ಕೆ ಧಕ್ಕೆ ಆಗುವ ರೀತಿಯಲ್ಲಿ ಯಾವುದೇ ಹೇಳಿಕೆ ನೀಡುವುದು ಸರಿಯಲ್ಲ ಎಂದರು.

ಸಮ್ಮಿಶ್ರ ಸರಕಾರದ ಜನಪರ ಯೋಜನೆಗಳು, ಪಕ್ಷದ ಮುಖಂಡರ ವ್ಯಾಪಕ ಪ್ರಚಾರ ಹಾಗೂ ಬಡವರ ಧ್ವನಿಯಾಗಿದ್ದ ಸಿ.ಎಸ್‌. ಶಿವಳ್ಳಿ ಬಗೆಗಿನ ಸಹಾನುಭೂತಿ ಅಲೆಯಿಂದ ಕುಂದಗೋಳ ಉಪ ಚುನಾವಣೆಯಲ್ಲಿ ಕುಸುಮಾವತಿ ಗೆಲುವು ಸಾಧಿಸುವುದು ಖಚಿತ. ಸಮ್ಮಿಶ್ರ ಸರಕಾರದ ಸ್ಥಿರತೆಯ ಕಾರಣದಿಂದ ಈ ಗೆಲುವು ಅವಶ್ಯ ಎಂದು ನುಡಿದರು.

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸುವ ಚಿಂತನೆ ನಡೆದಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಆದರೆ ನನ್ನ ಜವಾಬ್ದಾರಿ ಕಡಿಮೆ ಮಾಡುವಂತೆ ನಾನೇ ಮುಖಂಡರಿಗೆ ತಿಳಿಸಿದ್ದೇನೆ. ಉತ್ತರ ಕನ್ನಡದ ಜವಾಬ್ದಾರಿಯೊಂದಿಗೆ ಧಾರವಾಡ ಜಿಲ್ಲೆಯ ಉಸ್ತುವಾರಿ ಹೊಣೆಯೂ ನನ್ನ ಮೇಲಿದೆ ಎಂದು ಸಚಿವ ಆರ್‌.ವಿ. ದೇಶಪಾಂಡೆ ಹೇಳಿದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.