ಮತದಾರರ ಭೇಟಿಯಾದ ಕೆಪಿಸಿಸಿ ಉಸ್ತುವಾರಿ
Team Udayavani, Oct 17, 2017, 12:55 PM IST
ಧಾರವಾಡ: ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ-74ರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.12ರ ವ್ಯಾಪ್ತಿಯ ಬೂತ್ ನಂ.20ರ ಕೊಂಡವಾಡ ಓಣಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹತ್ತಾರು ಮನೆಗಳಿಗೆ ತೆರಳಿ ಜನಸಾಮಾನ್ಯರೊಂದಿಗೆ ಕುಳಿತು ಮಾತನಾಡಿದರು.
ಸರ್ಕಾರದ ಸಾಧನೆಗಳು ತಲುಪಿವಿಯೇ ಎಂದು ಪ್ರಶ್ನಿಸಿದರು. ಅಲ್ಲದೆ, ಕಾಂಗ್ರೆಸ್ ಪಕ್ಷದ ನಾಯಕರು, ಬೂತ್ ಮಟ್ಟದ ಕಾರ್ಯಕರ್ತರು ಆಗಮಿಸಿ ನಿಮಗೆ ರಾಜ್ಯ ಸರ್ಕಾರದ ಸಾಧನೆ ಪುಸ್ತಕ ವಿತರಿಸಿದ್ದಾರೆಯೇ ಎಂದು ಕೇಳಿ ಮಾಹಿತಿ ಸಂಗ್ರಹಿಸಿದರು.
ಬಳಿಕ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ ದೀಪಕ ಚಿಂಚೋರೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬುರಾನ್ ಗವಳಿ, ಮರಿಗೌಡ ಪಾಟೀಲ ಹಾಗೂ ಬೂತ್ ಕಮಿಟಿ ಅಧ್ಯಕ್ಷ ಸುನೀಲ ಹೊಂಗಲ್ ಅವರ ತಂಡದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಇದೇ ರೀತಿ ಸಕ್ರಿಯವಾಗಿ ಪಕ್ಷದ ಕೆಲಸ ಕಾರ್ಯಗಳಲ್ಲಿ ತೊಡಗುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ವೀಕ್ಷಕ ಮಾಣಿಕ್ಯಂ ಠ್ಯಾಗೂರ್, ಸಚಿವ ವಿನಯ ಕುಲಕರ್ಣಿ, ಕೆಪಿಸಿಸಿ ಕಾರ್ಯದರ್ಶಿಗಳಾದ ವೀರ ಕುಮಾರ ಪಾಟೀಲ, ಚಾಂದಪಾಷ, ಸುನೀಲಕುಮಾರ, ಚಂದ್ರಶೇಖರ, ಬಾನು, ಉಪಾಧ್ಯಕ್ಷ ಎ.ಎಂ. ಹಿಂಡಸಗೇರಿ, ವಿಧಾನ ಪರಿಷತ್ ಮಾಜಿ ಸದಸ್ಯ ವೀರಣ್ಣ ಮತ್ತಿಕಟ್ಟಿ, ಹಾಲಿ ಸದಸ್ಯ ಶ್ರೀನಿವಾಸ ಮಾನೆ,
-ಕಾಂಗ್ರೆಸ್ ಮುಖಂಡರಾದ ದೀಪಕ ಚಿಂಚೋರೆ, ಕೆಪಿಸಿಸಿ ಸದಸ್ಯರಾದ ರಾಬರ್ಟ ದದ್ದಾಪುರಿ, ಪ್ರಕಾಶ ಘಾಟಗೆ, ಹಜರತ್ ಅಲಿ ಗೊರವನಕೊಳ್ಳ, ರಾಣಿ ಚನ್ನಮ್ಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬುರಾನ್ ಗವಳಿ, ನವನಗರ ಬ್ಲಾಕ್ ಅಧ್ಯಕ್ಷ ಮರಿಗೌಡ ಪಾಟೀಲ, ಮಾಜಿ ಸಚಿವ ಎಸ್.ಆರ್ ಮೊರೆ, ಇಸ್ಮಾಯಿಲ್ ತಮಟಗಾರ, ಸ್ವಾತಿ ಮಳಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!