ಮತದಾನ ಜಾಗೃತಿಗೆ ಬಂದಿದೆ ಕಿರುಚಿತ್ರ


Team Udayavani, May 4, 2018, 7:05 AM IST

Voter-awareness-comes-from-.jpg

ಹುಬ್ಬಳ್ಳಿ: ಮತಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಕಡ್ಡಾಯ ಮತದಾನ ನಮ್ಮೆಲ್ಲರ ಕರ್ತವ್ಯ ಎಂಬ ಸಂದೇಶ ಹೊತ್ತ ಕಿರುಚಿತ್ರ
ವೊಂದನ್ನು ನಿರ್ಮಿಸುವ ಮೂಲಕ ಸಹೋದರರಿಬ್ಬರು ಗಮನ ಸೆಳೆದಿದ್ದಾರೆ. “ಒಂದು ಮತದ ಸುತ್ತ’ ಕಿರುಚಿತ್ರಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಇಲ್ಲಿನ ಕೃಷ್ಣ ಪಂತ ಹಾಗೂ ರಾಘವೇಂದ್ರ ಪಂತ ಎಂಬ ಸಹೋದರರು ರವಿರತ್ನ ಕ್ರಿಯೇಶನ್ಸ್‌ ಅಡಿಯಲ್ಲಿ 14 ನಿಮಿಷಗಳ ಈ ಕಿರುಚಿತ್ರ ನಿರ್ಮಿಸಿದ್ದು, ಇದು ಮತದಾನ ಹಕ್ಕಿನ ಮಹತ್ವವನ್ನು ಸಾರಿ ಹೇಳುತ್ತಿದೆ.

ಕಿರುಚಿತ್ರದಲ್ಲಿ ರಂಗಾಯಣ ಮಾಜಿ ನಿರ್ದೇಶಕ, ರಂಗಕರ್ಮಿ ಸುಭಾಸ ನರೇಂದ್ರ, ಯುವಕರಿಗೆ ಮತದಾನ ಮಹತ್ವದ ಮನನ ಮಾಡುವ ಉಪನ್ಯಾಸಕರ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಉಳಿದಂತೆ ಪ್ರಕಾಶ ಧುಳೆ, ಕೇಶವ ಕರ್ಜಗಿ ಸೇರಿ ಸುಮಾರು 15 ಕಲಾವಿದರು ನಟಿಸಿದ್ದಾರೆ. ಶಿವಾನಿ ಅಕ್ಕಿ ಅವರ ಹಿನ್ನೆಲೆ ಗಾಯನವಿದೆ. ನಾಲ್ಕೈದು ದಿನಗಳಲ್ಲಿ ಒಟ್ಟಾರೆಯಾಗಿ ಕಿರುಚಿತ್ರದ ನಿರ್ಮಾಣ
ಕಾರ್ಯ ಮುಗಿಸಲಾಗಿತ್ತು.

ಮೇ 2 ರಂದು ಯುಟ್ಯೂಬ್‌ನಲ್ಲಿ ಕಿರುಚಿತ್ರ ಬಿಡುಗಡೆಯಾಗಿದ್ದು,ಇದುವರೆಗೆ ಸುಮಾರು 3,200ಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ.

ಮತದಾನ ದಿನ ರಜೆ ಇರುವುದರಿಂದ ಅಕ್ಷರವಂತರು ಹಾಗೂ ನಗರವಾಸಿಗಳು ಮತದಾನ ಮಾಡದೆ ರಜೆ ಮಜಾ ಸವಿಯಲು ಬೇರೆ ಕಡೆ ಹೋಗುತ್ತಿರುವುದು ಸಾಮಾನ್ಯ. ಅದೇ ರೀತಿ ಯಾರಿಗೆ ಮತ ಹಾಕಿದರೆ ಪ್ರಯೋಜನ ಏನಿದೆ. ಯಾರು ಬಂದು
ಮಾಡುವುದಾದರೂ ಏನು. ಎಲ್ಲರೂ ಅವರೇ ಎಂಬ ಮನೋಭಾವ ಯುವಕರಲ್ಲಿ ಹೆಚ್ಚುತ್ತಿದ್ದು, ಮತದಾನಕ್ಕೆ ನಿರಾಸಕ್ತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಿರುಚಿತ್ರದ ಮೂಲಕ ಜಾಗೃತಿ ಮೂಡಿಸಲು, ಯುವಕರು ಹಾಗೂ ವಿಶೇಷವಾಗಿ ಮತದಾನ ದಿನ ರಜೆ ಮಜಾ ಸವಿಯಲು ತೆರಳುವವರನ್ನು ಮತದಾನಕ್ಕೆ ಆಕರ್ಷಿಸಲು ಯತ್ನಿಸಲಾಗಿದೆ. ನಾವು ಯಾವುದೇ ಪಕ್ಷ-ವ್ಯಕ್ತಿ ಪರ ಪ್ರಚಾರ ಸಂದೇಶ ನೀಡಿಲ್ಲ.
ಬದಲಾಗಿ ಯಾವುದೇ ಪಕ್ಷ ಅಥವಾ ಯಾವುದೇ ವ್ಯಕ್ತಿಯಾಗಲಿ ಒಟ್ಟಾರೆ ಮತದಾನ ಮಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಬಹುದೊಡ್ಡ ಮೌಲ್ಯ ಹಾಗೂ ಮಹತ್ವ ಇದೆ ಎಂಬ ಸಂದೇಶವನ್ನು ಒಂದು ಮತದ ಸುತ್ತ ಕಿರುಚಿತ್ರ ನೀಡುತ್ತಿದೆ ಎಂಬುದು ಕಿರುಚಿತ್ರದ ನಿರ್ದೇಶಕ ರಾಘವೇಂದ್ರ ಪಂತ ಅವರ ಅನಿಸಿಕೆ.

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

8-

Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.