ಮತದಾನ ಜಾಗೃತಿ ಗೀತೆ ಬಿಡುಗಡೆ


Team Udayavani, May 4, 2018, 4:19 PM IST

4-May-21.jpg

ಧಾರವಾಡ: ಮತದಾನ ಜಾಗೃತಿಗಾಗಿ ಉತ್ತರ ಕರ್ನಾಟಕದ ಜನರನ್ನು ಸೆಳೆಯುವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್‌ ಸಮಿತಿಯು ಸಂತತ ಟ್ರಸ್ಟ್‌ನ ಯುವಕರು ಹೊರ ತಂದಿರುವ ‘ಬಂದೇಬಿಡ್ತು ಇಲೆಕ್ಷನ್ನು ಮಾಡ್ರಿ ಒಳ್ಳೆ ಸೆಲೆಕ್ಷನ್ನು’ ಜಾಗೃತಿ ಗೀತೆಯ ಡಿವಿಡಿಯನ್ನು ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷೆ, ಜಿಪಂ ಸಿಇಒ ಸ್ನೇಹಲ್‌ ಆರ್‌ ಲೋಕಾರ್ಪಣೆಗೊಳಿಸಿದರು.

ಈ ವೇಳೆ ಮಾತನಾಡಿದ ಜಿಪಂ ಸಿಇಒ ಸ್ನೇಹಲ್‌, ಸ್ಥಳೀಯ ಪ್ರತಿಭೆಗಳು ಉತ್ತರ ಕರ್ನಾಟಕದ ಅಸ್ಮಿತೆಯೊಂದಿಗೆ ಮನೋಜ್ಞವಾಗಿ ನಿರ್ಮಿಸಿರುವ 3.5 ನಿಮಿಷಗಳ ಜಾಗೃತಿ ಗೀತೆಯು ಲೋಕಾರ್ಪಣೆಯಾಗಿದೆ. ಎಲ್ಲ ಸಾಮಾಜಿಕ ಜಾಲತಾಣಗಳು ಹಾಗೂ ಅಂತರ್ಜಾಲದ ಮೂಲಕ ಜಿಲ್ಲೆಯ ಜನರನ್ನು ವಿಶೇಷವಾಗಿ ಯುವ ಜನರನ್ನು ಮತದಾನದತ್ತ ಸೆಳೆಯಲು ಈ ಗೀತೆ ಸಹಕಾರಿಯಾಗಲಿದೆ. ನಾಗರಾಜ ಪಾಟೀಲ, ಮಹಾನಂದ ದೇಸಾಯಿ ನೇತೃತ್ವದಲ್ಲಿ ಸಂತತ ಟ್ರಸ್ಟ್‌ನ ಯುವಕರ ಕಾರ್ಯ ಶ್ಲಾಘನೀಯವಾಗಿದೆ. ಸ್ವಯಂ ಪ್ರೇರಣೆಯಿಂದ ಅವರು ಈ ಸೃಜನಶೀಲ ಗೀತೆಯನ್ನು ಲಭ್ಯ ಸೀಮಿತ ಸಂಪನ್ಮೂಲಗಳಿಂದ ತಯಾರಿಸಿದ್ದಾರೆ ಎಂದರು.

ಮೇ 5ರಂದು ಧಾರವಾಡದ ರೋಟರಿ ಕ್ಲಬ್‌, ಎಸ್‌ಡಿಎಂ ಇಂಜಿನಿಯರಿಂಗ್‌ ಕಾಲೇಜ್‌, ಶ್ರೇಯಾ ನರ್ಸಿಂಗ್‌ ಕಾಲೇಜುಗಳ ಸಹಯೋಗದಲ್ಲಿ ವಾಕ್‌ಥಾನ್‌ ಹಾಗೂ ಸ್ಕೇಟಿಂಗ್‌ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9:30ಗಂಟೆಗೆ ಮಲ್ಲಿಕಾರ್ಜುನ ಮನಸೂರ ಕಲಾಭವನ ಆವರಣದಿಂದ ಜಾಥಾ ಹೊರಡಲಿದೆ ಎಂದರು.

ಮಾದರಿ ನೀತಿ ಸಂಹಿತೆ ನೋಡಲ್‌ ಅಧಿಕಾರಿಯಾಗಿರುವ ಡಿಸಿಎಫ್‌ ಮಹೇಶಕುಮಾರ ಮಾತನಾಡಿ, ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ ಎಂದರು.ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ, ಸಂತತ ಟ್ರಸ್ಟ್‌ನ ನಾಗರಾಜ ಪಾಟೀಲ, ಮಹಾನಂದಾ ಗೋಸಾವಿ, ಗೋಪಾಲ್‌ ಉಣಕಲ್‌, ನಯನ ಮೇಟಿ, ಸಮುದ್ರ ಪಟ್ಟಣಶೆಟ್ಟಿ, ವಿನೋದ ನಾಯಕ ಸೇರಿದಂತೆ ಜಾಗೃತಿ ಗೀತೆ ನಿರ್ಮಿಸಿದ ತಂಡದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಹಿಂದಿನ ಚುನಾವಣೆಗಳಲ್ಲಿ ಕಡಿಮೆ ಮತದಾನ ಆಗಿರುವ ನಗರ ಪ್ರದೇಶಗಳ 21 ಕಡೆಗಳಲ್ಲಿ ಬೀದಿ ನಾಟಕ, ಡೊಳ್ಳು ಕುಣಿತ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಈ ಬಾರಿ ಮಹಿಳಾ ಮತದಾರರನ್ನು ಪ್ರೋತ್ಸಾಹಿಸಲು ಜಿಲ್ಲಾದ್ಯಂತ 15 ಗುಲಾಬಿ (ಸಖೀ) ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಇಲ್ಲಿ ಪೊಲೀಸರು ಸೇರಿದಂತೆ ಎಲ್ಲ ಅಧಿಕಾರಿ, ಸಿಬ್ಬಂದಿಗಳನ್ನು ಮಹಿಳೆಯರನ್ನೇ ನೇಮಿಸಲಾಗುತ್ತದೆ.
.ಸ್ನೇಹಲ್‌ ರಾಯಮಾನೆ,
ಅಧ್ಯಕ್ಷೆ, ಜಿಲ್ಲಾ ಸ್ವೀಪ್‌ ಸಮಿತಿ, ಧಾರವಾಡ

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.