ಜಿದ್ದಾಜಿದ್ದಿ ಹೋರಾಟಕ್ಕೆ ವಾರ್ಡ್‌ಗಳು ವೇದಿಕೆ

•ಪುರಸಭೆ ಅಂಗಳದಲ್ಲಿ ರಾಜಕೀಯ ಭವಿಷ್ಯದ ಕನಸು•ಪ್ರತಿಷ್ಠೆ ಕಣವಾದ ಮಿನಿ ಸಮರಾಂಗಣ

Team Udayavani, May 27, 2019, 2:36 PM IST

hubali-tdy-3..

ಅಳ್ನಾವರ ಪಪಂ

ಅಳ್ನಾವರ: ತಾಲೂಕು ಕೇಂದ್ರವಾದ ನಂತರ ಮೊದಲ ಬಾರಿಗೆ ನಡೆಯುತ್ತಿರುವ ಸ್ಥಳೀಯ ಪಪಂ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಮತ್ತು ಸ್ವತಂತ್ರ ಅಭ್ಯರ್ಥಿಗಳು ರವಿವಾರ ಭರ್ಜರಿ ಮತಬೇಟೆ ನಡೆಸಿದ್ದು, ಜಿದ್ದಾಜಿದ್ದಿ ಹೋರಾಟಕ್ಕೆ ಕೆಲವು ವಾರ್ಡ್‌ಗಳು ವೇದಿಕೆಯಾಗಿವೆ.

ವಾರ್ಡ್‌ ನಂ. 5, 10, 12, 14ರಲ್ಲಿ ತುರುಸಿನ ಸ್ಪರ್ಧೆ ಏರ್ಪಟ್ಟಿದ್ದು, ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ವಾರ್ಡ್‌ 5ರಲ್ಲಿ ತ್ರಿಕೋನ ಸ್ಪರ್ಧೆ ಇದ್ದರೂ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಹಣಾಹಣಿ ನಡೆಯುತ್ತಿದೆ. ಹಿಂದಿನ ಅವಧಿಯಲ್ಲಿ ಕಾಂಗ್ರೆಸ್‌ ಸದಸ್ಯರಾಗಿದ್ದ ಛಗನಲಾಲ ಪಟೇಲ ಮತ್ತು ರಾಜೇಶ ಬೈಕೇರಿಕರ ಇಂದು ಎದುರಾಳಿಗಳಾಗಿದ್ದಾರೆ. ಛಗನಲಾಲ ಕಾಂಗ್ರೆಸ್‌ನಿಂದ ರಾಜೇಶ ಬಿಜೆಪಿಯಿಂದ ಕಣದಲ್ಲಿದ್ದಾರೆ. ಇವರ ನಡುವೆ ಮೆಹಬೂಬ ಜಾತಿಗೇರ ಜೆಡಿಎಸ್‌ ಅಭ್ಯರ್ಥಿಯಾಗಿದ್ದಾರೆ.

ವಾರ್ಡ್‌ 10ರಲ್ಲಿ ಹಿಂದಿನ ಅವಧಿ ಉಪಾಧ್ಯಕ್ಷರಾಗಿದ್ದ ಉಸ್ಮಾನ್‌ ಬಾತಖಂಡೆ ಮತ್ತು ಜೆಡಿಎಸ್‌ ಜಿಲ್ಲಾಧ್ಯಕ್ಷರಾಗಿದ್ದ ದಿ| ಮುಜಾಹಿದ್‌ ಕಂಟ್ರಾಕ್ಟರ ಅವರ ಪುತ್ರ ನದೀಮ್‌ ಕಂಟ್ರಾಕ್ಟರ ನಡುವೆ ಸ್ಪರ್ಧೆ ನಡೆಯುತ್ತಿದೆ. ವಾರ್ಡ್‌ 12ರಲ್ಲಿ ಪಪಂ ಮಾಜಿ ಅಧ್ಯಕ್ಷ ಶಿವಾನಂದ ಹೊಸಕೇರಿ ಕಾಂಗ್ರೆಸ್‌ನಿಂದ, ಲಿಂಗರಾಜ ಮೂಲಿಮನಿ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್‌ ಟಿಕೆಟ್ ವಂಚಿತರಾದ ಶಿವಲಿಂಗ ಜಕಾತಿ ಹಾಗೂ ರಮೇಶ ಕುನ್ನೂರಕರ ಪಕ್ಷೇತರರಾಗಿ ಕಣದಲ್ಲಿದ್ದು, ಕಣ ರಂಗೇರಿದೆ.

ಎಲ್ಲರ ಚಿತ್ತ ಇತ್ತ: ಹಿಂದುಳಿದ ಅ ವರ್ಗದ ಮಹಿಳೆಗೆ ಮೀಸಲಿರುವ 14ನೇ ವಾರ್ಡ್‌ನಲ್ಲಿ ಭರಾಟೆ ಜೋರಾಗಿದ್ದು, ಎಲ್ಲರ ಕಣ್ಣು ಅಲ್ಲಿಯೇ ಇದೆ. ಮಾಜಿ ಶಾಸಕ ದಿ| ಶಶಿಧರ ಅಂಬಡಗಟ್ಟಿ ಅವರ ಪತ್ನಿ ಸಂಧ್ಯಾ ಅವರು ಜೆಡಿಎಸ್‌ನಿಂದ ಕಣದಲ್ಲಿದ್ದಾರೆ. ಇವರಿಗೆ ಎದುರಾಳಿಯಾಗಿ ರಶ್ಮಿ ತೇಗೂರ ಕಾಂಗ್ರೆಸ್‌ನಿಂದ ಹಾಗೂ ಅನ್ನಪೂರ್ಣಾ ಕೌಜಲಗಿ ಬಿಜೆಪಿಯಿಂದ ತುರುಸಿನ ಸ್ಪರ್ಧೆ ಒಡ್ಡಿದ್ದಾರೆ.

ಸ್ಥಳೀಯ ಅರ್ಬನ್‌ ಬ್ಯಾಂಕ್‌ ನಿರ್ದೇಶಕರಾಗಿ, ಅಖೀಲ ಭಾರತ ವೀರಶೈವ ಮಹಾಸಭಾದ 2ನೇ ಅವಧಿ ನಿರ್ದೇಶಕರಾಗಿ ಹಾಗೂ ಮಲಪ್ರಭಾ ಸಕ್ಕರೆ ಕಾರ್ಖಾನೆ ನಿರ್ದೇಶಕರಾಗಿರುವ ಸಂಧ್ಯಾ ಅಂಬಡಗಟ್ಟಿ ತಮ್ಮ ಪತಿಯ ಸಾಧನೆ ಹಾಗೂ ಕುಟುಂಬದ ಇನ್ನೊಬ್ಬ ಸದಸ್ಯ, ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಅವರ ವರ್ಚಸ್ಸು ಕೈ ಹಿಡಿಯುವ ವಿಶ್ವಾಸದಲ್ಲಿದ್ದಾರೆ. ಇಲ್ಲಿ ರಶ್ಮಿ ತೇಗೂರ ಅವರೂ ಪ್ರಭಾವಿ ಪ್ರತಿಸ್ಪರ್ಧಿಯಾಗಿದ್ದಾರೆ. ರಶ್ಮಿ ಅವರ ಪತಿ ಪರಮೇಶ್ವರ ತೇಗೂರ ಹಿಂದಿನ ಅವಧಿಯಲ್ಲಿ ಪುರಸಭೆ ಸದಸ್ಯರಾಗಿದ್ದು, ತಮ್ಮದೇಯಾದ ಹಿಡಿತ ಹೊಂದಿದ್ದಾರೆ.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.