ಯೋಧ ಹುತಾತ್ಮ: ಸಾಂತ್ವನ ಹೇಳಲು ಬಾರದ ಜನಪ್ರತಿನಿಧಿಗಳು; ಗ್ರಾಮಸ್ಥರ ತೀವ್ರ ಆಕ್ರೋಶ
Team Udayavani, Oct 2, 2019, 1:18 PM IST
ಹುಬ್ಬಳ್ಳಿ: ವೀರಯೋಧ ಮಂಜಪ್ಪ ಓಲೇಕಾರ ಹುತಾತ್ಮರಾದ ಹಿನ್ನಲೆಯಲ್ಲಿ ಗ್ರಾಮಕ್ಕೆ ಜನಪ್ರತಿನಿಧಿಗಳು ಆಗಮಿಸದ್ದರಿಂದ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಮ್ಮು-ಕಾಶ್ಮೀರ ಗಡಿಯಲ್ಲಿ ಉಗ್ರರ ಜೊತೆಗೆ ನಡೆದ ಗುಂಡಿನ ದಾಳಿಯಲ್ಲಿ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರದ ಮಂಜುನಾಥ ಹನುಮಂತಪ್ಪ ಓಲೇಕಾರ (29) ಎಂಬ ಯೋಧ ಹುತಾತ್ಮರಾಗಿದ್ದರು. 20ನೇ ವರ್ಷದಲ್ಲಿ ಯೋಧನಾಗಿ ಸೇವೆ ಆರಂಭಿಸಿದ್ದ ಅವರು, 6 ತಿಂಗಳ ಹಿಂದಷ್ಟೇ ವಿವಾಹವಾಗಿ ಕರ್ತವ್ಯಕ್ಕೆ ಮರಳಿದ್ದರು. ಹುತಾತ್ಮ ಯೋಧ ಮಂಜುನಾಥ ಕಳೆದ 9 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು.
ಹುತಾತ್ಮರಾದ ಹಿನ್ನಲೆಯಲ್ಲಿ ಸಾಂತ್ವಾನ ಹೇಳಲು ಗ್ರಾಮಕ್ಕೆ ಶಾಸಕರು, ಸಂಸದರು ಬಾರದೆ ವೀರಯೋಧನಿಗೆ ಅವಮಾನ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ, ಕೇಂದ್ರ ಸಚಿವ ಹುಬ್ಬಳ್ಳಿಯಲ್ಲಿದ್ದರೂ ಆಗಮಿಸಿಲ್ಲ ಎಂದು ಗ್ರಾಮಸ್ಥರ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಒಂದು ಗಂಟೆ ಸಮಯ ನೀಡಿರುವ ಗ್ರಾಮಸ್ಥರು. ಜನಪ್ರತಿನಿಧಿಗಳು ಬಾರದಿದ್ದರೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಚಿಂತನೆ ನಡೆಸಿದ್ದಾರೆ. ಗ್ರಾಮದ ಹುತಾತ್ಮ ಯೋಧನ ನಿವಾಸದ ಎದುರು ಅಂತಿಮ ದರ್ಶನಕ್ಕೆ ಸಿದ್ದತೆ ನಡೆಸಲಾಗಿದ್ದು, ಗ್ರಾಮದ ಶಾಲೆ ಪಕ್ಕದಲ್ಲಿ ಅಂತ್ಯಸಂಸ್ಕಾರ ಮಾಡಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು