ಮೂರು ದಿನಕ್ಕೊಮ್ಮೆ ನೀರು ತಿಂಗಳಲ್ಲಿ ಜಾರಿ: ಇಟ್ನಾಳ
Team Udayavani, Jan 27, 2020, 11:41 AM IST
ಹುಬ್ಬಳ್ಳಿ: ಮಲಪ್ರಭಾ ಜಲಾಶಯದಿಂದ ಹೆಚ್ಚುವರಿ 40 ಎಂಎಲ್ಡಿ ನೀರು ಪೂರೈಕೆ ಯೋಜನೆ ಶೀಘ್ರದಲ್ಲಿ ಪೂರ್ಣಗೊಳ್ಳಲಿದ್ದು, ಮುಂದಿನ ಒಂದು ತಿಂಗಳಲ್ಲಿ ನಗರದಲ್ಲಿ ಮೂರು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಹೇಳಿದರು.
ಈದ್ಗಾ ಮೈದಾನದಲ್ಲಿ 71ನೇ ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕಳೆದ ವರ್ಷ ಉತ್ತಮ ಮಳೆಯಾಗಿರುವುದರಿಂದ ಮಲಪ್ರಭಾ ಹಾಗೂ ನೀರಸಾಗರ ಜಲಾಶಯ ಭರ್ತಿಯಾಗಿ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ. 40 ಎಂಎಲ್ಡಿ ಹೆಚ್ಚುವರಿ ನೀರು ಪಡೆಯುವ ಯೋಜನೆ ಶೀಘ್ರದಲ್ಲಿ ಉದ್ಘಾಟನೆಯಾಗಲಿದೆ. ಇದರಿಂದ ಐದು ದಿನಗಳ ಬದಲು ಮೂರು ದಿನಕ್ಕೊಮ್ಮೆ ನೀರು ದೊರೆಯಲಿದೆ ಎಂದರು.
ಮಹಾನಗರದ ಎಲ್ಲ ವಾರ್ಡ್ಗಳಿಗೆ 24/7 ನೀರು ಸರಬರಾಜು ಯೋಜನೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ವಿಶ್ವಸಂಸ್ಥೆಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದೆ. ಮಹಾನಗರದಲ್ಲಿ ವಿವಿಧ ಅನುದಾನಗಳಲ್ಲಿ 176 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಗೆ 120 ಕೋಟಿ ರೂ. ಮಂಜೂರು ಮಾಡುವಂತೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಕಟ್ಟಡ ತ್ಯಾಜ್ಯ ನಿರ್ವಹಣಗಾಗಿ ಸುಸಜ್ಜಿತ ಘಟಕ ಏಪ್ರೀಲ್ ತಿಂಗಳಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ತಿಳಿಸಿದರು.
ಮಹಾಗರದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಲ್ಲಿ 365 ಕೋಟಿ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. 325 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ. ಇನ್ನೂ ಸುಮಾರು 300 ಕೋಟಿ ರೂ. ಟೆಂಡರ್ ಕರೆಯಬೇಕಾಗಿದೆ. 2 ವರ್ಷದಲ್ಲಿ ಬಹುತೇಕ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಕೇಂದ್ರ ರಸ್ತೆ ನಿಧಿ ಯೋಜನೆಯಲ್ಲಿ ನಗರದ ಪ್ರಮುಖ 6 ರಸ್ತೆಗಳಲ್ಲಿ ಮೂರು ರಸ್ತೆಗಳು ಕಾಂಕ್ರೀಟಿಕರಣವಾಗಿದ್ದು, ಉಳಿದ ರಸ್ತೆಗಳ ಕಾಮಗಾರಿ ನಡೆಯುತ್ತಿದೆ ಎಂದರು.
ಮಹಾನಗರದಲ್ಲಿ ಶೇ.30 ಒಳಚರಂಡಿ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಇದಕ್ಕಾಗಿ ಸುಮಾರು 430 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆ ಸಿದ್ಧಪಡಿಸಿ ಸರಕಾರಕ್ಕೆ ಕಳುಹಿಸಲಾಗಿದೆ. ಹಿಂದೆ ಆಗಿರುವ ಸಂಪರ್ಕ ಜಾಲದಲ್ಲಿ ಹಲವು ನ್ಯೂನತೆಗಳು ಕಂಡು ಬಂದಿದ್ದು, ಅವುಗಳನ್ನು ಸರಿಪಡಿಸುವ ಕೆಲಸ ಆಗಲಿದೆ ಎಂದು ಹೇಳಿದರು.
ಮಾಜಿ ಮಹಾಪೌರರಾದ ಡಿ.ಕೆ. ಚವ್ಹಾಣ, ಸುಧೀರ ಸರಾಫ್, ಮಾಜಿ ಸದಸ್ಯ ರಾಜಣ್ಣ ಕೊರವಿ, ಅಧಿಕಾರಿಗಳಾದ ಪಿ.ಡಿ. ಗಾಳೆಮ್ಮನವರ, ಎಸ್.ಸಿ.ಬೇವೂರು, ಎಸ್.ಎಚ್. ನರೇಗಲ್ಲ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ