ಶುದ್ಧ ಕುಡಿವ ನೀರು ಪೂರೈಕೆಗೆ ಜಲಧಾರೆ ಯೋಜನೆ
Team Udayavani, Aug 30, 2018, 7:00 AM IST
ಹುಬ್ಬಳ್ಳಿ: ರಾಜ್ಯದ ಪ್ರತಿಯೊಂದು ವಸತಿ ಪ್ರದೇಶಕ್ಕೆ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಸುಮಾರು 53
ಸಾವಿರ ಕೋಟಿ ರೂ.ವೆಚ್ಚದಲ್ಲಿ “ಜಲಧಾರೆ’ ಯೋಜನೆ ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ
ಬೈರೇಗೌಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಳವೆಗಳ ಮೂಲಕ ಜನರಿಗೆ ನೀರು ಪೂರೈಸುವ ಶಾಶ್ವತ ಪರಿಹಾರ ನೀಡುವ ಯೋಜನೆ ಇದಾಗಿದೆ. ಈ ಬೃಹತ್ ಯೋಜನೆಯ ಅನುಷ್ಠಾನಕ್ಕೆ ಸುಮಾರು 6 ವರ್ಷ ಬೇಕಾಗ ಬಹುದು ಎಂದು
ಅಂದಾಜಿಸಲಾಗಿದೆ. ತಾಂತ್ರಿಕ ಕೌಶಲ್ಯ ಹಾಗೂ ರೂಪುರೇಷೆಗಳನ್ನು ತಯಾರಿ ಸಲು ಒಂದು ವರ್ಷ ಬೇಕು. ನದಿಗಳನ್ನು ಪ್ರಮುಖವಾಗಿ ಅವಲಂಬಿಸಿ ಕೊಂಡು ಈ ಯೋಜನೆ ಸಾಕಾರಗೊಳ್ಳಲಿದೆ ಎಂದರು.