ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನೇಕಾರರ ಪ್ರತಿಭಟನೆ
•ಗುಣಮಟ್ಟ ನೆಪದಲ್ಲಿ ನೇಕಾರರಿಗೆ ವಿನಾಕಾರಣ ಕಿರುಕುಳ ಆರೋಪ•ಕೈಮಗ್ಗ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಕಿಡಿ
Team Udayavani, Jun 14, 2019, 1:24 PM IST
ಹುಬ್ಬಳ್ಳಿ: ವಿದ್ಯಾನಗರದಲ್ಲಿರುವ ಕೈಮಗ್ಗ ಅಭಿವೃದ್ಧಿ ನಿಗಮದ ಪ್ರಧಾನ ಕಚೇರಿ ಮುಂಭಾಗದಲ್ಲಿ ಕೈಮಗ್ಗ ನೇಕಾರರು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕೈಮಗ್ಗ ನೇಕಾರರು ವಿದ್ಯಾನಗರದ ಕೈಮಗ್ಗ ಅಭಿವೃದ್ಧಿ ನಿಗಮದ ಪ್ರಧಾನ ಕಚೇರಿ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಸಂಘದ ಉಪಾಧ್ಯಕ್ಷ ಎನ್.ಜೆ. ಮಾಳವದೆ ಮಾತನಾಡಿ, ಗುಣಮಟ್ಟದ ನೆಪದಲ್ಲಿ ನೇಕಾರರಿಗೆ ವಿನಾಕಾರಣ ಕಿರುಕುಳ ನೀಡಲಾಗುತ್ತಿದೆ. ನೇಯ್ದ ಬಟ್ಟೆಯನ್ನು ಖರೀದಿ ಮಾಡದಿರುವುದು ನೇಕಾರರಿಗೆ ದೊಡ್ಡ ಸಮಸ್ಯೆಯಾಗಿದ್ದು, ನಷ್ಟ ಅನುಭವಿಸುವಂತಾಗಿದೆ. ನೇಕಾರರಿಗೆ ಉದ್ಯೋಗ ನೀಡದೆ ಹೊರಗಿನಿಂದ ಬಟ್ಟೆ ಖರೀದಿ ಮಾಡುತ್ತಿರುವುದು ನಿಯಮ ಬಾಹಿರವಾಗಿದೆ ಎಂದು ಆರೋಪಿಸಿದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರ ಸುಮಾರು 80 ಕೋಟಿ ರೂ. ಮೌಲ್ಯದ ಬಟ್ಟೆಯನ್ನು ಹೊರಗಿನಿಂದ ಖರೀದಿ ಮಾಡಿದ್ದಾರೆ. ನಷ್ಟದ ಹೆಸರಲ್ಲಿ ಹಲವು ಮಗ್ಗಗಳನ್ನು ಮುಚ್ಚಿಸಲಾಗಿದೆ. ವ್ಯವಸ್ಥಾಪಕ ನಿರ್ದೇಶಕರು ನೇಕಾರರ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಇಂತಹ ಎಂಡಿಯನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದರು.
ಸಂಘದ ಉಪಾಧ್ಯಕ್ಷ ವಿಠಪ್ಪ ಗೋರಂಟ್ಲಿ ಮಾತನಾಡಿ, ಕಳೆದ ಒಂದು ವರ್ಷದಿಂದ ನೇಕಾರರಿಗೆ ನೀಡುತ್ತಿದ್ದ ಇನ್ಸೆಂಟಿವ್ ಸ್ಥಗಿತಗೊಂಡಿದೆ. ಮಕ್ಕಳಿಗೆ ವಿದ್ಯಾರ್ಥಿ ವೇತನ ಬರುತ್ತಿಲ್ಲ. ಆರೋಗ್ಯದ ಬಗ್ಗೆ ಯಾವುದೇ ಚಿಂತನೆ ಮಾಡುತ್ತಿಲ್ಲ. ನಿಗಮದಲ್ಲಿದ್ದ ಎಸ್ಇಪಿ ಹಣ ಸರಕಾರಕ್ಕೆ ವಾಪಸ್ ಕಳುಹಿಸುವ ಮೂಲಕ ಕೈಮಗ್ಗ ನೇಕಾರರ ವಿರೋಧಿ ಧೋರಣೆ ಅನುಸರಿಸಲಾಗುತ್ತಿದೆ. ನೇಕಾರರಿಂದ ನಿಗಮಕ್ಕೆ ಯಾವುದೇ ನಷ್ಟವಾಗಿಲ್ಲ. ಅಧಿಕಾರಿಗಳ ದುಂದುವೆಚ್ಚ ಹಾಗೂ ನಿರ್ಲಕ್ಷ್ಯದಿಂದ ನಿಗಮ ನಷ್ಟದಲ್ಲಿದೆ ಎಂದು ಹೇಳಿದರು.
ಜಿಲ್ಲಾಧ್ಯಕ್ಷ ನಾಗಪ್ಪ ಬನ್ನಿಗಿಡದ, ಬಸವರಾಜ ಗಣಪಾ, ಸುರೇಶ ಗಣಮುಖೀ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ