ಧಾರವಾಡ ಜಿಲ್ಲೆಯಲ್ಲಿ ವಾರಾಂತ್ಯದ ಸಂಪೂರ್ಣ ಲಾಕ್ಡೌನ್
Team Udayavani, May 20, 2021, 8:55 PM IST
ಧಾರವಾಡ : ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಮೇ 22 ರ ಬೆಳಿಗ್ಗೆ 6:00 ಗಂಟೆಯಿಂದ ಮೇ 24 ರ ಬೆಳಿಗ್ಗೆ 6:00 ಗಂಟೆವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕಡೌನ ಘೋಷಿಸಿ ಡಿಸಿ ನಿತೇಶ ಪಾಟೀಲ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಸಾರ್ವಜನಿಕರು ತುರ್ತು ವೈದ್ಯಕೀಯ ಸೌಲಭ್ಯ ಹೊರತುಪಡಿಸಿ, ಉಳಿದ ಎಲ್ಲ ಅಂಗಡಿ-ಮುಂಗಟ್ಟುಗಳನ್ನು ತೆರೆಯುವುದನ್ನು ನಿಷೇಧಿಸಲಾಗಿದೆ. ಇದಲ್ಲದೇ ಮೇ 22 ಮತ್ತು ಮೇ 23 ರಂದು ಬೆಳಿಗ್ಗೆ 6:00 ರಿಂದ ಬೆಳಿಗ್ಗೆ 8:00 ಗಂಟೆವರೆಗೆ ಮಾತ್ರ ಹಣ್ಣು-ತರಕಾರಿ,ಹಾಲು ಮಾರಾಟ ಕೇಂದ್ರಗಳಿಗೆ ಅವಕಾಶ ನೀಡಲಾಗಿದೆ.
ಸರಕಾರಿ ವಾಹನಗಳಿಗೆ ಮತ್ತು ಕೋವಿಡ್-19 ಕಾರ್ಯಾಚರಣೆಯಲ್ಲಿ ಕರ್ತವ್ಯನಿರತ ಸಿಬ್ಬಂದಿ ಮತ್ತು ವಾಹನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ. ಅಂತ್ಯ ಸಂಸ್ಕಾರಕ್ಕೆ ಕೇವಲ 5 ಜನರಿಗೆ ಮಾತ್ರ ಪಾಲ್ಗೊಳ್ಳುವುದಕ್ಕೆ ಈ ಆದೇಶ ಆನ್ವಯ ಆಗದು. ಈ ನಿಯಮಗಳನ್ನು ಸಾರ್ವಜನಿಕರು ಪಾಲಿಸದೇ ಇದ್ದಲ್ಲಿ ಅಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ