ಅಭಿವೃದ್ಧಿಗೆ ಬಸವರಾಜ ಹೊರಟ್ಟಿ ಕೊಡುಗೆ ಏನು?
Team Udayavani, Jul 31, 2018, 6:30 AM IST
ಹುಬ್ಬಳ್ಳಿ: “ಹೊರಟ್ಟಿಯವರೇ, 35 ವರ್ಷಗಳ ನಿಮ್ಮ ರಾಜಕೀಯ ಜೀವನದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ನೀಡಿದ ಕೊಡುಗೆಯಾದರೂ ಏನು?’
-ಹೀಗೆಂದು ಪ್ರಶ್ನಿಸಿದವರು ಬಾಲೇಹೊಸೂರಿನ ಶ್ರೀ ದಿಂಗಾಲೇಶ್ವರ ಸ್ವಾಮೀಜಿ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹೊರಟ್ಟಿಯವರು ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳಲಿ, ತಮ್ಮ ಘನತೆಗೆ ತಕ್ಕಂತೆ ಮಾತನಾಡಲಿ. ಅವರು ನನ್ನ ಬಗ್ಗೆ ಕೆಟ್ಟದ್ದಾಗಿ ಮಾತನಾಡಿದ್ದಾರೆ. ಹಿಂದಿನಿಂದಲೂ ನನ್ನ ತೇಜೋವಧೆ ಮಾಡುತ್ತಿದ್ದಾರೆ. ಏಕೆ ಎಂಬುದನ್ನು ಬಹಿರಂಗಪಡಿಸಲಿ. ನನ್ನ ಕಾರ್ಯ ವೈಖರಿಯನ್ನು ಕಂಡಿದ್ದೀರಿ. ಆದರೆ ಮಾಧ್ಯಮಗಳಲ್ಲಿ ನೀವು ಕೆಲಸವಿಲ್ಲದ ಸ್ವಾಮಿ ಎಂದಿದ್ದೀರಿ. ನನ್ನ ಸೇವೆ ಏನು, ನಿಮ್ಮ ಸೇವೆ ಏನೆಂಬುದನ್ನು ನಾಡು ಪರಿಗಣಿಸಿದೆ’ ಎಂದರು.
ಒಂದು ಸಮಾಜವನ್ನು ಒಡೆಯಲು ಪಕ್ಷಭೇದ ಮರೆತು ನಿಂತ ರಾಜಕಾರಣಿಗಳು ಏಕೆ ಈ ಭಾಗದ ಜನರ ಬೇಡಿಕೆಗೆ ಕಿವಿಗೊಡುತ್ತಿಲ್ಲ. ಲಿಂಗಾಯತ ಧರ್ಮ ಇಬ್ಭಾಗಿಸಲು ಪಕ್ಷಾತೀತ ಹೋರಾಟ ಮಾಡಿದವರು ಉತ್ತರ ಕರ್ನಾಟಕ ಅಭಿವೃದ್ಧಿಗೇಕೆ ಪಕ್ಷಾತೀತವಾಗಿ ಹೋರಾಟ ಮಾಡುತ್ತಿಲ್ಲ, ಆಡಳಿತರೂಢ ಸರ್ಕಾರದ ಮಲತಾಯಿ ಧೋರಣೆಯೇ ಪ್ರತ್ಯೇಕ ರಾಜ್ಯದ ಕೂಗಿಗೆ ಕಾರಣ. ಪ್ರತ್ಯೇಕತೆಯ ಕೂಗು ನನ್ನದೊಬ್ಬನದ್ದಲ್ಲ. ಉತ್ತರ ಕರ್ನಾಟಕ ಭಾಗದ ಜನರ ಕೂಗಾಗಿದೆ. ಅದಕ್ಕೆ ನನ್ನ ಬೆಂಬಲವೂ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ