ಸಿಎಂ ಬದಲಾವಣೆ ಖಚಿತ ಎನ್ನುವ ಸಿದ್ದರಾಮಯ್ಯ ಜ್ಯೋತಿಷಿಯಾಗಿದ್ದು ಯಾವಾಗ? ಸಚಿವ ಬಿ ಎ. ಬಸವರಾಜ
Team Udayavani, Jan 7, 2021, 1:26 PM IST
ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಖಚಿತ ಎಂದು ಹೇಳುವುದಕ್ಕೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು ಎಂದು ನಗರಾಭಿವೃದ್ಧಿ ಸಚಿವ ಬಿಎ. ಬಸವರಾಜ ಪ್ರಶ್ನಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಧಿ ಮುಗಿಯುವವರೆಗೂ ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಈ ಬಗ್ಗೆ ಸಿದ್ದರಾಮಯ್ಯ ಸೇರಿದಂತೆ ಯಾರಿಗೂ ಅನುಮಾನ ಬೇಡ ಎಂದರು.
ಸಿಎಂ ಉತ್ತಮ ಕಾರ್ಯನಿರ್ವಹಣೆ ತೋರುತ್ತಿದ್ದು, ಸಮರ್ಥ ಆಡಳಿತ ನೀಡುತ್ತಿದ್ದಾರೆ. ನಾಯಕತ್ವ ಬದಲಾವಣೆ ಎನ್ನುವುದು ಕಾಂಗ್ರೆಸ್ಸಿಗರ ಕನಸು ಎಂದರು.
ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಗಳ ಪರಮಾಧಿಕಾರ. ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಿಎಂ ಶೀಘ್ರ ತೀರ್ಮಾನ ಕೈಗೊಳ್ಳಲಿದ್ದಾರೆ. ಬಿಜೆಪಿ ಸೇರಿದ ಎಲ್ಲರಿಗೂ ಸಚಿವ ಸ್ಥಾನ ದೊರೆಯಲಿದೆ ಎಂದರು.
ಇದನ್ನೂ ಓದಿ:ಜಾಡ್ಸಿ ಒದ್ದರೆ… : ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾನೂನು ಸಚಿವರ ನೀತಿ ಪಾಠ!
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಾವು ಯಾರು ಬಿಜೆಪಿ ಬಿಡುವ, ಮತ್ತೆ ಕಾಂಗ್ರೆಸ್ ಗೆ ಮರಳುವ ಪ್ರಶ್ನೆಯೇ ಇಲ್ಲ. ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಭ್ರಮೆಯಷ್ಟೆ ಎಂದರು.
ಬಸವರಾಜ ಹೊರಟ್ಟಿಯವರು ಒಳ್ಳೆ ಸ್ನೇಹಿತರು. ಅವರು ಸಭಾಪತಿ ಆಗುವುದಕ್ಕೆ ನಮ್ಮ ಬೆಂಬಲ ಇರುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ