ಸೆಂಟ್ರಲ್ನಲ್ಲಿ ಸೈ ಎನಿಸಿಕೊಳ್ಳುವವರಾರು?


Team Udayavani, Apr 30, 2019, 11:19 AM IST

Udayavani Kannada Newspaper

ಹುಬ್ಬಳ್ಳಿ: ಸುಶಿಕ್ಷಿತರ ಕ್ಷೇತ್ರಗಳಲ್ಲೊಂದು ಎಂದೇ ಪರಿಗಣಿಸಲ್ಪಟ್ಟಿರುವ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಗೆಲುವಿನ ಕುರಿತು ಚರ್ಚೆ ಭರ್ಜರಿಯಾಗಿಯೇ ನಡೆಯುತ್ತಿದೆ.

ಮತದಾನ ಪೂರ್ಣಗೊಂಡಿದ್ದು, ಉಭಯ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರ ಲೆಕ್ಕಾಚಾರ ಶುರುವಾಗಿದೆ.

ಕಳೆದ 5 ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವುದಲ್ಲದೇ ಕಳೆದ 3 ಲೋಕಸಭಾ ಚುನಾವಣೆಗಳಲ್ಲೂ ಬಿಜೆಪಿ ಅಭ್ಯರ್ಥಿ ಗೆಲುವಿನಲ್ಲಿ ಕ್ಷೇತ್ರದ ಮತದಾರರು ಮಹತ್ವದ ಪಾತ್ರ ನಿರ್ವಹಿಸಿದ್ದಾರೆ.

ಸುಶಿಕ್ಷಿತರ ಕ್ಷೇತ್ರದಲ್ಲಿ ಅಭಿವೃದ್ಧಿ ವಿಷಯಗಳು, ಪ್ರಣಾಳಿಕೆ ವಿಷಯಗಳು ಗೌಣವಾಗಿ ಲಿಂಗಾಯತ-ವೀರಶೈವ ವಿಷಯಾಧಾರಿತ ಚುನಾವಣೆ ಎಂಬ ವಾತಾವರಣ ಉಂಟಾಗಿದ್ದು ಸುಳ್ಳಲ್ಲ.

ಲಿಂಗಾಯತ ಟ್ರಂಪ್‌ ಕಾರ್ಡ್‌ ಪ್ರದರ್ಶನ ದಿಂದ ಕ್ಷೇತ್ರದಲ್ಲಿ ಬಿಜೆಪಿ ತನ್ನ ಚುನಾವಣಾ ರಣತಂತ್ರವನ್ನೇ ಬದಲಿಸಿಕೊಳ್ಳುವುದು ಅನಿವಾರ್ಯವಾಯಿತು. ಲಿಂಗಾಯತ ಬಲೆಯಲ್ಲಿ ಮೋದಿ ಅಲೆ ಸಿಕ್ಕಿ ಗಿರಗಿಟ್ಲೆ ಹಾಕಿತು. ಲಿಂಗಾಯತ ಬಿಜೆಪಿ ಮುಖಂಡರು, ಶಾಸಕರು ಬಿಜೆಪಿಗೆ ಜೈ ಜೈ ಎನ್ನುತ್ತ ಕ್ಷೇತ್ರಾದ್ಯಂತ ಓಡಾಡಬೇಕಾಯಿತು. ಲಿಂಗಾಯತರು ಬಿಜೆಪಿಯಿಂದ ಮುನಿಸಿಕೊಂಡಿದ್ದಾರೋ ಇಲ್ಲವೋ ಗೊತ್ತಿಲ್ಲ, ಆದರೆ ಬಿಜೆಪಿ ಕಾರ್ಯಕರ್ತರು ಮಾತ್ರ ಕ್ಷೇತ್ರಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಹಾಗೂ ಲಿಂಗಾಯತ ಅನ್ಯೋನತೆ ಕುರಿತು ಸಂದೇಶಗಳನ್ನು ವೈರಲ್ ಮಾಡಿದರು. ಕಾಂಗ್ರೆಸ್‌ ಅಭ್ಯರ್ಥಿ ವಿನಯ ಕುಲಕರ್ಣಿ ಚುನಾವಣೆ ಮುಗಿಯುವವರೆಗೂ ಲಿಂಗಾಯತ ಜಾತಿಯ ಸುತ್ತ ಮಾತ್ರ ಸುತ್ತುವಂತಾಯಿತು. ಇದು ಯಾವ ರೀತಿ ವರ್ಕೌಟ್ ಆಗುತ್ತದೋ ನೋಡಬೇಕು.

ಒಂದೆಡೆ ಜಾತಿ ಲೆಕ್ಕಾಚಾರದನ್ವಯ ಮತಗಳನ್ನು ಪಡೆದು ತಮ್ಮ ಅಭ್ಯರ್ಥಿ ಜಯಭೇರಿ ಬಾರಿಸುವುದು ಖಚಿತ ಎಂದು ಚುನಾವಣೆಗೆ ಮುಂಚೆ ಬಡಾಯಿ ಕೊಚ್ಚಿಕೊಂಡವರು ಈಗ ತಣ್ಣಗಾಗಿದ್ದಾರೆ. ಕಾಂಗ್ರೆಸ್‌-ಬಿಜೆಪಿ ಅಭ್ಯರ್ಥಿ ಮಧ್ಯೆ ತುರುಸಿನ ಸ್ಪರ್ಧೆಯಿದೆ ಎಂದು ಹೇಳುತ್ತಿದ್ದಾರೆ. ಇನ್ನೊಂದೆಡೆ ಜಾತಿ ರಾಜಕಾರಣ ನಡೆಯಲ್ಲ ಎಂದು ಹೇಳುತ್ತಿದ್ದವರು ಕೂಡ ಈಗ ವರಸೆ ಬದಲಿಸಿ ಗೆಲುವಿನ ಅಂತರ ಕಡಿಮೆಯಾಗಲಿದೆ ಎಂದು ಸಮಾಧಾನ ಮಾಡಿಕೊಳ್ಳುತ್ತಿದ್ದಾರೆ. ಮತದಾನ ಪ್ರಮಾಣ ಹೆಚ್ಚಾಗಿದೆ ಆದರೆ ಅಲ್ಪಸಂಖ್ಯಾತರ ಮತದಾರರು ನಿರೀಕ್ಷಿತ ಪ್ರಮಾಣದಲ್ಲಿ ಮತದಾನ ಮಾಡದಿರುವುದು ಕಾಂಗ್ರೆಸ್‌ಗೆ ಆತಂಕ ಮೂಡಿಸಿದ್ದು ಸುಳ್ಳಲ್ಲ.

ಗ್ರಾಮೀಣ ಭಾಗದ ಮತಗಳ ಚಿಂತೆ ನನಗಿಲ್ಲ. ಹುಬ್ಬಳ್ಳಿ ನಗರದ ಮತದಾರರು ನನ್ನ ಕೈಹಿಡಿದರೆ ಜಯ ಖಚಿತ ಎಂದು ಕಾಂಗ್ರೆಸ್‌ ಅಭ್ಯರ್ಥಿ ವಿನಯ ಕುಲಕರ್ಣಿ ಹೇಳಿದ್ದರು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೆಚ್ಚು ಒತ್ತು ನೀಡದ ವಿನಯ ಕುಲಕರ್ಣಿ ಕಾಂಗ್ರೆಸ್‌ ತೆಕ್ಕೆಯಲ್ಲಿರುವ ಹುಬ್ಬಳ್ಳಿ ಪೂರ್ವ ಕ್ಷೇತ್ರದಲ್ಲಿ ಸಭೆಗಳನ್ನು ಮಾಡಿದ್ದರು.

ಲಿಂಗಾಯತ ಜಾತಿಯ ಟ್ರಂಪ್‌ ಕಾರ್ಡ್‌ ಎಲ್ಲಿ ಕಾಂಗ್ರೆಸ್‌ಗೆ ವರವಾಗುವುದೋ ಎಂಬ ಭೀತಿಯಿಂದ ಚುನಾವಣಾ ರಣತಂತ್ರ ರೂಪಿಸುವಲ್ಲಿ ಮೇಧಾವಿಯಾಗಿರುವ ಜಗದೀಶ ಶೆಟ್ಟರ ಅವರನ್ನು ಬಳ್ಳಾರಿಯಿಂದ ಕರೆಸಿಕೊಳ್ಳಲಾಯಿತು. ಮಾಜಿ ಮುಖ್ಯಮಂತ್ರಿಯೂ ಆಗಿರುವ ಶೆಟ್ಟರು ಚುನಾವಣೆ ಮುಗಿಯುವವರೆಗೆ ಕ್ಷೇತ್ರಾದ್ಯಂತ ಸಂಚರಿಸಿದರು. ಸಭೆಗಳಲ್ಲಿ ಪಾಲ್ಗೊಂಡರು. ಲಿಂಗಾಯತ ಮುಖಂಡರ ಸಭೆ ನಡೆಸಲಾಯಿತು. ಇದು ಯಾವ ಮಟ್ಟದಲ್ಲಿ ಫಲ ನೀಡಲಿದೆ ಎಂಬುದು ಫಲಿತಾಂಶದ ದಿನವೇ ಗೊತ್ತಾಗಲಿದೆ.

ಉಭಯ ಪಕ್ಷಗಳ ಮುಖಂಡರು ತಮ್ಮ ಪಕ್ಷದ ಅಭ್ಯರ್ಥಿ ಗೆಲುವು ನಿಶ್ಚಿತ ಎಂದೇ ವಾದ ಮಾಡುತ್ತಿದ್ದಾರೆ. ಹೊಸ ಮತದಾರರು ಉತ್ಸಾಹದಿಂದ ಮತ ನೀಡಿದ್ದು, ಅವರೆಲ್ಲರೂ ಮೋದಿ ನೋಡಿ ಮತ ನೀಡಿದ್ದಾರೆಂಬ ವಾದ ಬಿಜೆಪಿಯವರದ್ದಾಗಿದೆ. ಲಿಂಗಾಯತರನ್ನು ಬಿಜೆಪಿ ಕಡೆಗಣಿಸಿದ್ದರಿಂದ ಅವರು ಈ ಬಾರಿ ‘ಕೆ’ ಕುಲುಕಿದ್ದಾರೆ ಎಂಬುದು ಕಾಂಗ್ರೆಸ್‌ನವರ ಲೆಕ್ಕಾಚಾರ.

ಪ್ರತಿ ಚುನಾವಣೆಯಲ್ಲೂ ಇಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮತಗಳ ಅಂತರ ಸರಾಸರಿ 18,000. ಕಳೆದ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 32,000 ಲೀಡ್‌ ಪಡೆದುಕೊಂಡಿದ್ದರು. ಆಗ ಕಾಂಗ್ರೆಸ್‌ನ ವಿನಯ ಕುಲಕರ್ಣಿ ಪಕ್ಷದ ಒತ್ತಡದಿಂದ ಸ್ಪರ್ಧಿಸಿದ್ದರು. ಅಲ್ಲದೇ ನರೇಂದ್ರ ಮೋದಿ ಅಲೆ ಎದುರಿಸಬೇಕಿತ್ತು.

ಬಿಜೆಪಿಯ ಶಕ್ತಿಕೇಂದ್ರವೆನಿಸಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ 1,60,000 ಮತದಾರರು ಮತದಾನ ಮಾಡಿದ್ದು, ಕ್ಷೇತ್ರದ ಮತದಾರರು ಯಾವ ಪಕ್ಷಕ್ಕೆ ಲೀಡ್‌ ಕೊಡಿಸುವರೋ ಎಂಬುದನ್ನು ಕಾದು ನೋಡಬೇಕು.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕನಿಷ್ಟ 40,000 ಮತಗಳ ಲೀಡ್‌ ಸಿಗುವುದು ನಿಶ್ಚಿತ. ಕ್ಷೇತ್ರದಲ್ಲಿ ನಮ್ಮ ಕಾರ್ಯಕರ್ತರ ಪಡೆಯಿದೆ. ಪ್ರತಿ ಚುನಾವಣೆಯಲ್ಲೂ ನಾವು ವ್ಯವಸ್ಥಿತವಾಗಿ, ಶಿಸ್ತುಬದ್ಧವಾಗಿ ಪ್ರಚಾರ ನಡೆಸುತ್ತೇವೆ. ನಮ್ಮ ಕಾರ್ಯಕರ್ತರ ಪಡೆ ಸಮರ್ಥವಾಗಿದೆ. ಪಾಲಿಕೆ ಸದಸ್ಯರು ಶಕ್ತಿಮೀರಿ ಶ್ರಮಿಸಿದ್ದಾರೆ. ಪಕ್ಷ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಪ್ರಚಾರ ಮಾಡಿದೆ. ಪ್ರಹ್ಲಾದ ಜೋಶಿ ಗೆಲುವಿನ ಅಂತರ ಹೆಚ್ಚಿಸುವಲ್ಲಿ ಕ್ಷೇತ್ರ ಮಹತ್ವದ ಕೊಡುಗೆ ನೀಡಲಿದೆ.
• ನಾಗೇಶ ಕಲಬುರ್ಗಿ,ಬಿಜೆಪಿ ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಸಿಗಲಿದೆ. ಕ್ಷೇತ್ರದ ಹೆಚ್ಚಿನ ಮತದಾರರು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿದ್ದಾರೆ. ನಮ್ಮ ಕಾರ್ಯಕರ್ತರು ಕ್ಷೇತ್ರದಲ್ಲಿ ಉತ್ತಮ ರೀತಿಯಿಂದ ಪ್ರಚಾರ ಮಾಡಿದ್ದಾರೆ. ಬದಲಾವಣೆ ಬಯಸಿದ ಮತದಾರರು ಹೊಸ ಮುಖ ನಿರೀಕ್ಷಿಸುತ್ತಿದ್ದಾರೆ. ಎಲ್ಲ ಜಾತಿ ಧರ್ಮಗಳ ಮತದಾರರು ವಿನಯ ಕುಲಕರ್ಣಿ ಅವರಿಗೆ ಮತ ನೀಡಿದ್ದಾರೆ.
• ಅಲ್ತಾಫ ಹಳ್ಳೂರ, ಕಾಂಗ್ರೆಸ್‌ ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ

•ವಿಶ್ವನಾಥ ಕೋಟಿ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.