ಹೆಚ್ಚಿದ ಮತ ಪ್ರಮಾಣ ಯಾರ ಗೆಲುವಿಗೆ ಬುತ್ತಿ?


Team Udayavani, May 20, 2019, 11:08 AM IST

Udayavani Kannada Newspaper

ಹುಬ್ಬಳ್ಳಿ: ಕುಂದಗೋಳ ವಿಧಾನಸಭೆ ಉಪ ಸಮರದಲ್ಲಿ ಬಿರುಬಿಸಿಲಿಗೂ ಸವಾಲೊಡ್ಡುವ ರೀತಿಯಲ್ಲಿ ದಾಖಲೆ ಮತದಾನವಾಗಿದೆ. ಮತಪ್ರಮಾಣ ಹೆಚ್ಚಳವನ್ನು ಮೈತ್ರಿಕೂಟ ಹಾಗೂ ಬಿಜೆಪಿ ಕಡೆಯವರು ತಮ್ಮ ಅಭ್ಯರ್ಥಿ ಗೆಲುವಿಗೆ ಅನುಕೂಲವಿದು ಎಂದು ವ್ಯಾಖ್ಯಾನಿಸತೊಡಗಿದ್ದಾರೆ.

ಸಿ.ಎಸ್‌. ಶಿವಳ್ಳಿ ಅವರ ಅಕಾಲಿಕ ನಿಧನದಿಂದ ಎದುರಾದ ಉಪ ಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸಿ.ಎಸ್‌. ಶಿವಳ್ಳಿ ಅವರ ಪತ್ನಿ ಕುಸುಮಾವತಿ ಶಿವಳ್ಳಿ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಎಸ್‌.ಐ. ಚಿಕ್ಕನಗೌಡ್ರ ಸ್ಪರ್ಧಿಸಿದ್ದು, ರವಿವಾರ ಬಹುತೇಕ ಶಾಂತಿಯುತ ಮತದಾನ ನಡೆದಿದೆ. ಮತ ಪ್ರಮಾಣ ಹೆಚ್ಚಳವಾಗಬೇಕೆಂದು ಲೋಕಸಭೆ ಚುನಾವಣೆ ಹಾಗೂ ಮತಜಾಗೃತಿ ಬಗ್ಗೆ ಜಿಲ್ಲಾ ಚುನಾವಣಾ ವಿಭಾಗ ಹಾಗೂ ಸ್ವೀಪ್‌ ಕೈಗೊಂಡ ಪ್ರಚಾರ ಕಾರ್ಯಕ್ಕೆ ಉತ್ತಮ ಸ್ಪಂದನೆ ಎನ್ನುವಂತೆ ಶೇ.82.42 ದಾಖಲೆ ಮತದಾನವಾಗಿದೆ.

2018ರ ವಿಧಾನಸಭೆ ಚುನಾವಣೆ ಮತದಾನಕ್ಕೆ ಹೋಲಿಸಿದರೆ ಉಪ ಚುನಾವಣೆಯಲ್ಲಿ ಶೇ.3.75 ಮತದಾನ ಹೆಚ್ಚಳವಾಗಿದೆ. ಒಂದು ಕಡೆ ಉರಿಬಿಸಿಲು, ಮತ್ತೂಂದು ಕಡೆ ಕೆಲ ದಿನಗಳ ಹಿಂದೆಯಷ್ಟೇ ಲೋಕಸಭೆ ಚುನಾವಣೆಗೆ ಮತದಾನ ಮಾಡಲಾಗಿದ್ದು, ಉಪ ಚುನಾವಣೆಯಲ್ಲಿ ಹೆಚ್ಚಿನ ಜನ ಮತದಾನಕ್ಕೆ ಮುಂದಾಗಲಾರರು ಎಂಬ ಕೆಲವರ ನಿರೀಕ್ಷೆ ಹುಸಿಗೊಳಿಸಿ ಕುಂದಗೋಳ ಮತದಾರರು ಉತ್ತಮ ಸ್ಪಂದನೆ ತೋರಿದ್ದಾರೆ.

ಜಿದ್ದಾಜಿದ್ದಿಯ ಕಣ: ಕುಂದಗೋಳ ವಿಧಾನಸಭೆ ಉಪ ಚುನಾವಣೆ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಹಾಗೂ ಬಿಜೆಪಿಗೆ ಜಿದ್ದಾಜಿದ್ದಿ ವೇದಿಕೆಯಾಗಿತ್ತು. ಸ್ಥಾನ ಉಳಿಸಿಕೊಳ್ಳಲು ಮೈತ್ರಿಕೂಟ, ಸ್ಥಾನ ಕಿತ್ತುಕೊಳ್ಳಲು ಬಿಜೆಪಿ ಸಾಕಷ್ಟು ಸರ್ಕಸ್‌ಗಿಳಿದಿದ್ದವು.

ಉಪ ಚುನಾವಣೆ ಫ‌ಲಿತಾಂಶ ರಾಜ್ಯ ಸಮ್ಮಿಶ್ರ ಸರಕಾರದ ಮೇಲೆ ತನ್ನದೇ ಪರಿಣಾಮ ಬೀರಬಹುದಾಗಿದೆ ಎಂಬ ಅನಿಸಿಕೆ ಹಿನ್ನೆಲೆಯಲ್ಲಿ ಕ್ಷೇತ್ರದ ಗೆಲುವು ಎರಡು ಕಡೆಯವರಿಗೂ ತೀವ್ರತೆ ಸೃಷ್ಟಿಸಿತ್ತು. ಗೆಲುವು ತಮ್ಮದಾಗಲೇಬೇಕೆಂಬ ಜಿದ್ದಿನೊಂದಿಗೆ ಎರಡು ಕಡೆಯ ನಾಯಕರು, ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಪೈಪೋಟಿ ರೂಪದಲ್ಲಿ ಪ್ರಚಾರ, ಮತದಾರರ ಮನವೊಲಿಕೆ ಕಾರ್ಯ ಕೈಗೊಂಡಿದ್ದರು.

ಗೆಲುವಿನ ವ್ಯಾಖ್ಯಾನ: ಕುಂದಗೋಳ ವಿಧಾನಸಭೆ ಉಪ ಚುನಾವಣೆ ಮತ ಸಮರ ಮುಗಿದಿದೆ. ಮತದಾರರ ತೀರ್ಪು ಮತಯಂತ್ರಗಳನ್ನು ಸೇರಿಯಾಗಿದೆ. ಇನ್ನೇನಿದ್ದರೂ ಫ‌ಲಿತಾಂಶ ಏನೆಂಬುದನ್ನು ಎದುರು ನೋಡುವುದಷ್ಟೆ.

ಎರಡು ಕಡೆಯವರು ಗೆಲುವು ತಮ್ಮದೇ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್‌ನವರು ಮೈತ್ರಿ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಅವರಿಗೆ ಅನುಕಂಪ ದೊಡ್ಡ ಮಟ್ಟದಲ್ಲಿ ಕೈ ಹಿಡಿಯಲಿದೆ. ಸಿ.ಎಸ್‌. ಶಿವಳ್ಳಿ ಅವರು ಕ್ಷೇತ್ರದ ಅಭಿವೃದ್ಧಿ ಹಾಗೂ ಎಲ್ಲ ಜಾತಿಯ ಬಡವರ ಸಮಸ್ಯೆ, ನೋವುಗಳಿಗೆ ಸ್ಪಂದಿಸಿದ್ದು, ಕುಟುಂಬ ಸದಸ್ಯನ ರೀತಿಯಲ್ಲಿ ನೆರವು ನೀಡಿದ್ದು ಸಹ ಜನರ ಮನಸ್ಸಿನಲ್ಲಿದ್ದು, ಅದು ಪಕ್ಷದ ಅಭ್ಯರ್ಥಿ ಗೆಲುವನ್ನು ಸುಲಭವಾಗಲಿದೆ ಎಂಬುದಾಗಿದೆ.

ದಾಖಲೆ ಮತದಾನವೂ ನಮಗೆ ವರವಾಗಲಿದೆ ಎಂಬುದು ಮೈತ್ರಿಕೂಟ ಮುಖಂಡರ ಅನಿಸಿಕೆ. ಶಿವಳ್ಳಿ ಅವರ ಮೇಲಿನ ಅನುಕಂಪವೇ ಹೆಚ್ಚು ಹೆಚ್ಚು ಜನರನ್ನು ಮತಕೇಂದ್ರಗಳಿಗೆ ಕರೆತಂದಿದ್ದು, ದಾಖಲೆ ಮತದಾನಕ್ಕೆ ಕಾರಣವಾಗಿದೆ. ನಮ್ಮ ಅಭ್ಯರ್ಥಿ ಗೆಲುವು ಖಚಿತ ಎಂಬುದು ಹಲವು ಮುಖಂಡರ ವಾದವಾದರೆ, ಇನ್ನು ಕೆಲವರು ಮತದಾನ ಹೆಚ್ಚಳ ಯಾರಿಗೆ ಲಾಭ ಎಂಬ ಗೊಂದಲ ಕಾಡುತ್ತಿದೆ ಎನ್ನುತ್ತಿದ್ದಾರೆ.

ಬಿಜೆಪಿಯವರು ಸಹ ನಮ್ಮ ಅಭ್ಯರ್ಥಿ ಎರಡು ಬಾರಿ ಸೋತ ಅನುಕಂಪ ನಮ್ಮ ಕೈ ಹಿಡಿಯಲಿದೆ. ಬಿಜೆಪಿ ನಾಯಕರ ಸಂಘಟಿತ ಪ್ರಯತ್ನ, ಪ್ರಚಾರ ನಮಗೆ ಲಾಭವಾಗಲಿದ್ದು, ಗೆಲುವು ತಂದು ಕೊಡುವುದು ಖಚಿತ. ವಿಶೇಷವಾಗಿ ಮತದಾನ ಪ್ರಮಾಣ ಶೇ.82 ಆಗಿರುವುದು ಸಹಜವಾಗಿಯೇ ಬಿಜೆಪಿಗೆ ಲಾಭವಾಗಲಿದೆ. ಹೆಚ್ಚು ಮತದಾನವಾದರೆ ಅದು ಬಿಜೆಪಿಗೆ ಲಾಭ ಎಂಬುದು ಹಿಂದಿನ ಬೇರೆ ಬೇರೆ ಕಡೆಯ ಅನೇಕ ಚುನಾವಣೆಗಳಲ್ಲಿ ಸಾಬೀತಾಗಿದೆ. ಕುಂದಗೋಳದಲ್ಲೂ ಅದು ಮುಂದುವರಿಯಲಿದ್ದು, ನಮ್ಮ ಅಭ್ಯರ್ಥಿ ಗೆಲುವು ಖಚಿತ. ಅನುಮಾನವೇ ಬೇಡ ಎಂಬುದು ಬಿಜೆಪಿಯವರ ಅನಿಸಿಕೆ.

ಎರಡು ಕಡೆಯವರು ಮತದಾನ ಹೆಚ್ಚಳ ತಮ್ಮ ಪರ ಎಂದು ವ್ಯಾಖ್ಯಾನಿಸುತ್ತಿದ್ದಾರೆ. ಮತದಾರನ ಅನಿಸಿಕೆ ಏನಾಗಿದೆ ಎಂಬುದು ಮೇ 23ರಂದು ಬಯಲುಗೊಳ್ಳಲಿದೆ.

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.