ವನ್ಯಜೀವಿ ಸಂರಕ್ಷಣೆ ಜಾಗೃತಿ
Team Udayavani, Oct 4, 2019, 1:08 PM IST
ಹುಬ್ಬಳ್ಳಿ: ಕಾಡುಗಳ ನಾಶ ಹಾಗೂ ಅತಿಕ್ರಮಣದಿಂದ ಪ್ರಾಣಿಗಳು ಹಾಗೂ ಮಾನವನ ಸಂಘರ್ಷ ಹೆಚ್ಚಾಗುತ್ತಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ವಿದ್ಯಾನಗರದ ಕೆಎಲ್ಇ ತಾಂತ್ರಿಕ ವಿವಿ ಆವರಣದಲ್ಲಿ ಧಾರವಾಡ ಅರಣ್ಯ ವಿಭಾಗದ ಸಹಯೋಗದಲ್ಲಿ ವನ್ಯಜೀವಿಗಳ ಸಂರಕ್ಷಣೆ ಜಾಗೃತಿ ಮೂಡಿಸಲು ಆಯೋಜಿಸಿದ್ದ ನಡಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿದಿನ ಸಾಮಾಜಿಕ ಜಾಲತಾಣಗಳಲ್ಲಿ ಕಾಡು ಪ್ರಾಣಿಗಳು ಹಾಗೂ ಮಾನವರ ಮಧ್ಯದ ಸಂಘರ್ಷ ನೋಡುತ್ತಿದ್ದೇವೆ. ಕಾಡುನಾಶವೇ ಇದಕ್ಕೆ ಕಾರಣವಾಗಿದೆ. ಹಲವು ಪ್ರಾಣಿಗಳು ಹಾಗೂ ಸಸ್ಯ ಪ್ರಬೇಧಗಳು ಕಣ್ಮರೆಯಾಗಿವೆ. ಇನ್ನು ಹಲವು ಅಳಿವಿನಂಚಿನಲ್ಲಿವೆ. ನಾವು ಸಹಬಾಳ್ವೆಯಿಂದ ಜೀವಿಸಬೇಕು ಎಂದರು.
ಉಪ ಅರಣ್ಯಾಧಿಕಾರಿ ಡಿ. ಮಹೇಶಕುಮಾರ ವನ್ಯಜೀವಿಗಳ ಸಂರಕ್ಷಣೆಯ ಪ್ರತಿಜ್ಞಾವಿಧಿ ಬೋಧಿಸಿದರು. ಕೆಎಲ್ಇ ತಾಂತ್ರಿಕ ವಿವಿ ಕುಲಪತಿ ಡಾ| ಅಶೋಕ ಶೆಟ್ಟರ, ದೀಪಾ ಜೆ. ಕಾಂಟ್ರಾಕ್ಟರ್, ಶಿವಕುಮಾರ ಗುಣಾರೆ, ಸಂಜಯ ರೊಟ್ಟಿಗವಾಡ, ಮಿನಲ್ ಇದ್ದರು. ಅರಣ್ಯ ಅಕಾಡೆಮಿ ಪ್ರಶಿಕ್ಷಣಾರ್ಥಿಗಳು ವನ್ಯಜೀವಿಗಳ ಅಳಿವಿನ ಕುರಿತಾದ ಬೀದಿ ನಾಟಕ ಪ್ರದರ್ಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ