25 ಸಾವಿರ ಲೀಡ್ನಿಂದ ಗೌಡ್ರ ಗೆಲ್ಲಿಸಿ
Team Udayavani, May 12, 2019, 11:20 AM IST
ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಿಮಿತ್ತ ವಿವಿಧೆಡೆ ರೋಡ್ ಶೋ ಮಾಡುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ ಯಾಚಿಸಿದರು.
ಕುಂದಗೋಳ ವಿಧಾನಸಭಾ ಕ್ಷೇತ್ರದ ಹುಬ್ಬಳ್ಳಿ ಹಾಗೂ ಕುಂದಗೋಳ ತಾಲೂಕಿನ ಅದರಗುಂಚಿ, ನೂಲ್ವಿ, ಶೆರೆವಾಡ, ಬೆಟದೂರು, ಕೂಬಿಹಾಳ, ಇಂಗಳಗಿ ಗ್ರಾಮಗಳಲ್ಲಿ ಮತಯಾಚಿಸಿದರು. ಅದರಗುಂಚಿ, ನೂಲ್ವಿ, ಶೆರೇವಾಡದಲ್ಲಿ ಮಾತನಾಡಿದ ಯಡಿಯೂರಪ್ಪ, ಪ್ರತಿ ಬಾರಿ ಬಿಜೆಪಿಗೆ ಅಭೂತಪೂರ್ವ ಬೆಂಬಲ ನೀಡುವ ನಿಮ್ಮೆಲ್ಲರಿಗೂ ಅಭಿನಂದನೆ. ಅನಿರೀಕ್ಷಿತವಾಗಿ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಬಂದಿದ್ದು, ಕಳೆದ ಬಾರಿ ಅತ್ಯಲ್ಪ ಮತಗಳಿಂದ ಸೋಲು ಕಂಡಿರುವ ಎಸ್.ಐ. ಚಿಕ್ಕನಗೌಡರ ಅವರು ಈ ಬಾರಿ ಸುಮಾರು 25 ಸಾವಿರ ಮತಗಳ ಅಂತರದಿಂದ ಜಯ ಗಳಿಸುವಂತೆ ನೀವೆಲ್ಲರೂ ಆಶೀರ್ವದಿಸಬೇಕು ಎಂದರು.
ರಾಜ್ಯದಲ್ಲಿ ಭೀಕರ ಬರಗಾಲವಿದ್ದು, ಅದರ ನಿರ್ವಹಣೆಗೆ ಕೆಲಸ ಮಾಡದೇ ರೆಸಾರ್ಟ್ಗಳಲ್ಲಿ ಮುಖ್ಯಮಂತ್ರಿಗಳು ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಈ ಹಿಂದೆ ಬಿಜೆಪಿ ನೀಡಿದ ಹಲವಾರು ಜನಪರ ಯೋಜನೆಗಳನ್ನು ಈಗಿನ ಸರ್ಕಾರ ಕೈಬಿಟ್ಟಿದೆ. ಈ ಸರಕಾರಕ್ಕೆ ಜನರ ಶ್ರೇಯೋಭಿವೃದ್ಧಿ ಬೇಕಾಗಿಲ್ಲ ಎಂದು ಹರಿಹಾಯ್ದರು.
ಅಭ್ಯರ್ಥಿ ಎಸ್.ಐ. ಚಿಕ್ಕನಗೌಡರ, ಮುಖಂಡರಾದ ಪ್ರಹ್ಲಾದ ಜೋಶಿ, ಕೋಟಾ ಶ್ರೀನಿವಾಸ ಪೂಜಾರಿ, ಶಂಕರಪಾಟೀಲ ಮುನೇನಕೊಪ್ಪ, ಕಟ್ಟಾ ಸುಬ್ರಮಣ್ಯ ನಾಯ್ಡು, ಮೋಹನ ಲಿಂಬಿಕಾಯಿ, ಎಂ.ಆರ್. ಪಾಟೀಲ, ಸೀಮಾ ಮಸೂತಿ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ