ಗಾಳಿ-ಮಳೆಗೆ ಜನಜೀವನ ಅಸ್ತವ್ಯಸ್ತ
Team Udayavani, May 12, 2018, 5:16 PM IST
ಬಾಗಲಕೋಟೆ: ಜಿಲ್ಲೆಯಾದ್ಯಂತ ಶುಕ್ರವಾರ ಸಂಜೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಅಲ್ಲಲ್ಲಿ ತಗಡಿನ ಶೆಡ್, ಮರಗಳು ಬಿದ್ದಿವೆ. ಮಳೆಯ ವೇಳೆ ಬಿದ್ದ ಸಿಡಿಲಿಗೆ ಓರ್ವ ವ್ಯಕ್ತಿ ಕೂಡ ಮೃತಪಟ್ಟಿದ್ದಾನೆ. ಸಂಜೆ 4ರ ಹೊತ್ತಿಗೆ ಬಿರುಗಾಳಿ ಆರಂಭಗೊಂಡಿದ್ದು, ಅರ್ಧ ಗಂಟೆ ಬಳಿಕ ಜೋರಾಗಿ ಮಳೆ ಸುರಿಯಲಾರಂಭಿಸಿತು. ಇದರಿಂದ ಜಿಲ್ಲೆಯಾದ್ಯಂತ ವಿದ್ಯುತ್ ಕಡಿತಗೊಳಿಸಲಾಯಿತು. ಬಿರುಗಾಳಿಗೆ ಜಿಲ್ಲಾ ಕ್ರೀಡಾಂಗಣದ ವೇದಿಕೆಗೆ ಅಳವಡಿಸಿದ್ದ ಮೇಲ್ಚಾವಣಿ ತಗಡು ಹಾರಿ ಹೋಗಿವೆ.
ಬನಹಟ್ಟಿ: ಗುರುವಾರ ರಾತ್ರಿ ಬೀಸಿದ ಬಿರುಗಾಳಿಗೆ ರಬಕವಿ ಬನಹಟ್ಟಿ ನಗರದ ಕೆಲವು ಪ್ರದೇಶಗಳ ಮನೆಗಳ ಪತ್ರಾಸ, ಶೆಡ್ಗಳು ಹಾರಿ ಹೋಗಿವೆ.
ಗುರುವಾರ ರಾತ್ರಿ ಇಡೀ ಜಿಟಿಜಿಟಿ ಮಳೆ ಸುರಿಯುತ್ತಿದ್ದು, ಅದರಲ್ಲೂ ಜೋರಾಗಿ ಬೀಸಿದ ಬಿರುಗಾಳಿಗೆ ಕೆಲವು ತೋಟಗಳಲ್ಲಿ ಬೆಳೆದು ನಿಂತ ಕುಳೆ ಕಬ್ಬು ಹಾಗೂ ಬೇಸಿಗೆ ಜೋಳದ ಬೆಳೆ ನೆಲಕ್ಕಚ್ಚಿ ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಬನಹಟ್ಟಿ ನಗರದ ರವಿ ಹಾಸಿಲಕರ, ವಿಜಯ ಹಾಸಿಲಕರ, ರಾಜು ಹಾಸಿಕಲರ ಸೇರಿದಂತೆ ಅನೇಕ ಕುಟುಂಬಗಳ ವಾಸವಿರುವ ತೋಟದ ಮನೆಗಳು ಹಾನಿಗೊಂಡಿವೆ. ಸಂಬಂಧಿಸಿದ ಅಧಿಕಾರಿಗಳು ಹಾನಿಗೊಳಗಾದ ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಕೆರೂರ: ಪಟ್ಟಣದಲ್ಲಿ ಶುಕ್ರವಾರ ಗುಡುಗು ಮಿಶ್ರಿತ ಬಿರುಸಿನಿಂದ ಮಳೆ ಸುರಿದಿದೆ. ಬಿಸಿಲ ಸೆಕೆಯಿಂದ ಬಸವಳಿದಿದ್ದ ಜನತೆಗೆ ತಂಪಿನ ವಾತಾವರಣ ನಿರ್ಮಾಣವಾಯಿತು. ಮಳೆಯಲ್ಲೆ ದ್ಯಾಮಮ್ಮ, ದುರ್ಗಮ್ಮರ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ಬಿರುಗಾಳಿ ಸಮೇತ ಮಳೆಯಾದ ಹಿನ್ನೆಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿತ್ತು. ಇದರಿಂದ ರಾತ್ರಿ ಕತ್ತಲೆಯಲ್ಲಿಯೇ ನಾಗರಿಕರು ಪರದಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ