ರೈಸಿಂಗ್‌ ಸ್ಟಾರ್‌-ಟ್ವಿನ್‌ ಸಿಟಿಗೆ ಜಯ


Team Udayavani, May 27, 2017, 3:00 PM IST

hub5.jpg

ಹುಬ್ಬಳ್ಳಿ: ಇಲ್ಲಿನ ರಾಜನಗರ ಕೆಎಸ್‌ ಸಿಎ ಮೈದಾನದಲ್ಲಿ ನಡೆಯುತ್ತಿರುವ ಸ್ವರ್ಣ ಹುಬ್ಬಳ್ಳಿ ಪ್ರೀಮಿಯರ್‌ ಲೀಗ್‌ ಜ್ಯೂನಿಯರ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ರೈಸಿಂಗ್‌ ಸ್ಟಾರ್‌ ಹುಬ್ಬಳ್ಳಿ ಹಾಗೂ ಟ್ವಿನ್‌ ಸಿಟಿ ಚಾಲೆಂಜರ್ ತಂಡ ಜಯಗಳಿಸಿವೆ. 

ಮೊದಲ ಪಂದ್ಯದಲ್ಲಿ ರೈಸಿಂಗ್‌ ಸ್ಟಾರ್‌ ಹುಬ್ಬಳ್ಳಿ ಹಾಗೂ ಹುಬ್ಬಳ್ಳಿ ವಾರಿಯರ್ ತಂಡದ ಮಧ್ಯ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟಿಂಗ್‌ ಪಡೆದ ಹುಬ್ಬಳ್ಳಿ ವಾರಿಯರ್ ತಂಡ, ನಿಗದಿತ 30 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 144 ರನ್‌ ಪೇರಿಸಿತು.

ತಂಡದ ಪರ ಕಮೇಲ ಬಾಂಬೇವಾಲ್‌(69), ತೇಜಸ್‌ ಮುರಡೇಶ್ವರ(18), ಶ್ಯಾಮ್‌ ಲದ್ದಡ್‌ (14) ರನ್‌ ಪೇರಿಸಿದರು. ರೇಸಿಂಗ್‌ ಸ್ಟಾರ್‌ ಪರ ಆದಿತ್ಯಾ ಹಿರೇಮಠ 3 ವಿಕೆಟ್‌, ತನಿಷ್ಕ ನಾಯ್ಕ 2 ವಿಕೆಟ್‌, ಕುನಾಲ ಶಾನಭಾಗ 1 ವಿಕೆಟ್‌ ಪಡೆದರು. 

ಹುಬ್ಬಳ್ಳಿ ವಾರಿಯರ್ ತಂಡ ನೀಡಿದ 144 ರನ್‌ ಗುರಿ ಬೆನ್ನಟ್ಟಿದ ರೈಸಿಂಗ್‌ ಸ್ಟಾರ್‌ ಹುಬ್ಬಳ್ಳಿ ತಂಡ 26.2 ಓವರ್‌ಗಳಲ್ಲಿ ಕೇವಲ 4 ವಿಕೆಟ್‌ ಕಳೆದುಕೊಂಡು 146 ರನ್‌ ಗಳಿಸುವ ಮೂಲಕ ಜಯದ ನಗೆ ಬೀರಿತು. ತಂಡದ ಪರ ರೋಹನ ಯರೇಸಿಮಿ (ಅಜೇಯ 70), ತನಿಷ್ಕ ನಾಯ್ಕ (37) ರನ್‌ ಗಳಿಸಿದರು.

ಹುಬ್ಬಳ್ಳಿ ವಾರಿಯರ್ ಪರ ಭರತ ದೇವಿಹೊಸೂರ 2 ವಿಕೆಟ್‌, ಸುಜಲ್‌ ಪಾಟೀಲ ಹಾಗೂ ದೃವ ಸೋಳಂಕೆ ತಲಾ 1 ವಿಕೆಟ್‌ ಪಡೆದರು. ಅಂತಿಮವಾಗಿ ರೈಸಿಂಗ್‌ ಸ್ಟಾರ್‌ ಹುಬ್ಬಳ್ಳಿ ತಂಡ 6 ವಿಕೆಟ್‌ ಗಳಿಂದ ಜಯ ತನ್ನದಾಗಿಸಿಕೊಂಡಿತು. ರೋಹನ ಯರೇಸಿಮಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು. 

ಇನ್ನೊಂದು ಪಂದ್ಯದಲ್ಲಿ ಟ್ವಿನ್‌ ಸಿಟಿ ಚಾಲೆಂಜರ್ ಮತ್ತು ಹುಬ್ಬಳ್ಳಿ ಟರ್ಮಿನೇಟರ್ ಮಧ್ಯ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಪಡೆದ ಟ್ವಿನ್‌ ಸಿಟಿ ಚಾಲೆಂಜರ್ ತಂಡ 30 ಓವರ್‌ಗಳಲ್ಲಿ ಕೇವಲ 2 ವಿಕೆಟ್‌ ಕಳೆದುಕೊಂಡು 166 ರನ್‌ಗಳ ಬೃಹತ್‌ ಮೊತ್ತವನ್ನು ಕಲೆ ಹಾಕಿತು. 

ತಂಡದ ಪರ ಮಾಧವ ಧಾರವಾಡಕರ (ಅಜೇಯ 99), ಅನೀಸ್‌ ಭೂಸದ (ಅಜೇಯ 40) ರನ್‌ಗಳಿಸಿದರು. ಹುಬ್ಬಳ್ಳಿ ಟರ್ಮಿನೇಟರ್ ಪರ ರಾಜೇಂದ್ರ ಹಾಗೂ ಅಕ್ಷಯ ತಲಾ 1 ವಿಕೆಟ್‌ ಪಡೆದರು. ಟ್ವಿನ್‌ಸಿಟಿ ಚಾಲೆಂಜರ್ ತಂಡ ನೀಡಿದ 166 ರನ್‌ಗಳ ಬೃಹತ್‌ ಮೊತ್ತವನ್ನು ಬೆನ್ನಟ್ಟಿದ ಹುಬ್ಬಳ್ಳಿ ಟರ್ಮಿನೇಟರ್ ತಂಡ 23.2 ಓವರ್‌ಗಳಲ್ಲಿ ಕೇವಲ 102 ರನ್‌ ಪೇರಿಸಿ ಸರ್ವಪತನ ಕಂಡಿತು.

ತಂಡದ ಪರ ರಾಜೇಂದ್ರ ಡಂಗನವರ (ಅಜೇಯ 58) ರನ್‌ ಬಿಟ್ಟರೆ ಮತ್ಯಾವ ಆಟಗಾರರು ನಿರೀಕ್ಷಿತ ಪ್ರದರ್ಶನ ತೋರಲಿಲ್ಲ. ಟ್ವಿನ್‌ ಸಿಟಿ ಚಾಲೆಂಜರ್ ಪರ ಅನೀಸ ಭೂಸದ, ರಮೇಶ ತಲಾ 3 ವಿಕೆಟ್‌, ರೋಣಕ್‌ ಠಕ್ಕರ ಹಾಗೂ ವಿಜಯ ತಲಾ 1 ವಿಕೆಟ್‌ ಪಡೆದರು. ಅಂತಿಮವಾಗಿ ಟ್ವಿನ್‌ ಸಿಟಿ ಚಾಲೆಂಜರ್ ತಂಡದ ಪರ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿದ ಮಾಧವ ಧಾರವಾಡಕರ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.  

ಟಾಪ್ ನ್ಯೂಸ್

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

7-

Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

prahlad-joshi

CM ಸಿದ್ದರಾಮಯ್ಯ ಬುಡಕ್ಕೆ ನೀರು ಬಂದಿದ್ದಕ್ಕೆ ಯಡಿಯೂರಪ್ಪ ಗುರಿ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

7-

Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

6-karajola

Holalkere: ರಾಜ್ಯ ಸರ್ಕಾರ ಬೆಲೆ ಏರಿಕೆ ನೀತಿ ಖಂಡಿಸಿ ಗೋವಿಂದ ಕಾರಜೋಳ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.