ಹೆಣ್ಮಕ್ಕಳು ಸುಶಿಕ್ಷಿತರಾದರೆ ಕುಟುಂಬ ಚಿತ್ರಣವೇ ಬದಲು

­ಬೋಧಕರ ಪುನಃಶ್ಚೇತನ ತರಬೇತಿ ಶಿಬಿರ

Team Udayavani, Apr 20, 2022, 10:39 AM IST

4

ಧಾರವಾಡ: ಶಿಕ್ಷಣ ಪ್ರತಿಯೊಬ್ಬರ ಹಕ್ಕು, ಹೆಣ್ಣು ಮಕ್ಕಳು ಶಿಕ್ಷಿತರಾದರೆ ಇಡೀ ಕುಟುಂಬದ ಚಿತ್ರಣವೇ ಬದಲಾಗಲು ಸಾಧ್ಯ. ಶಿಕ್ಷಣದಿಂದ ನಮ್ಮ ಹಕ್ಕುಗಳಿಗೆ ಧ್ವನಿ ದೊರೆತು ಬದುಕನ್ನು ಸಾರ್ಥಕ ಪಡಿಸಿಕೊಳ್ಳಬಹುದು. ವಯೋಮಿತಿ, ಲಿಂಗ ತಾರತಮ್ಯವಿಲ್ಲದೇ ಪ್ರತಿಯೊಬ್ಬರೂ ಸಾಕ್ಷರರಾಗಬೇಕು ಎಂದು ಜಿಪಂ ಸಿಇಒ ಡಾ| ಸುರೇಶ ಇಟ್ನಾಳ ಹೇಳಿದರು.

ಲೋಕ ಶಿಕ್ಷಣ ನಿರ್ದೇಶನಾಲಯ, ಜಿಪಂ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ, ಕ್ಲಾಸಿಕ್‌ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ಇಲ್ಲಿನ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಏರ್ಪಡಿಸಿದ್ದ ಬೋಧಕರ ಪುನಶ್ಚೇತನ ತರಬೇತಿ ಶಿಬಿರ ಹಾಗೂ ಪಾಠೊಪಕರಣಗಳ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸ್ವಾತಂತ್ರ್ಯ ಬಂದು 75 ವರ್ಷಗಳ ಅವಧಿಯಲ್ಲಿ ದೇಶ ಶೇ.80 ಸಾಕ್ಷರವಾಗಿದೆ. ಸಂವಿಧಾನದ 21ನೇ ವಿಧಿಯನ್ವಯ ಉಚಿತ ಶಿಕ್ಷಣ ಹಾಗೂ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಜಾರಿಯಲ್ಲಿದೆ. ಡಾ| ಅಂಬೇಡ್ಕರ್‌ ಅವರ ಆಶಯದಂತೆ ಶಿಕ್ಷಣ ಎಂದರೆ ಕೇವಲ ಅಕ್ಷರ ಕಲಿಕೆ ಮಾತ್ರವಲ್ಲ, ಅದು ನಮ್ಮನ್ನು ಜ್ಞಾನಸಂಪನ್ನರಾಗಿಸಿ ಹಕ್ಕುಗಳ ತಿಳಿವಳಿಕೆ ನೀಡುತ್ತದೆ ಎಂದರು.

ಡಿಡಿಪಿಐ ಎಸ್‌.ಎಸ್‌. ಕೆಳದಿಮಠ ಮಾತನಾಡಿ, ವಿದ್ಯೆಯು ಯಾರೂ ಕಸಿದುಕೊಳ್ಳಲಾಗದ ಸಂಪತ್ತು. ಅದನ್ನು ಪ್ರತಿಯೊಬ್ಬರೂ ತಮ್ಮದಾಗಿಸಿಕೊಳ್ಳಲು ಅಕ್ಷರಾಭ್ಯಾಸ ಮಾಡಬೇಕು. ಕಲಿಕೆಗೆ ವಯೋಮಿತಿ ನಿರ್ಬಂಧ ಇಲ್ಲ. ಪ್ರಜಾಪ್ರಭುತ್ವ ಯಶಸ್ವಿಗೆ ಅಕ್ಷರಸ್ಥರ ಪ್ರಮಾಣ ಅಧಿಕವಾಗಿರುವುದು ಮುಖ್ಯ. ಪಾಲಕರು ಮಕ್ಕಳನ್ನು ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸುವುದು ದೊಡ್ಡ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎ.ಎ. ಖಾಜಿ ಮಾತನಾಡಿ, ಮೂಲ ಸಾಕ್ಷರತೆ ಹಾಗೂ ಪ್ರಾಥಮಿಕ ಶಿಕ್ಷಣದಿಂದ ವಂಚಿತರಾಗಿರುವ 15 ವರ್ಷ ಮೇಲ್ಟಟ್ಟ ಜಿಲ್ಲೆಯ ಆಯ್ದ ಗ್ರಾಮಗಳ 5685 ಅನಕ್ಷರಸ್ಥರಿಗೆ ಪ್ರಸಕ್ತ ಸಾಲಿನಲ್ಲಿ ಸಾಕ್ಷರರನ್ನಾಗಿಸಲು ಪ್ರಯತ್ನಿಸಲಾಗುತ್ತಿದೆ. ವಿದ್ಯೆಗೆ ಹೆಸರಾಗಿರುವ ಧಾರವಾಡ ಜಿಲ್ಲೆಯಲ್ಲಿ ಶೇ.80 ಸಾಕ್ಷರರಿದ್ದಾರೆ. ಉಳಿದ ಶೇ.20 ಜನರನ್ನೂ ಸಾಕ್ಷರರಾಗಿಸಲು ಪಣತೊಟ್ಟು ಕಾರ್ಯೋನ್ಮುಖರಾಗಿದ್ದೇವೆ ಎಂದರು.

ಸಾನ್ನಿಧ್ಯ ವಹಿಸಿದ್ದ ರಾಮಕೃಷ್ಣ ವಿವೇಕಾನಂದ ಆಶ್ರಮದ ವಿಜಯಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ, ದೇಶವೆಂದರೆ ಅಲ್ಲಿ ಬೆಟ್ಟ, ಗುಡ್ಡ, ಚಿನ್ನ, ಲೋಹದ ಗಣಿ ಸಂಪತ್ತು ಹೇರಳವಾಗಿದ್ದರೂ ಅದು ಬಲಿಷ್ಠ ರಾಷ್ಟ್ರವೆನಿಸಲಾರದು. ಸಾಕ್ಷರರು, ವಿಚಾರವಂತ ಪ್ರಜೆಗಳಿರುವ ರಾಷ್ಟ್ರ ಸದೃಢ ರಾಷ್ಟ್ರವೆನಿಸಿಕೊಳ್ಳುತ್ತದೆ ಎಂದು ಹೇಳಿದರು.

ವಯಸ್ಕರ ಶಿಕ್ಷಣದ ನೋಡಲ್‌ ಅಧಿಕಾರಿಗಳನ್ನು, ದಾನಿ ಬಸವರಾಜ ಕಣದಾಳಿ ಅವರನ್ನು ಸತ್ಕರಿಸಲಾಯಿತು.

ಡಯಟ್‌ ಪ್ರಾಚಾರ್ಯೆ ಜಯಶ್ರೀ ಕಾರೇಕಾರ್‌, ಕ್ಲಾಸಿಕ್‌ ಸಮೂಹ ಸಂಸ್ಥೆಗಳ ಸಂಗಮೇಶ ಕಟ್ಟಿಮನಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಿರೀಶ ಪದಕಿ, ಉಮೇಶ ಬೊಮ್ಮಕ್ಕನವರ, ಅಶೋಕ ಸಿಂದಗಿ, ಉಮಾ ಬಸಾಪುರ, ಜಿ.ಎಸ್‌. ಮಠಪತಿ, ಬಸವರಾಜ ಮಾಯಾಚಾರ್ಯ, ಶಿಕ್ಷಣ ಉಪಸಮನ್ವಯಾಧಿಕಾರಿ ಎಸ್‌.ಎಂ. ಹುಡೇದಮನಿ, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ, ವಯಸ್ಕರ ಶಿಕ್ಷಣ ಕಾರ್ಯಕ್ರಮ ಸಹಾಯಕ ಶ್ರೀಶೈಲ ರಾಚಣ್ಣವರ ಮತ್ತಿತರರಿದ್ದರು.

ಎಸ್‌.ಸಿ. ಶಾನವಾಡ ನಿರೂಪಿಸಿದರು. ಡಾ| ರಾಮು ಮೂಲಗಿ ಸಾಕ್ಷರತಾ ಗೀತೆಗಳನ್ನು ಪ್ರಸ್ತುತ ಪಡಿಸಿದರು. ನಾಗೇಶ ನಾಯಕ ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.