ಮೂವರು ಮಕ್ಕಳೊಂದಿಗೆ ಕೆರೆಗೆ ಹಾರಿದ ತಾಯಿ
Team Udayavani, Aug 14, 2019, 11:31 AM IST
ಧಾರವಾಡ: ತನ್ನ ಮೂವರು ಮಕ್ಕಳೊಂದಿಗೆ ತಾಯಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ತನ್ನ ಮಕ್ಕಳೊಂದಿಗೆ ಕೆಲಗೇರಿ ಕೆರೆಗೆ ಹಾರಿದ ಮಹಿಳೆಯನ್ನು ರತ್ನವ್ವ ವೇದಾರ ಎಂದು ಗುರುತಿಸಲಾಗಿದೆ.
ಘಟನೆ ನಡೆದ ತಕ್ಷಣವೇ ಸ್ಥಳೀಯರು ತಾಯಿ ಮತ್ತು ಇಬ್ಬರು ಮಕ್ಕಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇನ್ನೊಂದು ಮಗು ಮಾತ್ರ ನೀರಿನಲ್ಲಿ ಕೊಚ್ಚಿಹೋಗಿದ್ದು ಹುಡುಕಾಟ ಮುಂದುವರೆದಿದೆ.
ಮೂಲತಃ ಕೆಲಗೇರಿಯವರಾಗಿರುವ ರತ್ನವ್ವರನ್ನು ಜಮಖಂಡಿಯ ವ್ಯಕ್ತಿಯೊಬ್ಬರಿಗೆ ವಿವಾಹ ಮಾಡಿಕೊಡಲಾಗಿತ್ತು. ಪಂಚಮಿ ಹಬ್ಬಕ್ಕೆಂದು ರತ್ನವ್ವ ತನ್ನ ಮೂವರು ಮಕ್ಕಳೊಂದಿಗೆ ತವರು ಮನೆಗೆ ಬಂದಿದ್ದರು. ಇಂದು ಏಕಾಏಕಿ ಮಕ್ಕಳೊಂದಿಗೆ ತಾನೂ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದು ಮಾತ್ರ ಯಾಕೆ ಎಂಬ ವಿಚಾರ ಇದೀಗ ಸ್ಥಳೀಯರ ಅಚ್ಚರಿಗೆ ಕಾರಣವಾಗಿದೆ.
ಘಟನೆಯಲ್ಲಿ ರಕ್ಷಣೆಗೊಳಗಾದ ತಾಯಿ ಮತ್ತು ಇಬ್ಬರು ಮಕ್ಕಳನ್ನು ಇದೀಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿನ್