ಠಾಣೆ ಹೊರಗಡೆಯೇ ಕಾರ್ಯ ನಿರ್ವಹಣೆ


Team Udayavani, Jun 27, 2020, 11:30 AM IST

ಠಾಣೆ ಹೊರಗಡೆಯೇ ಕಾರ್ಯ ನಿರ್ವಹಣೆ

ಹುಬ್ಬಳ್ಳಿ: ಬೆಂಡಿಗೇರಿ ಠಾಣೆ ಆವರಣದಲ್ಲಿ ಹೈಡ್ರೋ ಪ್ಲೋರೈಡ್‌ ದ್ರಾವಣ ಸಿಂಪರಣೆ ಮಾಡಲಾಯಿತು.

ಹುಬ್ಬಳ್ಳಿ: ಇಲ್ಲಿನ ಬೆಂಡಿಗೇರಿ ಪೊಲೀಸ್‌ ಠಾಣೆಗೆ ನಿಯೋಜನೆಗೊಂಡಿದ್ದ ಇಬ್ಬರು ಮಹಿಳಾ ಗೃಹರಕ್ಷಕರಿಗೆ (ಹೋಮ್‌ ಗಾರ್ಡ್‌) ಕೋವಿಡ್ ಸೋಂಕು ದೃಢಪಟ್ಟಿದ್ದರಿಂದ ಕಟ್ಟಡಕ್ಕೆ ಔಷಧಿ ಸಿಂಪರಣೆ ಹಿನ್ನೆಲೆಯಲ್ಲಿ, ಶುಕ್ರವಾರ ಕಟ್ಟಡದ ಹೊರಗಡೆ ಕಾರ್ಯ ನಿರ್ವಹಣೆ ಮಾಡುವಂತಾಯಿತು.

ಶುಕ್ರವಾರ ಠಾಣೆಗೆ ಸಾರ್ವಜನಿಕರು ಆಗಮಿಸುವುದನ್ನು ನಿರ್ಬಂಧಿಸಲಾಗಿತ್ತು. ಠಾಣೆಯ ಕೆಲಸ-ಕಾರ್ಯಗಳನ್ನು ಆವರಣಕ್ಕೆ ಸ್ಥಳಾಂತರಿಸಿ ಹೊರ ಠಾಣೆಯಾಗಿ ಮಾರ್ಪಡಿಸಲಾಗಿತ್ತು. ಸಿಬ್ಬಂದಿಯು ಠಾಣೆಯ ಹೊರಗಡೆ ಆವರಣದಲ್ಲೇ ಕುಳಿತುಕೊಂಡು ತಮ್ಮ ಕೆಲಸ ಮಾಡುತ್ತಿದ್ದಾರೆ. ಠಾಣೆಯ ಮಹಿಳಾ ಪಿಎಸ್‌ಐ, ಎಎಸ್‌ಐ ಸೇರಿದಂತೆ ಎಲ್ಲಾ ಎಂಟು ಮಹಿಳಾ ಸಿಬ್ಬಂದಿ ಹೋಮ್‌ ಕ್ವಾರಂಟೈನ್‌ದಲ್ಲಿದ್ದು, ಕೇವಲ ಪುರುಷ ಸಿಬ್ಬಂದಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಗುರುವಾರ ಠಾಣೆಯ ಎಲ್ಲಾ 51 ಸಿಬ್ಬಂದಿಯನ್ನು ಕೋವಿಡ್‌-19 ತಪಾಸಣೆಗೆ ಒಳಪಡಿಸಲಾಗಿದ್ದು, ವರದಿಗೆ ಕಾಯುತ್ತಿದ್ದಾರೆ.

ಬೆಂಡಿಗೇರಿ ಠಾಣೆಯ ಮಹಿಳಾ ಸಿಬ್ಬಂದಿ ಕಳೆದ ತಿಂಗಳು ದಾವಣಗೆರೆ ಮೂಲದ ವೃದ್ಧೆಯನ್ನು ಘಂಟಿಕೇರಿಯ ನಿರ್ಗತಿಕ ಕೇಂದ್ರಕ್ಕೆ ಕರೆದೊಯ್ದು ಆಶ್ರಯ ಒದಗಿಸಿದ್ದರು. ಈ ಸಂದರ್ಭದಲ್ಲಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಗೃಹರಕ್ಷಕಿಯರು ವೃದ್ಧೆಗೆ ಸಹಾಯ ಮಾಡಿದ್ದರು. ವೃದ್ಧೆಯನ್ನು ಕೋವಿಡ್‌-19 ತಪಾಸಣೆಗೆ ಒಳಪಡಿಸಿದ್ದಾಗ ಸೋಂಕು ದೃಢಪಟ್ಟಿತ್ತು. ಹೀಗಾಗಿ ಠಾಣೆಯ ಸಿಬ್ಬಂದಿಯನ್ನು ಕೋವಿಡ್ ತಪಾಸಣೆಗೆ ಒಳಪಡಿಸಿದಾಗ ಪ್ರಾಥಮಿಕ ಸಂಪರ್ಕ ಹೊಂದಿದ್ದ ಗೃಹರಕ್ಷಕಿಯರಲ್ಲೂ ಬುಧವಾರ ಸೋಂಕು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಸಂಪೂರ್ಣ ಠಾಣೆಯನ್ನು ಸ್ಯಾನಿಟೈಸರ್‌ ಮಾಡಲಾಯಿತು. ಹು-ಧಾ ಮಹಾನಗರ ಪಾಲಿಕೆಯ ಆರೋಗ್ಯ ಸಿಬ್ಬಂದಿ ಠಾಣೆಯ ಒಳಗಡೆ ಹಾಗೂ ಆವರಣವನ್ನು ಸಂಪೂರ್ಣವಾಗಿ ಹೈಡ್ರೋಪ್ಲೋರೈಡ್‌ ದ್ರಾವಣದಿಂದ ಸ್ವತ್ಛಗೊಳಿಸಿದರು. ಶನಿವಾರದಿಂದ ಮತ್ತೆ ಠಾಣೆ ಒಳಗಡೆಯಿಂದಲೇ ಕೆಲಸ ನಿರ್ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.