ಸೈಕಲ್ನೊಂದಿಗೆ ವಿಶ್ವ ಪರ್ಯಟನೆ
Team Udayavani, Feb 27, 2020, 12:43 PM IST
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ವಿಶ್ವ ಶಾಂತಿ, ಸೌಹಾರ್ದತೆಗಾಗಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ವಿಶ್ವಕ್ಕೆ ಜಾಗೃತಿ ಮೂಡಿಸುವ ಸಲುವಾಗಿ ವೃದ್ಧರೊಬ್ಬರು ಸೈಕಲ್ ಮುಖಾಂತರ ವಿಶ್ವ ಪರ್ಯಟನೆ ಕೈಗೊಂಡಿದ್ದಾರೆ.
ಮೂಲತಃ ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಅಂಬರನಾಥದ ಮನೋಹರ ಸಖಾರಾಮ ಕದಂ ಎಂಬುವರೆ ವಿಶ್ವ ಪರ್ಯಟನೆ ನಡೆಸುತ್ತಿದ್ದಾರೆ. ಮನೋಹರ ಕದಂ ಅವರು ಅಂದಾಜು 50 ಸಾವಿರ ಕಿಲೋ ಮೀಟರ್ ವಿಶ್ವ ಪರ್ಯಟನೆ ಮಾಡಲು ನಿರ್ಧರಿಸಿದ್ದು, ಈಗಾಗಲೇ ಸೈಕಲ್ ತುಳಿಯುತ್ತಲೇ ಬಾಂಗ್ಲಾದೇಶ, ಚೀನಾ, ನೇಪಾಳ, ಪಾಕಿಸ್ತಾನ, ಶ್ರೀಲಂಕಾ, ಸಿಂಗಾಪುರ, ಮಲೇಷಿಯಾ, ಜರ್ಖಾತ್ ಮತ್ತು ಥೈಲ್ಯಾಂಡ್ ದೇಶಗಳ ಸವಾರಿ ಮಾಡಿದ್ದಾರೆ. ಈಗ ಉಲ್ಲಾಸನಗರದಿಂದ ಬೆಂಗಳೂರು, ಊಟಿ ಪರ್ಯಟನೆ ಕೈಗೊಂಡಿದ್ದಾರೆ.
ಬುಧವಾರ ಬೆಳಗ್ಗೆ ನಗರಕ್ಕೆ ಆಗಮಿಸಿದ್ದು, ಸಂಜೆ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು. ಇವರು ದಿನಕ್ಕೆ ನೂರು ಕಿ.ಮೀ. ಸೈಕಲ್ ತುಳಿಯುವ ಮೂಲಕ ತಮ್ಮ ವಿಶ್ವ ಪರ್ಯಟನೆ ಮಾಡುತ್ತಿದ್ದಾರೆ. ಕೇವಲ ಒಂದು ಸೈಕಲ್ ಹಾಗೂ ಒಂದು ಏರ್ಪಂಪ್ ಮಾತ್ರವೇ ತೆಗೆದುಕೊಂಡು ಪ್ರಯಾಣ ಮಾಡುತ್ತಿರುವ ಇವರು, ಯಾವುದೇ ಸಂದರ್ಭದಲ್ಲಿ ಕೂಡ ಬಸ್ ಹಾಗೂ ಇನ್ನಿತರೆ ವಾಹನದ ಸಹಾಯ ಬಯಸದೆ ತಮ್ಮ ದೈಹಿಕ ಸಾಮರ್ಥ್ಯದಿಂದಲೇ ಪರ್ಯಟನೆ ಮಾಡುತ್ತಿದ್ದಾರೆ.
ಮಾರ್ಚ್ ಇಲ್ಲವೆ ಏಪ್ರಿಲ್ನಲ್ಲಿ ಇಂಗ್ಲೆಂಡ್ ದೇಶಕ್ಕೆ ಪ್ರಯಾಣ ಬೆಳೆಸಲಿರುವ ಇವರು, ಲಂಡನ್ದ ಮ್ಯೂಸಿಯಂನಲ್ಲಿ ಇರಿಸಲಾದ ಛತ್ರಪತಿ ಶಿವಾಜಿ ಅವರ ಖಡ್ಗವನ್ನು ನೋಡುವ ಅಭಿಲಾಷೆ ಹೊಂದಿದ್ದಾರೆ. ಬುಧವಾರ ಮಧ್ಯಾಹ್ನ ಮನೋಹರ ಕದಂ ಅವರನ್ನು ಗೋಕುಲ ರಸ್ತೆ ಠಾಣೆಯ ಪೊಲೀಸರು ಶುಭಕೋರಿ ಬೀಳ್ಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್