ನೀರಿಗೆ ನಿಶ್ಚಿಂತೆ; ಜೋಳದ್ದೇ ಚಿಂತೆ

•ಅಳ್ನಾವರದ ಜಲಪಾತ್ರೆ ಡೌಗಿ ಬ್ಯಾರೇಜ್‌ ಭರ್ತಿ•ಪಪಂ ಅಧಿಕಾರಿಗಳ ನಿಟ್ಟುಸಿರು

Team Udayavani, Jul 16, 2019, 2:20 PM IST

hubali-tdy-4..

ಅಳ್ನಾವರ: ತಾಲೂಕಿನ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಳ್ಳಗಳು ತುಂಬಿಕೊಂಡಿವೆ. ಪಟ್ಟಣದ ಜನರಿಗೆ ಕುಡಿಯುವ ನೀರನ್ನು ಪೂರೈಸುವ ಡೌಗಿ ಹಳ್ಳದ ಬ್ಯಾರೇಜ್‌ ತುಂಬಿದ್ದು, ನೋಡುಗರನ್ನು ಕೈಬೀಸಿ ಕರೆಯುತ್ತಿದೆ.

ಪಕ್ಕದ ಖಾನಾಪುರ ತಾಲೂಕಿನಲ್ಲಿ ಹೆಚ್ಚಿನ ಮಳೆಯಾಗಿದ್ದರಿಂದ ನೀರು ಹರಿದು ಬರುತ್ತಿದ್ದು ಬ್ಯಾರೇಜ್‌ ಭರ್ತಿಯಾಗಿದೆ. ಜನರ ನೀರಿನ ಬವಣೆ ನೀಗಿಸಲು ವರುಣ ಕೃಪೆ ತೋರಿದ್ದಾನೆ.

ಪಟ್ಟಣದಲ್ಲಿ ಸುಮಾರು 18 ಸಾವಿರ ಜನಸಂಖ್ಯೆ ಇದ್ದು, ಡೌಗಿ ಹಳ್ಳದ ನೀರನ್ನು ವರ್ಷದ ಏಳೆಂಟು ತಿಂಗಳು ಉಪಯೋಗಿಸುತ್ತಾರೆ. ಫೆಬ್ರವರಿ ಕೊನೆ ಅಥವಾ ಮಾರ್ಚ್‌ ಮೊದಲ ವಾರದಲ್ಲಿ ಬ್ಯಾರೇಜ್‌ ಬತ್ತುತ್ತಿದ್ದು, ನಂತರದ ದಿನಗಳಲ್ಲಿ ಟ್ಯಾಂಕರ ನೀರೇ ಗತಿಯಾಗುತ್ತಿದೆ. ಕಳೆದ ಮಾರ್ಚ್‌ ತಿಂಗಳಿನಿಂದ ಟ್ಯಾಂಕರ್‌ ನೀರನ್ನು ಅಳ್ನಾವರ ಜನರಿಗೆ ಪೂರೈಸುತ್ತಿರುವ ಪಪಂ ಅಧಿಕಾರಿಗಳಿಗೆ ಹಳ್ಳ ತುಂಬಿರುವುದರಿಂದ ನಿಟ್ಟುಸಿರು ಬಿಡುವಂತಾಗಿದೆ. ನಾಲ್ಕು ದಶಕಗಳ ಹಿಂದೆ ನಿರ್ಮಿಸಿದ ಈ ಬ್ಯಾರೇಜ್‌ ಕುಡಿಯುವ ನೀರಿನ ಮೂಲವಾಗಿದೆ. ಇಲ್ಲಿ ಸಂಗ್ರಹವಾದ ನೀರನ್ನು ಯಂತ್ರಗಳ ಮೂಲಕ ಮೇಲೆತ್ತಿ ಶುದ್ಧೀಕರಿಸಿ ನಲ್ಲಿಗಳ ಮೂಲಕ ಪೂರೈಸಲಾಗುತ್ತಿದೆ.

ಬೆಳೆ ಹಾನಿ: ಮುಂಗಾರು ಮಳೆ ವಿಳಂಬವಾಗಿದ್ದರಿಂದ ಒಣ ಬಿತ್ತನೆ ಮಾಡಿದ್ದ ರೈತರಿಗೆ ಈಗ ಮತ್ತೂಂದು ಸಮಸ್ಯೆ ಎದುರಾಗಿದೆ. ಬಿತ್ತನೆ ಮಾಡಿರುವ ಭತ್ತ ಮತ್ತು ಗೋವಿನಜೋಳದಲ್ಲಿ ಬೆಳೆಗಿಂತ ಹುಲ್ಲು ಅಧಿಕವಾಗಿ ಬೆಳೆದಿದ್ದು, ನಿಯಂತ್ರಣ ಮಾಡುವುದು ಅಸಾಧ್ಯವಾಗಿದೆ. ಕಳೆ ನಾಶಕ ಸಿಂಪಡಿಸಿದರೂ ನಿಯಂತ್ರಣಕ್ಕೆ ಬರುತ್ತಿಲ್ಲ ಎನ್ನುವುದು ರೈತರ ಅಳಲಾಗಿದೆ. ಪ್ರಾರಂಭದಲ್ಲಿ ಇಲ್ಲದ ಮಳೆ ಈಗ ಸತತವಾಗಿ ಸುರಿಯುತ್ತಿರುವುದರಿಂದ ಬೆಳೆಗಳು ಭೂಮಿಯಿಂದ ಮೇಲೇಳದೆ ಕಮರುತ್ತಿವೆ. ಬೀಜ ಮತ್ತು ಗೊಬ್ಬರಕ್ಕಾಗಿ ಖರ್ಚು ಮಾಡಿರುವ ಹಣವೂ ಮರಳದಂತಾಗಿದ್ದು, ಸರ್ಕಾರ ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.

ಬೆಳೆ ವಿಮೆ: ಕಳೆದ ಮುಂಗಾರು ಹಂಗಾಮಿನ ಬೆಳೆ ವಿಮೆ ಇನ್ನುವರೆಗೂ ಬಿಡುಗಡೆ ಮಾಡಿಲ್ಲ. ಈ ಬಗ್ಗೆ ಬ್ಯಾಂಕ್‌ನವರು ಅಥವಾ ಕೃಷಿ ಇಲಾಖೆಯವರಿಂದ ಯಾವುದೇ ಮಾಹಿತಿ ದೊರೆಯುತ್ತಿಲ್ಲ. ಸಾಲ ಮಾಡಿ ವಿಮೆ ಕಂತು ಭರಣ ಮಾಡಿದ್ದು, ಬೆಳೆಯೂ ಇಲ್ಲ ಇನ್ನೊಂದೆಡೆ ಪರಿಹಾರವೂ ಇಲ್ಲವೆಂದು ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಪಟ್ಟಣಕ್ಕೆ ನೀರು ಪೂರೈಸುವ ಡೌಗಿ ಹಳ್ಳದ ಬ್ಯಾರೇಜ್‌ ಭರ್ತಿಯಾಗಿದ್ದು, ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವ ತಾಪತ್ರಯ ದೂರವಾಗಿದೆ. ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಬೇಕು ಹಾಗೂ ಪಟ್ಟಣದ ಸ್ವಚ್ಛತೆಗೆ ಸಹಕರಿಸಬೇಕು.•ವೈ.ಜಿ. ಗದ್ದಿಗೌಡರ, ಮುಖ್ಯಾಧಿಕಾರಿ, ಪಪಂ ಅಳ್ನಾವರ

 

•ಎಸ್‌. ಗೀತಾ

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.