ಯರಗುಪ್ಪಿಯಲ್ಲಿ ಯಾರ “ಕೈ’ ಮೇಲಾಗಲಿದೆ?
ಮೂಡದ ಒಮ್ಮತ
Team Udayavani, Dec 26, 2020, 1:08 PM IST
ಕುಂದಗೋಳ: ತಾಲೂಕಿನ ಯರಗುಪ್ಪಿ ಗ್ರಾಪಂ ಚುನಾವಣೆ ಪ್ರಚಾರ ಜೋರಾಗಿದ್ದು, ಯಾರ ಕೈ ಮೇಲಾಗುತ್ತದೆ ಎಂಬ ಲೆಕ್ಕಾಚಾರ ಶುರುವಾಗಿದೆ. ಯರಗುಪ್ಪಿ ಪಂಚಾಯಿತಿ ಮುಳ್ಳೊಳ್ಳಿ, ಚಿಕ್ಕನರ್ತಿ ಸೇರಿ ಒಟ್ಟು 16 ಸದಸ್ಯರ ಬಲ ಹೊಂದಿದ್ದು, ಇದರಲ್ಲಿ ಯರಗುಪ್ಪಿ-10 ಸ್ಥಾನ, ಮುಳ್ಳೊಳ್ಳಿ-3, ಚಿಕ್ಕನರ್ತಿ-3 ಸ್ಥಾನಗಳಿಗೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ.
ಮಾಜಿ ಶಾಸಕ ಎಂ.ಎಸ್.ಅಕ್ಕಿ, ಸಿ.ಎಸ್. ಶಿವಳ್ಳಿ ಮತ್ತು ಎಂ.ಆರ್. ಪಾಟೀಲ್ ಈ ಮೂರೂ ನಾಯಕರ ಹುಟ್ಟೂರು ಯರಗುಪ್ಪಿ ಆಗಿರುವುದರಿಂದ ಇಲ್ಲಿನ ಬೆಂಬಲಿಗರು ಅವರವರ ನಾಯಕರನ್ನೇ ನೆಚ್ಚಿಕೊಂಡಿದ್ದಾರೆ. ಪ್ರತಿ ಬಾರಿಯೂ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಬೆಂಬಲಿಗರ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡುತ್ತಿತ್ತು.
ಇದನ್ನೂ ಓದಿ:ಕ್ರಿಸ್ಮಸ್ ಸಂಭ್ರಮ; ಸಾಮೂಹಿಕ ಪ್ರಾರ್ಥನೆ
ಆದರೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಎರಡು ಬಣಗಳು ಕಣಕ್ಕಿಳಿದಿರುವುದರಿಂದ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ನಾಯಕರಲ್ಲಿ ಒಮ್ಮತ ಮೂಡದೇ ಇರುವುದರಿಂದ ಎಲ್ಲಾ ಸ್ಥಾನಗಳಿಗೆ ಅವರವರ ಬೆಂಬಲಿಗರು ಸ್ಪರ್ಧಿಸಿದ್ದಾರೆ. ತಮ್ಮ ತಮ್ಮ ಬೆಂಬಲಿಗರನ್ನು ಗೆಲ್ಲಿಸಿಕೊಳ್ಳುವ ದೊಡ್ಡ ಜವಾಬ್ದಾರಿ ಶಿವಳ್ಳಿ ಹಾಗೂ ಅಕ್ಕಿಯವರ ಮೇಲೆ ಇರುವುದರಿಂದ ತೀವ್ರ ಕುತೂಹಲ ಮೂಡಿದೆ.
ಇದರ ಮಧ್ಯೆಯೇ ಬಿಜೆಪಿ ತಮ್ಮ ಬೆಂಬಲಿಗರನ್ನೂ ಕಣಕ್ಕಿಳಿಸಿದ್ದು ಹೇಗಾದರೂ ಮಾಡಿ ಈ ಬಾರಿ ಯರಗುಪ್ಪಿ ಗ್ರಾಮ ಪಂಚಾಯಿತಿಯನ್ನು ತಮ್ಮ ತೆಕ್ಕೆಗೆ ತೆಗೆದು ಕೊಳ್ಳಬೇಕೆಂಬ ತವಕದಲ್ಲಿದ್ದಾರೆ. ಇವರೊಂದಿಗೆ ಪಕ್ಷೇತರ ಅಭ್ಯರ್ಥಿಗಳೂ ಕಣಕ್ಕಿಳಿದಿರುವುದು ತೀವ್ರ ಕುತೂಹಲ ಕೆರಳಿಸಿ¨
ಕಾಂಗ್ರೆಸ್ನಲ್ಲಿ ಯಾವ ಬಣವೂ ಇಲ್ಲ. ಇದು ಊಹಾಪೋಹ. ನಾವಿಬ್ಬರೂ ಸೇರಿ ಚುನಾವಣೆ ಮಾಡುತ್ತಿದ್ದೇವೆ.
ಕುಸುಮಾವತಿ ಶಿವಳ್ಳಿ, ಶಾಸಕಿ
ಶೀತಲ್ ಎಸ್ ಮುರಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA