ಯೋಗ ಬದುಕಿನ ಸುಯೋಗವಾಗಲಿ

•ಆಸನಗಳಿಗಷ್ಟೇ ಮಹತ್ವ ನೀಡಿ ಯೋಗದ ಉಳಿದ ಅಂಶಗಳ ಕಡೆಗಣನೆ: ಸ್ವಾಮೀಜಿ ವಿಷಾದ

Team Udayavani, Jun 19, 2019, 2:10 PM IST

hubali-tdy-5..

ಧಾರವಾಡ: ದೇವರಹುಬ್ಬಳ್ಳಿ ಸಿದ್ಧಾಶ್ರಮದಲ್ಲಿ ಸಿದ್ಧಶಿವಯೋಗಿಗಳು ಯೋಗಾಭ್ಯಾಸ ತರಬೇತಿ ನೀಡಿದರು.

ಧಾರವಾಡ: ಯೋಗ ಎಂದರೆ ಬರೀ ಆಸನಗಳನ್ನು ಮಾಡುವುದಲ್ಲ, ಬದುಕನ್ನು ಸಾತ್ವಿಕವಾಗಿ ಮತ್ತು ಶ್ರೇಷ್ಠತೆಯೊಂದಿಗೆ ಜೀವಿಸುವುದಾಗಿದೆ ಎಂದು ದೇವರಹುಬ್ಬಳ್ಳಿಯ ಸಿದ್ಧಾಶ್ರಮದ ಶ್ರೀ ಸಿದ್ಧಶಿವಯೋಗಿ ಸ್ವಾಮೀಜಿ ಹೇಳಿದರು.

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಸಿದ್ಧಾಶ್ರಮದಲ್ಲಿ ಹಮ್ಮಿಕೊಂಡಿರುವ ಯೋಗಾಭ್ಯಾಸ ಶಿಬಿರದಲ್ಲಿ ಅವರು ಮಾತನಾಡಿದರು. ಯೋಗ ಎಂದರೆ ಎಲ್ಲರೂ ಬರೀ ಆಸನಗಳನ್ನು ಹಾಕುವುದು ಎಂದು ತಿಳಿಸಿದ್ದಾರೆ. ಆದರೆ ಇದರಲ್ಲಿ ಎಂಟು ವಿಧಾನಗಳಿದ್ದು, ಅವುಗಳಲ್ಲಿ ಆಸನಗಳು ಮೂರನೇ ಕ್ರಮವಾಗಿದೆ. ಈ ಎಂಟು ವಿಧಾನಗಳನ್ನು ಸರಿಯಾಗಿ ಅಳವಡಿಸಿಕೊಂಡಾಗ ಮಾತ್ರ ಪರಿಪೂರ್ಣ ಯೋಗ ಸಿದ್ಧಿ ಸಾಧ್ಯವಿದೆ. ಆದರೆ ಇಂದಿನ ದಿನಗಳಲ್ಲಿ ಬರೀ ಆಸನಗಳಿಗೆ ಎಲ್ಲರೂ ಮಹತ್ವ ಕೊಟ್ಟು ಉಳಿದ ಯೋಗತ್ವದ ಅಂಶಗಳನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದರು.

ಇಡೀ ಮನುಕುಲದ ಉದ್ಧಾರಕ್ಕಾಗಿ ಪತಂಜಲಿ ಮಹರ್ಷಿಗಳು ಸೇರಿ ಋಷಿ ಮುನಿಗಳು ಯೋಗವನ್ನು ಈ ಪ್ರಪಂಚಕ್ಕೆ ಕೊಡುಗೆಯಾಗಿ ನೀಡಿದರು. ಆದರೆ ಇಂದಿನ ದಿನಗಳಲ್ಲಿ ಯುವಕರು ಇದನ್ನು ಬಳಸಿಕೊಳ್ಳದೇ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ತರುಣರು ರಾಷ್ಟ್ರ ಕಟ್ಟುವ ಶಕ್ತಿಯಾಗಿ ಬೆಳೆದು ನಿಲ್ಲಬೇಕು ಎಂದು ಹೇಳಿದರು.

ಸಮರ್ಥ ರಾಮದಾಸರು ಹಳ್ಳಿ ಹಳ್ಳಿಗಳಲ್ಲಿ ಹನುಮಾನ ಮಂದಿರಗಳನ್ನು ನಿರ್ಮಿಸುವ ಮೂಲಕ ಜನರಲ್ಲಿ ಆರೋಗ್ಯ ಮತ್ತು ರಾಷ್ಟ್ರ ರಕ್ಷಣೆಯ ಪರಿಕಲ್ಪನೆ ಮೂಡಿಸಿದ್ದರು. ಆದರೆ ಇದನ್ನು ಅರ್ಥ ಮಾಡಿಕೊಳ್ಳದ ಜನ ಬರೀ ಹನುಮಾನ ಮಂದಿರದಲ್ಲಿ ಭಕ್ತಿ ಕಾರ್ಯಕ್ರಮ ನಡೆಸಿ ಸುಮ್ಮನಾಗುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಐದು ದಿನದ ಶಿಬಿರ: ದೇವರಹುಬ್ಬಳ್ಳಿ ಗ್ರಾಮದ ವಿದ್ಯಾರ್ಥಿಗಳು, ತರುಣರು ಮತ್ತು ವಯೋವೃದ್ಧರಿಗೆ ಐದು ದಿನಗಳ ಕಾಲ ಯೋಗಾಸನ, ಪ್ರಾಣಾಯಾಮ ಕುರಿತು ಶ್ರೀ ಸಿದ್ಧಶಿವಯೋಗಿಗಳಿಂದ ಸದ್ಬೋಧನೆ ಹಮ್ಮಿಕೊಳ್ಳಲಾಗಿದೆ. ಜೂ. 21ರಂದು ಗ್ರಾಮದಲ್ಲಿ ಯೋಗದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.