21ರಂದು ಜಿಲ್ಲಾಡಳಿತದಿಂದ ಯೋಗ ದಿನಾಚರಣೆ
Team Udayavani, Jun 15, 2019, 1:24 PM IST
ಧಾರವಾಡ: ಡಿಸಿ ಕಚೇರಿ ಸಭಾಂಗಣದಲ್ಲಿ ಜರುಗಿದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಸಿದ್ಧತಾ ಸಭೆಯಲ್ಲಿ ಡಿಸಿ ದೀಪಾ ಚೋಳನ್ ಮಾತನಾಡಿದರು.
ಧಾರವಾಡ: ಐದನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಇತರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಜೂ. 20ರಂದು ಯೋಗ ಜಾಗೃತಿ ನಡಿಗೆ ಹಾಗೂ 21ರಂದು ಯೋಗಾಭ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿ ದೀಪಾ ಚೋಳನ್ ಹೇಳಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯೋಗ ಜಾಗೃತಿ ನಡಿಗೆ ಹಾಗೂ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ನಗರದ ಶಾಲಾ-ಕಾಲೇಜು, ಸರ್ಕಾರಿ ಹಾಸ್ಟೆಲ್ಗಳ ವಿದ್ಯಾರ್ಥಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಬೇಕು. ಮಳೆಗಾಲ ಆರಂಭವಾಗಿರುವುದರಿಂದ ಒಳಾಂಗಣ ಕ್ರೀಡಾಂಗಣವನ್ನೂ ಮುನ್ನೆಚ್ಚರಿಕೆಯಾಗಿ ಸಿದ್ಧಪಡಿಸಿ ಇಟ್ಟುಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಉಪಾಹಾರ, ಕುಡಿಯುವ ನೀರು ಮತ್ತಿತರ ಮೂಲ ೌಕರ್ಯ ಕಲ್ಪಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ| ಸಂಗಮೇಶ ಕಲಹಾಳ ಮಾತನಾಡಿ, 20ರಂದು ಬೆಳಗ್ಗೆ 8 ಗಂಟೆಗೆ ಡಾ| ಆರ್.ಎನ್. ಶೆಟ್ಟಿ ಕ್ರೀಡಾಂಗಣದಿಂದ ಯೋಗ ಜಾಗೃತಿ ನಡಿಗೆ ಆರಂಭವಾಗಲಿದೆ. ಜ್ಯುಬಿಲಿ ವೃತ್ತ, ಮಹಾನಗರಪಾಲಿಕೆ, ಜಿಲ್ಲಾಸ್ಪತ್ರೆ, ಜಿಲ್ಲಾ ಆಯುರ್ವೇದ ಆಸ್ಪತ್ರೆ, ಕೊಂಡವಾಡ ಓಣಿ, ವಿಜಯಾ ರಸ್ತೆ, ಸಿಬಿಟಿ, ಸ್ವಾಮಿ ವಿವೇಕಾನಂದ ವೃತ್ತ, ಹಳೆ ಬಸ್ ನಿಲ್ದಾಣ ಮಾರ್ಗಗಳಲ್ಲಿ ಸಂಚರಿಸಿ ಪುನಃ ಕ್ರೀಡಾಂಗಣ ತಲುಪಲಾಗುವುದು ಎಂದರು.
21ರಂದು ಬೆಳಗ್ಗೆ 6:45 ಗಂಟೆಗೆ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ಬಳಿಕ ಬೆಳಗ್ಗೆ 7ರಿಂದ 8 ಗಂಟೆಯವರೆಗೆ ಯೋಗಾಭ್ಯಾಸ ಕಾರ್ಯಕ್ರಮ ಜರುಗಲಿದೆ. ಯೋಗಾಭ್ಯಾಸಕ್ಕೆ ಬರುವವರು ಸರಳವಾದ ಉಡುಪು ಧರಿಸಿ ಯೋಗಾ ಮ್ಯಾಟ್ ಅಥವಾ ಜಮಖಾನೆಯೊಂದಿಗೆ ಆಗಮಿಸಬೇಕು ಎಂದು ಹೇಳಿದರು.
ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡೊಳ್ಳಿನ, ಜಿಪಂ ಸ್ವಚ್ಛಭಾರತ ಮಿಷನ್ ಸಹಾಯಕ ನಿರ್ದೇಶಕ ಗಿರೀಶ ಕೋರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ನೆಲವಗಿ, ಡಾ| ವಿ.ಡಿ. ಕರ್ಪೂರಮಠ, ಜಿಲ್ಲಾ ಆಯುಷ್ ಫೆಡರೇಷನ್ ಅಧ್ಯಕ್ಷ ಡಾ| ರವೀಂದ್ರ, ಆಯುಷ್ ಇಲಾಖೆ ಸಹಾಯಕ ಆಡಳಿತಾಧಿಕಾರಿ ಅಶೋಕ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ