ಯೋಗವೇ ಆರೋಗ್ಯದ ರಹಸ್ಯ: ಅನಿಲ್
Team Udayavani, May 21, 2019, 12:58 PM IST
ಧಾರವಾಡ: ಮನಸ್ಸು ಮತ್ತು ಶರೀರದ ಸಂಪೂರ್ಣ ಶಕ್ತಿಯನ್ನು ಜಾಗೃತಗೊಳಿಸುವ ಸಾಧನೆಯೇ ಯೋಗ. ಪ್ರತಿಯೊಬ್ಬರು ಯೋಗಾಭ್ಯಾಸವನ್ನು ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯವಂತರಾಗಬೇಕು ಎಂದು ಹೃದಯ ರೋಗ ತಜ್ಞ ಡಾ| ಅನಿಲ್ ಹನಮಂತಗೌಡ ಹೇಳಿದರು.
ಸಾಧನಕೇರಿ ದ.ರಾ. ಬೇಂದ್ರೆ ಉದ್ಯಾನವನದಲ್ಲಿ ಸಾಧನಕೇರಿ ಪತಂಜಲಿ ಯೋಗ ಸಮಿತಿ ಆಯೋಜಿಸಿದ್ದ ಯೋಗ ಶಿಬಿರದ 84ನೇ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು. ಆಧ್ಯಾತ್ಮಿಕ, ವೇದಾಂತ, ಆತ್ಮಜ್ಞಾನವನ್ನು ತಿಳಿಯ ಬೇಕು. ಆಧ್ಯಾತ್ಮಕ ವಿಜ್ಞಾನಕ್ಕೆ ನಾವು ಯೋಗ ಎಂದು ಕರೆಯುತ್ತೇವೆ. ಪತಂಜಲಿ ಯೋಗ ಅಷ್ಠಾಂಗ ಸೂತ್ರಗಳಿಂದ ಕೂಡಿದೆ. ಯೋಗ ಶಾಂತ ಮನಸ್ಸಿನಿಂದ ಮಾಡಬೇಕು. ಮನುಷ್ಯ ತನ್ನ ವಿಚಾರಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಪ್ರಾಣಾಯಾಮ ಮಾಡಬೇಕು ಎಂದರು. ಕಾರ್ಯಕ್ರಮ ಉದ್ಘಾಟಿಸಿದ ಡಾ| ಗುರುಚಿದಂಬರ ಟಕ್ಕಳಕಿ ಮಾತನಾಡಿ, ಸಂಸ್ಕೃತ, ಸಂಸ್ಕೃತಿ ಮತ್ತು ಸಂಸ್ಕಾರದ ಬಗ್ಗೆ ಪ್ರತಿಯೊಬ್ಬರಿಗೂ ತಿಳಿವಳಿಕೆ ಮೂಡಿಸುವುದು ಅತ್ಯಂತ ಮಹತ್ವವಾಗಿದೆ. ಪಾಲಕರು ತಮ್ಮ ಮಕ್ಕಳಿಗೆ ಸಂಸ್ಕೃತ ಅಭ್ಯಾಸ ಮಾಡಿಸಬೇಕು ಎಂದು ಹೇಳಿದರು.
ಶಂಕರ ಬಸವರೆಡ್ಡಿ ಮಾತನಾಡಿ, ಈ ವಾರ್ಡ್ನ ಪ್ರತಿಯೊಂದು ಬಡಾವಣೆಗಳಲ್ಲಿ ಯೋಗ ಕೇಂದ್ರ ಆರಂಭಿಸಲು ಉದ್ದೇಶಿಸಲಾಗಿದೆ. ಇದಕ್ಕೆ ನಾಗರಿಕರು ಪ್ರೋತ್ಸಾಹ ನೀಡಬೇಕು ಎಂದರು.
ಸಾಧನಕೇರಿ ಪತಂಜಲಿ ಯೋಗ ಸಮಿತಿ ಕೇಂದ್ರದ ಮುಖ್ಯಸ್ಥ ಹಣಮಂತರಾವ್ ಟಕ್ಕಳಕಿ ಮಾತನಾಡಿದರು. ಡಾ|ಅನಿಲ್ ಹನಮಂತಗೌಡ, ಹಣಮಂತರಾವ್ ಟಕ್ಕಳಕಿ ಹಾಗೂ ಡಾ|ಗುರು ಚಿದಂಬರ ಅವರನ್ನು ಸನ್ಮಾನಿಸಲಾಯಿತು. ಕೃಷಿ ವಿವಿ ವಿಶ್ರಾಂತ ಕುಲಪತಿ ಡಾ| ಕೆ.ಜಿ. ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಬಸವರಾಜ ಕಡೆಕರ್ ಸ್ವಾಗತಿಸಿದರು. ಎಂ.ಡಿ. ಪಾಟೀಲ ಪರಿಚಯಿಸಿದರು. ಕಾಶೀನಾಥ ಹಂದ್ರಾಳ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
MUST WATCH
ಹೊಸ ಸೇರ್ಪಡೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ