ಎರಡು ದಶಕದಿಂದ ಯೋಗ-ಸ್ಕೇಟಿಂಗ್‌ ತರಬೇತಿ

30 ವರ್ಷಗಳ ಹಿಂದೆ ಗೋಕರ್ಣದ ನಾಗರಾಜ ಅವರಿಂದ ಯೋಗಾಭ್ಯಾಸ | ಮಾಜಿ ಮುಖ್ಯ ಮಂತ್ರಿ ಕುಮಾ ರ ಸ್ವಾಮಿ ಸೇರಿದಂತೆ ನೂರಾರು ಜನ ರಿಗೆ ಯೋಗ ಪಾಠ

Team Udayavani, Jun 21, 2021, 4:15 PM IST

011718hub-15

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕರಿಗೆ ಯೋಗ ತರಬೇತಿ ನೀಡಿದ್ದಲ್ಲದೆ, ಕಳೆದ 20 ವರ್ಷಗಳಿಂದ ಯೋಗ ಹಾಗೂ ಮಕ್ಕಳಿಗೆ ಸ್ಕೇಟಿಂಗ್‌ ತರಬೇತಿಯಲ್ಲಿ ಯೋಗಗುರು ಈರಣ್ಣ ಕಾಡಪ್ಪನವರ ತೊಡಗಿಕೊಂಡಿದ್ದಾರೆ.

ವಿವಿಧ ಸಂಘ-ಸಂಸ್ಥೆಯವರು, ಅಂಧ ಮಕ್ಕಳು ಸೇರಿದಂತೆ ನೂರಾರು ಜನರಿಗೆ ಯೋಗ ತರಬೇತಿ ನೀಡಿದ್ದು, ಈಗಲೂ ಯೋಗ ತರಬೇತಿ ಮುಂದುವರಿಸಿದ್ದಾರೆ. 30 ವರ್ಷಗಳ ಹಿಂದೆ ಗೋಕರ್ಣದ ನಾಗರಾಜ ದೇವತೆ ಅವರಿಂದ ಯೋಗ ಕಲಿತಿದ್ದರು. ಯೋಗ ಮತ್ತು ವ್ಯಾಯಾಮ ಎರಡೂ ಒಂದೇ ಎಂಬ ಭಾವನೆಯಿಂದ ಕೆಲದಿನ ಯೋಗಾಭ್ಯಾಸ ಬಿಟ್ಟಿದ್ದರು. ನಂತರದಲ್ಲಿ ಧರ್ಮಸ್ಥಳದ ಶಾಂತಿವನ ಟ್ರಸ್ಟ್‌ನ ರಾಘವೇಂದ್ರ ಪೈ ಎನ್ನುವವರು ಹುಬ್ಬಳ್ಳಿಗೆ ಆಗಮಿಸಿದ್ದಾಗ ಅವರಿಂದ ಮತ್ತೆ ಯೋಗಾಭ್ಯಾಸ ಕಲಿತಿದ್ದರು.

ಪೈ ಅವರು ಹುಬ್ಬಳ್ಳಿಯಲ್ಲಿ ಕೆಲ ದಿನ ಯೋಗ ತರಬೇತಿ ಶಿಬಿರ ಮುಗಿಸಿ ಹಿಂದಿರುವಾಗ, ಇನ್ನು ಮುಂದೆ ತಮಗೆ ಯೋಗ ತರಬೇತಿ ನೀಡುವವರು ಯಾರು ಎಂದು ಶಿಬಿರಾರ್ಥಿಗಳು ಕೇಳಿದರು. ಆಗ ರಾಘವೇಂದ್ರ ಪೈ ಅವರು, ನನ್ನನ್ನು ತೋರಿಸಿ ಇವರು ನಿಮಗೆ ತರಬೇತಿ ನೀಡುತ್ತಾರೆ ಎಂದು ಹೇಳಿದ್ದರು. ಅಂದಿನಿಂದ ಆರಂಭಗೊಂಡ ನನ್ನ ಯೋಗ ತರಬೇತಿ ಪಯಣ ಇನ್ನೂ ಮುಂದುವರಿದಿದೆ ಎನ್ನುತ್ತಾರೆ ಈರಣ್ಣ ಕಾಡಪ್ಪನವರ. ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಹುಬ್ಬಳ್ಳಿಯಲ್ಲಿ ಮನೆ ಮಾಡಿದ್ದಾಗ ಅವರಿಗೂ ಕೆಲ ದಿನ ಯೋಗ ತರಬೇತಿ ನೀಡಿದ್ದೆ.

ಲಯನ್ಸ್‌ ಕ್ಲಬ್‌, ಇನ್ನಿತರ ಸಂಘ-ಸಂಸ್ಥೆಗಳ ಮೂಲಕ ನೂರಾರು ಜನರಿಗೆ ಯೋಗ ತರಬೇತಿ ನೀಡಿದ್ದೇನೆ. ಮಕ್ಕಳಿಗೆ ಯೋಗ ಜತೆಗೆ ಸ್ಕೇಟಿಂಗ್‌ ತರಬೇತಿಯೂ ನೀಡುತ್ತಿದ್ದೇನೆ. ನನ್ನಿಂದ ತರಬೇತಿ ಪಡೆದ ಮಕ್ಕಳು ಮೈಸೂರು ದಸರಾ ಸಂದರ್ಭದಲ್ಲಿ 5 ಕಿಮೀವರೆಗೆ ಸ್ಕೇಟಿಂಗ್‌ ಮೇಲೆ ಯೋಗ ಪ್ರದರ್ಶನ ನೀಡಿದ್ದು ಹೆಮ್ಮೆಯ ಸಂಗತಿ. ಯೋಗದ ಕಲಿಕೆ ಮುಗಿಯಿತು ಎನ್ನುವಂತಿಲ್ಲ. ಕಲಿಕೆ ನಿರಂತರ. ಯೋಗದಿಂದ ಉತ್ತಮ ಆರೋಗ್ಯ ಸಾಧ್ಯ ಎಂಬುದು ಈರಣ್ಣ ಕಾಡಪ್ಪ ಅವರ ಅನಿಸಿಕೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.