ನಾಳೆ ಎಲ್ಲೆಡೆ ಯೋಗಾ ಯೋಗ

•ರಾಜ್ಯಾದ್ಯಂತ ಯೋಗಮಯ ಕರ್ನಾಟಕ ಅಭಿಯಾನ•ಹು-ಧಾದಲ್ಲಿ 100 ಯೋಗ ಕೇಂದ್ರ ಸ್ಥಾಪಿಸುವ ಸಂಕಲ್ಪ

Team Udayavani, Jun 20, 2019, 9:21 AM IST

hubali-tdy-3..

ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ನಗರದ ಜಗದ್ಗುರು ಗಂಗಾಧರ ಪದವಿ ಪೂರ್ವ ಮಹಾವಿದ್ಯಾಲಯ ವಿದ್ಯಾರ್ಥಿನಿ ಪೂಜಾ ತಳವಾರ ಅವರನ್ನು ಕಾಲೇಜು ವತಿಯಿಂದ ಸತ್ಕರಿಸಲಾಯಿತು.

ಹುಬ್ಬಳ್ಳಿ: ಹರಿದ್ವಾರದ ಪತಂಜಲಿ ಯೋಗ ಪೀಠ ಹಾಗೂ ಪತಂಜಲಿ ಯೋಗ ಸಮಿತಿ ಕರ್ನಾಟಕದ ಆಶ್ರಯದಲ್ಲಿ ಜಿಲ್ಲಾ ಪತಂಜಲಿ ಯೋಗ ಸಮಿತಿ, ವಿಆರ್‌ಎಲ್ ಸಮೂಹ ಸಂಸ್ಥೆ ಸಹಯೋಗದಲ್ಲಿ 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಬೆಳಗಿನ 5:30ಗಂಟೆಗೆ ಇಲ್ಲಿನ ದೇಶಪಾಂಡೆ ನಗರದ ಕರ್ನಾಟಕ ಜಿಮ್‌ಖಾನಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪತಂಜಲಿ ಯೋಗ ಸಮಿತಿಯ ಕರ್ನಾಟಕ ರಾಜ್ಯ ಪ್ರಭಾರಿ ಭವರಲಾಲ್ ಆರ್ಯ, ಪತಂಜಲಿ ಯೋಗ ಪೀಠ ಮುಂದಿನ ವರ್ಷ 25ನೇ ವಸಂತ ಆಚರಿಸಿಕೊಳ್ಳುತ್ತದೆ. 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಿಂದ 6ನೇ ದಿನಾಚರಣೆ ವರೆಗೆ ವರ್ಷಂಪೂರ್ತಿ ಯೋಗ ಉಚಿತ ಶಿಬಿರಗಳನ್ನು ಆಯೋಜಿಸಲಾಗುವುದು.

ರಾಜ್ಯದಲ್ಲಿ ಈಗಾಗಲೇ ಇಂತಹ 1,100 ಕೇಂದ್ರಗಳಿದ್ದು, 6ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯೊಳಗೆ ಒಟ್ಟು 2,200 ಕೇಂದ್ರಗಳನ್ನು ಹಾಗೂ ಹು-ಧಾದಲ್ಲಿ 100 ಕೇಂದ್ರಗಳನ್ನು ಸ್ಥಾಪಿಸುವ ಸಂಕಲ್ಪವಿದೆ. ಈಗಾಗಲೇ ಧಾರವಾಡದಲ್ಲಿ 35, ಹುಬ್ಬಳ್ಳಿಯಲ್ಲಿ 10 ಯೋಗ ಶಿಬಿರಗಳಿವೆ. ವರ್ಷಂಪೂರ್ತಿ ರಾಜ್ಯಾದ್ಯಂತ ಯೋಗಮಯ ಕರ್ನಾಟಕ ಅಭಿಯಾನ ಆಯೋಜಿಸಲಾಗುವುದು ಎಂದರು.

ಜೂ. 21ರಂದು ಕರ್ನಾಟಕ ಜಿಮ್‌ಖಾನಾ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದ ವೇಳೆ ಹೆಸರು ನೋಂದಾಯಿಸಿದವರಿಗೆ 50 ಜನರ ಒಂದು ಬ್ಯಾಚ್ ಮಾಡಿ, ಅವರಿಗೆ 25 ದಿನಗಳ ಕಾಲ ಯೋಗ ಶಿಕ್ಷಕರ ವಿಶೇಷ ತರಬೇತಿ ಶಿಬಿರ ನಡೆಸಲಾಗುವುದು. ಅವರು ನಂತರ ಅವಳಿ ನಗರದ ವಿವಿಧ ವಾರ್ಡ್‌ಗಳಲ್ಲಿ ಯೋಗ ಶಿಬಿರ ನಡೆಸಿಕೊಡಲಿದ್ದಾರೆ. ಸಮಿತಿಯಿಂದ ಈಗಾಗಲೇ ರಾಜ್ಯದಲ್ಲಿ 5 ಸಾವಿರ ಯೋಗ ಶಿಕ್ಷಕರಿಗೆ ಪ್ರಮಾಣಪತ್ರ ನೀಡಲಾಗಿದೆ ಎಂದರು.

ಪತಂಜಲಿ ಯೋಗ ಸಮಿತಿಯ ರಮೇಶ ಸುಲಾಖೆ, ಕೃಷ್ಣಾ, ಸಚಿನ ಪಾಟೀಲ ಮೊದಲಾದವರಿದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.