ಯುವಶಕ್ತಿ ಭಾರತದ ದೊಡ್ಡಶಕ್ತಿ; ಡಾ|ಅಜಿತ ಪ್ರಸಾದ

ಸಾಮಾಜಿಕ ಕಾರ್ಯಗಳನ್ನು ಮಾಡುವ ಯುವ ಸಮುದಾಯದ ಗುಂಪೇ ಈ ಎನ್‌ಎಸ್‌ಎಸ್‌

Team Udayavani, Feb 23, 2023, 5:48 PM IST

ಯುವಶಕ್ತಿ ಭಾರತದ ದೊಡ್ಡಶಕ್ತಿ; ಡಾ|ಅಜಿತ ಪ್ರಸಾದ

ಧಾರವಾಡ: ಭಾರತದ ದೊಡ್ಡ ಶಕ್ತಿಯೇ ಯುವ ಶಕ್ತಿಯಾಗಿದ್ದು, ಇದರ ಸದ್ಬಳಕೆ ಆಗಬೇಕಾದರೆ ಯುವಕರಲ್ಲಿ ದೇಶ ಪ್ರೇಮ ಜಾಗೃತಿ, ದೇಶದ ಬಗ್ಗೆ ಗೌರವ ಮೂಡಿಸುವ ಕಾರ್ಯ ಆಗಬೇಕಿದೆ ಎಂದು ಜೆಎಸ್‌ಎಸ್‌ನ ಕಾರ್ಯದರ್ಶಿ ಡಾ|ಅಜಿತ ಪ್ರಸಾದ ಹೇಳಿದರು.

ಜೆಎಸ್‌ಎಸ್‌ ಕೆಹೆಚ್‌ಕೆ ಕಬ್ಬೂರ ತಾಂತ್ರಿಕ ಮಹಾವಿದ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕೋಶದ ಸಹಯೋಗದಲ್ಲಿ ನಗರದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿ  ಆವರಣದಲ್ಲಿ ಹಮ್ಮಿಕೊಂಡ ಎನ್ನೆಸ್ಸೆಸ್‌ನ ರಾಷ್ಟ್ರೀಯ ಭಾವೈಕ್ಯತಾ ಶಿಬಿರ-2023 ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ದೇಶ ರಾಷ್ಟ್ರೀಯ ಭಾವೈಕ್ಯತೆಗೆ ಅತ್ಯುತ್ತಮ ಉದಾಹರಣೆ. ಹಲವಾರು ಭಾಷೆ, ಆಚರಣೆ, ಆಹಾರ, ವೈವಿಧ್ಯತೆಯ ಮಧ್ಯೆಯೂ ನಾವು ಭಾರತೀಯರು ಎಂಬುದು ನಮ್ಮ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು. ಭಾರತ ಒಂದು ಬಲಿಷ್ಠ ರಾಷ್ಟ್ರವಾಗಿ ಹೊರ ಹೊಮ್ಮಬೇಕು. ಈ ನಿಟ್ಟಿನಲ್ಲಿ ಇಂತಹ ಶಿಬಿರಗಳು ಅತ್ಯವಶ್ಯ. ಇಂದಿನ ಯುವಕರಲ್ಲಿ ಸ್ವಾತಂತ್ರ್ಯ ಹೋರಾಟದ ಚಿತ್ರಣ, ಸೈನಿಕರ ಬಲಿದಾನ, ರೈತರ ಕಷ್ಟ-ಕಾರ್ಪಣ್ಯಗಳ ಬಗ್ಗೆ ಮಾಹಿತಿ ದೊರೆಯಬೇಕು ಎಂದರು.

ಎನ್‌ಎಸ್‌ಎಸ್‌ ಪ್ರಾದೇಶಿಕ ನಿರ್ದೇಶಕ ಕೆ.ವಿ.ಖಾದ್ರಿ ನರಸಿಂಹಯ್ಯ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ 1969ರಲ್ಲಿ ಮಹಾತ್ಮ ಗಾಂಧೀಜಿ ಅವರ 100ನೇ ಜನ್ಮದಿನಾಚರಣೆ ಅಂಗವಾಗಿ ಯುವಕರಲ್ಲಿ ಸಾಮಾಜಿಕ ವ್ಯಕ್ತಿತ್ವ ವಿಕಸನವಾಗಲಿ ಎಂಬ ಸದುದ್ದೇಶದಿಂದ ಆರಂಭಿಸಲಾಯಿತು. ಜಾತಿ, ಮತ, ಪಂಥಗಳ ಭೇದವಿಲ್ಲದೆ ಸಾಮಾಜಿಕ ಕಾರ್ಯಗಳನ್ನು ಮಾಡುವ ಯುವ ಸಮುದಾಯದ ಗುಂಪೇ ಈ ಎನ್‌ಎಸ್‌ಎಸ್‌ ಎಂದರು.

ಕರ್ನಲ್‌ ವಿವೇಕ್‌ ಅಳಗವಾಡಿ ಮಾತನಾಡಿ, ನಾನು ಕನ್ನಡಿಗ, ತಮಿಳಿಗ, ಮರಾಠಿಗ ಎನ್ನುವ ಬದಲು ನಾನು ಭಾರತೀಯ ಎಂಬುದಾಗಿ ಹೆಮ್ಮೆಯಿಂದ ಹೇಳಿ. ರಾಷ್ಟ್ರೀಯ ಭಾವೈಕ್ಯತೆಗೆ ಅತ್ಯುತ್ತಮ ಉದಾಹರಣೆ ಎಂದರೆ ಭಾರತೀಯ ಸೇನೆ ಎಂದರು.

ಪ್ರಗತಿಪರ ರೈತ ಮಹಿಳೆ ದಾಕ್ಷಾಯಿಣಿ ರಾಮನಗೌಡ ಮಾತನಾಡಿ, ರೈತನಿಗೆ ಯಾವುದೇ ಜಾತಿ, ಭಾಷೆ, ಪಂಗಡಗಳಿಲ್ಲ. ಆತ ಬೆಳೆದ ಬೆಳೆಯ ಮೇಲೆ ಯಾವುದೇ ಧರ್ಮದ ಲೇಪನವಿರಲ್ಲ. ದೇಶ ಕಾಯುವ ಸೈನಿಕ, ಅನ್ನ ನೀಡುವ ರೈತನನ್ನು ಪೂಜ್ಯನೀಯ ಸ್ಥಾನದಲ್ಲಿ ನೋಡಬೇಕು ಎಂದರು. ಡಾ|ಗುರುಪ್ರಸಾದ ಹೂಗಾರ, ಡಾ|ಎಮ್‌.ಬಿ ದಳಪತಿ ಪ್ರಾಸ್ತಾವಿಕ ಮಾತನಾಡಿದರು. ವಸಂತ ದೇಸಾಯಿ ಅಧ್ಯಕ್ಷತೆ ವಹಿಸಿದ್ದರು. ಸೂರಜ್‌ ಜೈನ, ಮಹಾವೀರ ಉಪಾದ್ಯೆ, ವಿ.ಕೆ. ಭರಣಿ ಇದ್ದರು. ಈರಪ್ಪ ಪತ್ತಾರ್‌ ಸ್ವಾಗತಿಸಿದರು, ವಸಂತ್‌ ಐಹೊಳಿ ವಂದಿಸಿದರು.

ಇದಕ್ಕೂ ಮುನ್ನ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಪಾರಂಪರಿಕ ಉಡುಗೆಗಳೊಂದಿಗೆ ಮೆರವಣಿಗೆಯಲ್ಲಿ ತೆರಳಿದ್ದು ಆಕರ್ಷಕವಾಗಿತ್ತು. ದಕ್ಷಿಣ ಭಾರತದ 05 ರಾಜ್ಯಗಳಿಂದ 150 ವಿದ್ಯಾರ್ಥಿಗಳು ಈ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.