ಜಿಪಂ ಅಧ್ಯಕ್ಷೆ-ಸದಸ್ಯರು-ಸಿಇಒ ಜಟಾಪಟಿ


Team Udayavani, Jan 19, 2018, 12:50 PM IST

h1-jilla.jpg

ಧಾರವಾಡ: ಚೆಕ್‌ಡ್ಯಾಂ, ಗ್ರಾಮೀಣ ಭಾಗಕ್ಕೆ ತುರ್ತು ಕುಡಿಯುವ ನೀರಿನ ಯೋಜನೆಗೆ ಜಿಪಂ ಸಿಇಒ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿ ಜಿಪಂ  ಅಧ್ಯಕ್ಷರು ಸೇರಿದಂತೆ ಎಲ್ಲ ಪಕ್ಷಗಳ ಸದಸ್ಯರು ಸಾಮಾನ್ಯ ಸಭೆಯನ್ನೇ ಬಹಿಷ್ಕರಿಸಿ ಹೊರ ನಡೆದ ಘಟನೆ ಗುರುವಾರ ಜಿಪಂನಲ್ಲಿ ನಡೆದಿದೆ. 

ನಗರದ ಜಿಪಂ  ಸಭಾಂಗಣದಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರು ಸೇರಿದಂತೆ ಸದಸ್ಯರ ಹಾಗೂ ಜಿಪಂ ಸಿಇಒ ಅವರ ಮಧ್ಯೆ ಬೇರೆ ಬೇರೆ  ವಿಷಯಗಳ ಚರ್ಚೆ ವೇಳೆಯಲ್ಲಿ ಜಟಾಪಟಿ ನಡೆಯುತ್ತಲೇ ಕೊನೆಗೆ ಮಧ್ಯಾಹ್ನದ ನಂತರ ಸಿಇಒ ಅವರ ವಿರುದ್ಧ ಸದಸ್ಯರೆಲ್ಲರೂ ಸಿಟ್ಟಿಗೆದ್ದು ಸಭೆ ಬಹಿಷ್ಕರಿಸಿ  ಹೊರ ನಡೆದರು. 

ಗ್ರಾಮೀಣ ಪ್ರದೇಶದ ರೈತರಿಗೆ ಅನುಕೂಲ ಮಾಡಿ ಕೊಡುವ ನಿಟ್ಟಿನಲ್ಲಿ ನರೇಗಾ ಯೋಜನೆಯಡಿ ಚೆಕ್‌ಡ್ಯಾಂ ನಿರ್ಮಾಣಕ್ಕೆ  ಅನುಮೋದನೆ ಕೊಡುವ ವಿಷಯಕ್ಕೆ ಸಂಬಂಧಿಸಿದಂತೆ ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ ಮಾತನಾಡಿ, ಸಿಇಒ ಅವರ ಮಾರ್ಗದರ್ಶನದಂತೆಯೇ ಪ್ರತಿ ಜಿಪಂ  ಕ್ಷೇತ್ರಕ್ಕೆ ನಾಲ್ಕು ಚೆಕ್‌ಡ್ಯಾಂ ನಿರ್ಮಾಣಕ್ಕಾಗಿ ಆಯಾ ಗ್ರಾಪಂಗಳಿಂದ ಠರಾವು ಮಾಡಿ ವರದಿ ಸಲ್ಲಿಸಲಾಗಿದೆ.

ಅದಕ್ಕಾಗಿ ಸಾಮಾನ್ಯ ಸಭೆಯಲ್ಲಿ  ಚರ್ಚಿಸಲಾಗಿತ್ತು. ಆಗ ಸಿಇಒ ಅವರೇ ಚೆಕ್‌ಡ್ಯಾಂಗೆ ಅವಕಾಶ ನೀಡುತ್ತೇವೆಂದು ಹೇಳಿದ್ದರು. ಈಗ ಚೆಕ್‌ಡ್ಯಾಂ ಕೊಡಲು ಬರೋದಿಲ್ಲ ಅಂದರೆ ಹೇಗೆ? ಈಗ  ಮತ್ತೆ ಗ್ರಾಪಂ ವಾರ್ಷಿಕ ಕ್ರಿಯಾ ಯೋಜನೆಯಲ್ಲೇ ನಮೂದಿಸಿಕೊಂಡು ಬನ್ನಿ ಎಂದು ಹೇಳುವುದು ಎಷ್ಟು ಸರಿ? ಎಂದು ಖಾರವಾಗಿ ಪ್ರಶ್ನಿಸಿದರು. 

ಇದಕ್ಕೆ  ಉತ್ತರಿಸಿದ ಜಿಪಂ ಸಿಇಒ ಸ್ನೇಹಲ್‌ ರಾಯಮಾನೆ, ನರೇಗಾ ಯೋಜನೆಯಡಿ ಚೆಕ್‌ಡ್ಯಾಂ ನಿರ್ಮಿಸಲು 60:40 ಅನುಪಾತ ಬೇಕು. ಆದರೆ ಈಗ ಸಲ್ಲಿಸಿರುವ  ಪ್ರಸ್ತಾವನೆಗಳಲ್ಲಿ ಆ ಅನುಪಾತವೇ ಸರಿ ಹೊಂದುತ್ತಿಲ್ಲ. ಈಗಂತೂ ಸದ್ಯ 273 ಚೆಕ್‌ ಡ್ಯಾಂಗಳ ಪಟ್ಟಿ ನಮ್ಮ ಬಳಿಯೇ ಇದ್ದು, 

ಗ್ರಾಪಂಗೆ  ಒಂದರಂತೆ ಆಯಾ ಗ್ರಾಪಂಗಳ ವಾರ್ಷಿಕ ಕ್ರಿಯಾ ಯೋಜನೆಗಳಲ್ಲಿ ಅಳವಡಿಸಿಕೊಂಡರೆ ಮಾತ್ರ ಚೆಕ್‌ ಡ್ಯಾಂ ನಿರ್ಮಾಣಕ್ಕೆ ಅನುಮೋದನೆ ನೀಡುವುದಾಗಿ ಹೇಳಿದರು. ಜಿಪಂ ಸಿಇಒ ಉತ್ತರಕ್ಕೆ ತೃಪ್ತರಾಗದ ಅಧ್ಯಕ್ಷರು ಹಾಗೂ ಸದಸ್ಯರು, ಎನ್‌ ಆರ್‌ಇಜಿ ಯೋಜನೆಯಡಿ ಚೆಕ್‌ ಡ್ಯಾಂ ನಿರ್ಮಾಣ  ಅಸಾಧ್ಯವೆಂದಾದರೆ ಈ ಹಿಂದೆ ಯಾಕೆ ಭರವಸೆ ನೀಡಿದ್ದೀರಿ?

ನಿಮ್ಮ ಸೂಚನೆ ಮೇರೆಗೆಯೇ ಭೂ ವಿಜ್ಞಾನಿಗಳು ಹಾಗೂ ಇಒಗಳು ಸರ್ವೇ ಕಾರ್ಯ ನಡೆಸಿಯಾಗಿದೆ. ಅಷ್ಟೇ ಏಕೆ ಗ್ರಾಪಂಗಳಲ್ಲಿ  ಠರಾವು ಪಾಸ್‌ ಆಗಿದೆ. ಈಗ ಇದ್ದಕ್ಕಿದ್ದಂತೆಹೀಗೆ ಮಾಡಿದರೆ ಹೇಗೆ ? ನಿಮಗೆ ಚೆಕ್‌ ಡ್ಯಾಂ ಕೊಡಲು  ಆಗುವುದೋ, ಇಲ್ಲವೋ ತಿಳಿಸಿ. ಮುಂದೇನು ಮಾಡಬೇಕು ನಮಗೆ ಗೊತ್ತಿದೆ ಎಂದು ಸಿಇಒ ಸ್ನೇಹಲ್‌ರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. 

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.